ಸುರತ್ಕಲ್: ಸಿನಿಮೀಯ ರೀತಿಯಲ್ಲಿ ಕಾರು ಚಲಾಯಿಸಲು ಹೋಗಿ ಫಜೀತಿಗೆ ಸಿಲುಕಿದ ಬೆಂಗಳೂರಿನ ಯುವಕರು
Team Udayavani, Jul 8, 2021, 10:58 AM IST
ಸುರತ್ಕಲ್: ಮೋಜಿಗಾಗಿ ಸಿನಿಮೀಯ ಮಾದರಿಯಲ್ಲಿ ಸಮುದ್ರ ಕಿನಾರೆಯಲ್ಲಿ ಕಾರು ಚಲಾಯಿಸಲು ಹೋಗಿ ಬೆಂಗಳೂರಿನ ಯುವಕರ ತಂಡ ಫಜೀತಿಗೆ ಸಿಲುಕಿಕೊಂಡ ಘಟನೆ ಸುರತ್ಕಲ್ ಗುಡ್ಡೆಕೊಪ್ಲ ಸಮುದ್ರ ಕಿನಾರೆಯಲ್ಲಿ ನಡೆದಿದೆ.
ಸುರತ್ಕಲ್ ಗುಡ್ಡೆಕೊಪ್ಲ ಸಮುದ್ರ ಕಿನಾರೆಯಲ್ಲಿ ಕಾರು ಚಲಾಯಿಸಿಕೊಂಡು ಕೆಟ್ಟು ನಿಂತ ಡ್ರಜ್ಜರ್ ಬಳಿ ಹೋಗುವ ಯೋಜನೆ ಬೆಂಗಳೂರಿನ ಯುವಕರ ತಂಡದಾಗಿತ್ತು. ಆದರೆ ಅತ್ತ ತೆರಳುತ್ತಿದ್ದಂತೆ ಕಾರು ಸಮುದ್ರದ ಮರಳಿನಲ್ಲಿ ಹೂತು ಹೋಗಿದೆ.
ಸಮುದ್ರ ಉಬ್ಬರ ಆರಂಭವಾಗಿ ಕಾರಿಗೆ ತೆರೆ ಅಪ್ಪಳಿಸುತ್ತಿದ್ದಂತೆ ಕಾರು ಕೊಚ್ಚಿಕೊಂಡು ಹೋಗುವ ಅಪಾಯ ಎದುರಾಯಿತು. ಈ ವೇಳೆ ಯುವಕರ ತಂಡಕ್ಕೆ ಭೀತಿ ಶುರುವಾಗಿ ಕಾರನ್ನು ಮೇಲೆತ್ತಲು ಕ್ರೇನ್ ತರಿಸುವ ಪ್ರಯತ್ನ ನಡೆಸಿದರು.
ಆದರೆ ಕ್ರೇನ್ ಸಮುದ್ರ ಕಿನಾರೆಗೆ ಬಂದರೆ ಅದೂ ಮರಳಲ್ಲಿ ಸಿಲುಕುವ ಸಾಧ್ಯತೆಯಿದ್ದರಿಂದ ಆ ಯೋಜನೆ ಕೂಡ ಸಫಲವಾಗಲಿಲ್ಲ. ಕೊನೆಗೆ ಸ್ಥಳೀಯರು ರಕ್ಷಣೆಗೆ ಮುಂದಾಗಿ ಕಾರನ್ನು ಮೇಲೆತ್ತಿ ದಡಕ್ಕೆ ತರುವಲ್ಲಿ ಯಶಸ್ವಿಯಾದರು.
ಮೀನುಗಾರ ಮುಂದಾಳು ಶ್ರೀಕಾಂತ್ ಸಾಲ್ಯಾನ್ ಗುಡ್ಡೆ ಕೊಪ್ಲ, ಕುಮಾರ್ ಸಾಲ್ಯಾನ್ ಗುಡ್ಡೆಕೊಪ್ಲ ಮೊದಲಾದವರು ಸಹಕರಿಸಿ ಯುವಕರಿಗೆ ಬುದ್ದಿವಾದ ಹೇಳಿ ಕಳುಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ