Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ
Team Udayavani, May 10, 2024, 6:10 AM IST
ಮಂಗಳೂರು: ವಿದೇಶದಲ್ಲಿರುವ ವ್ಯಕ್ತಿಯೊಬ್ಬರು ಕದ್ರಿ ಕಂಬಳ ನಿವಾಸಿಯೊಬ್ಬರನ್ನು ಅಪಹರಿಸಲು ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಕದ್ರಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಪಾಣೆಮಂಗಳೂರು ನಿವಾಸಿಗಳಾದ ಪ್ರಜ್ವಲ್ ಮತ್ತು ಅಕ್ಷಯ್ ಬಂಧಿತ ಆರೋಪಿಗಳು.
ಕದ್ರಿಯ ವ್ಯಕ್ತಿಯೋರ್ವರು ವಿದೇಶದಲ್ಲಿರುವ ವ್ಯಕ್ತಿಯೋರ್ವರಿಂದ 18 ಲ.ರೂ. ಸಾಲ ಪಡೆದುಕೊಂಡಿದ್ದರು. ಅದರಲ್ಲಿ 12.05 ಲ. ರೂ. ಸಾಲ ಮರುಪಾವತಿ ಮಾಡಿದ್ದರು. ಉಳಿದ ಹಣ ನೀಡಲು ಬಾಕಿಯಿತ್ತು. ಇದೇ ವಿಚಾರದಲ್ಲಿ ವಿದೇಶದಲ್ಲಿದ್ದ ವ್ಯಕ್ತಿ ಆರೋಪಿಗಳಿಗೆ ಸಾಲ ಬಾಕಿಯಿದ್ದ ವ್ಯಕ್ತಿಯನ್ನು ಅಪಹರಿಸಲು ಸುಪಾರಿ ನೀಡಿದ್ದಾನೆ. ಅದರಂತೆ ಆರೋಪಿಗಳು ಅಪಹರಣಕ್ಕೆ ಯತ್ನಿಸಿದ್ದರು. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು
“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’
Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ
Kerala “ವೆಸ್ಟ್ನೈಲ್’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ