ಕೃಷ್ಣಾಪುರ: ಅಂಗಡಿಗೆ ನುಗ್ಗಿ ಮಾಲಕನ ಹತ್ಯೆ


Team Udayavani, Dec 25, 2022, 12:31 AM IST

ಕೃಷ್ಣಾಪುರ : ಅಂಗಡಿಗೆ ನುಗ್ಗಿ ಮಾಲಕನ ಹತ್ಯೆ

ಸುರತ್ಕಲ್‌: ಇಲ್ಲಿಗೆ ಸಮೀಪದ ಕೃಷ್ಣಾಪುರದ ಐದನೇ ಬ್ಲಾಕ್‌ನ ಫ್ಯಾನ್ಸಿ ಸ್ಟೋರ್‌ ಮಾಲಕ ಜಲೀಲ್‌(42) ಅವರಿಗೆ ಶನಿವಾರ ರಾತ್ರಿ ದುಷ್ಕರ್ಮಿಗಳಿಬ್ಬರು ಚೂರಿಯಿಂದ ಇರಿದಿದ್ದು, ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ರಾತ್ರಿ 8.30ರ ಸುಮಾರಿಗೆ ಗ್ರಾಹಕರ ಸೋಗಿನಲ್ಲಿ ಇಬ್ಬರು ಯುವಕರು ಅಂಗಡಿಗೆ ಬಂದಿದ್ದರು. ಓರ್ವ ಮಾಸ್ಕ್ ಧರಿಸಿದ್ದು, ಇನ್ನೋರ್ವ ಟವೆಲನ್ನು ಮುಖಕ್ಕೆ ಕಟ್ಟಿಕೊಂಡಿದ್ದ ಎನ್ನಲಾಗಿದೆ. ಕೃತ್ಯ ನಡೆಸಿ ದೂರದಲ್ಲಿ ನಿಲ್ಲಿಸಿದ್ದ ಬೈಕಿನಲ್ಲಿ ಪರಾರಿಯಾದರು.

ಓಡಿ ಬಂದು ಬಿದ್ದ ಜಲೀಲ್‌
ಇರಿತಕ್ಕೆ ಒಳಗಾದ ಜಲೀಲ್‌
ಬೊಬ್ಬೆ ಹಾಕಿ ಸಮೀಪದ ಅಂಗಡಿ ಯತ್ತ ಓಡುತ್ತಾ ಬರುತ್ತಿದ್ದಾಗಲೇ ಕುಸಿದು ಬಿದ್ದರು. ಕೂಡಲೇ ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ಕರೆದೊ ಯ್ಯಲಾಯಿತು. ಅಲ್ಲಿ ಕೆಲವೇ ಹೊತ್ತಿನಲ್ಲಿ ಅವರು ಮೃತಪಟ್ಟರು.
ಕೃಷ್ಣಾಪುರ 9ನೇ ಬ್ಲಾಕ್‌ ನಿವಾಸಿ ಯಾಗಿದ್ದ ಜಲೀಲ್‌ ಪತ್ನಿಯನ್ನು ಅಗಲಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲು ಮಂಗಳೂರಿಗೆ ಸಾಗಿಸಲಾಗಿದೆ.

ಕಮಿಷನರ್‌ ಭೇಟಿ
ಆಸ್ಪತ್ರೆ ಹಾಗೂ ಘಟನ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ಪ್ರತ್ಯಕ್ಷದರ್ಶಿ ಗಳಿಂದ ಮಾಹಿತಿ ಪಡೆದುಕೊಂಡರು. ಮಾಧ್ಯಮದೊಂದಿಗೆ ಮಾತನಾ ಡಿದ ಅವರು, ಘಟನೆಗೆ ಕಾರಣ ಏನೆಂಬುದು ತನಿಖೆಯಿಂದ ತಿಳಿದು ಬರಬೇಕಿದೆ ಎಂದರು.

ಸಿಸಿ ಕೆಮರಾ ಇಲ್ಲ
ಘಟನ ಸ್ಥಳದಲ್ಲಿ ಸಿಸಿ ಕೆಮರಾ ಇಲ್ಲದಿರುವುದರಿಂದ ತತ್‌ಕ್ಷಣಕ್ಕೆ ಆರೋಪಿಗಳ ಮಾಹಿತಿ ಲಭ್ಯವಾಗಿಲ್ಲ. ಆದರೆ ಹತ್ತಿರದಲ್ಲಿರುವ ಇತರ ಸಿಸಿ ಟಿವಿಗಳ ಫ‌ೂಟೇಜ್‌ ಪರಿಶೀಲನೆ ನಡೆಯುತ್ತಿದ್ದೆ. ಅಲ್ಲಿ ಸಿಗುವ ಮಾಹಿತಿಯಂತೆ ಆರೋಪಿಗಳ ಪತ್ತೆಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಕಮಿಷನರ್‌ ತಿಳಿಸಿದರು.

ಪರಿಸ್ಥಿತಿ ಶಾಂತ
ಪ್ರಸ್ತುತ ಪರಿಸ್ಥಿತಿ ಶಾಂತವಾಗಿದೆ. ಬಿಗು ಬಂದೋ ಬಸ್ತ್ ಗೆ ಕ್ರಮ ಕೈಗೊಳ್ಳಲಾಗಿದೆ. ಅಗತ್ಯವಿದ್ದಲ್ಲಿ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಸ್ಥಳೀಯವಾಗಿ ಪಣಂಬೂರು ಉಪವಿಭಾಗ ವ್ಯಾಪ್ತಿಯಲ್ಲಿ ಸೆಕ್ಷನ್‌ 144 ಜಾರಿಗೊಳಿಸಲಾಗುವುದು.

ಕ್ರಿಸ್ಮಸ್‌ ಹಬ್ಬ ಆಚರಣೆಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಯಾವುದೇ ತಪ್ಪು ಮಾಹಿತಿ, ಸಂದೇಶಗಳಿಗೆ ಕಿವಿಗೊಡಬಾರದು. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಲಾಖೆಯೊಂದಿಗೆ ಸಹಕರಿಸಬೆಕು ಎಂದು ಮನವಿ ಮಾಡಿದರು.

ಘಟನ ಸ್ಥಳಕ್ಕೆ ಮಾಜಿ ಶಾಸಕ ಮೊದೀನ್‌ ಬಾವಾ, ಜಿಲ್ಲಾ ವಕ್ಫ್ ಆಧ್ಯಕ್ಷ ನಾಸೀರ್‌ ಲಕ್ಕೀಸ್ಟಾರ್‌, ಆಸ್ಪತ್ರೆಗೆ ಸಮುದಾಯದ ಧರ್ಮಗುರುಗಳು ಭೇಟಿ ನೀಡಿ ಪೊಲೀಸ್‌ ಆಯುಕ್ತರೊಂದಿಗೆ ಘಟನೆಯ ಕುರಿತು ಚರ್ಚಿಸಿದರು. ಘಟನೆಯನ್ನು ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಖಂಡಿಸಿದ್ದು. ಆರೋಪಿಗಳ ಶೀಘ್ರ ಪತ್ತೆಗೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೃಷ್ಣಾಪುರಕೊಲೆ ಪ್ರಕರಣ ಹಿನ್ನೆಲೆ: ಇಂದು ಬೆಳಗ್ಗೆ 6 ರಿಂದ ಡಿ.27ರ ಬೆಳಗ್ಗೆ 6 ರವರೆಗೆ ಸುರತ್ಕಲ್, ಪಣಂಬೂರು, ಬಜಪೆ, ಕಾವೂರು ಠಾಣಾ ವ್ಯಾಪ್ತಿಗಳಲ್ಲಿ ಸೆಕ್ಷನ್‌144 ನಂತೆ ನಿಷೇಧಾಜ್ಞೆ ಜಾರಿ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.