ಸುರತ್ಕಲ್ ಪೊಲೀಸರ ಕಾರ್ಯಾಚರಣೆ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 250 ಲೋಡ್ ಮರಳು ವಶ
Team Udayavani, Mar 19, 2023, 8:02 PM IST
ಸುರತ್ಕಲ್: ಸುರತ್ಕಲ್ ಪೊಲೀಸರು ರವಿವಾರ ನಡೆಸಿದ ಎರಡು ಪ್ರತ್ಯೇಕ ದಾಳಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 250 ಲೋಡ್ ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಮತ್ತು ಉಪ ಪೊಲೀಸ್ ನಿರೀಕ್ಷಕರುಗಳಾದ ಮಲ್ಲಿಕಾರ್ಜುನ್, ಅರುಣ್ ಕುಮಾರ್ ಡಿ , ಹಾಗೂ ಸಿಬಂದಿಗಳು ಸೇರಿ ಸುರತ್ಕಲ್ ಗ್ರಾಮದ ಮುಂಚೂರು ಎಂಬಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಸುಮಾರು 100 ಲೋಡ್ ನಷ್ಟು ಮರಳನ್ನು ವಶಕ್ಕೆ ಪಡೆದಿದ್ದಾರೆ ಅಲ್ಲದೆ ಮತ್ತೊಂದು ಪ್ರಕರಣದಲ್ಲಿ ಚೇಳ್ಯಾರು ಗ್ರಾಮದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿ ಸುಮಾರು 150 ಲೋಡ್ ನಷ್ಟು ಮರಳನ್ನು ವಶಕ್ಕೆ ಪಡೆದಿದ್ದಾರೆ ಇದರೊಂದಿಗೆ ಒಟ್ಟು 35 ಲಕ್ಷ ಮೌಲ್ಯದ ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣವನ್ನು ಎಮ್ ಎಮ್ ಅರ್ ಡಿ ಕಾಯ್ದೆಯಡಿಯಲ್ಲಿ ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನ ಅಧಿಕಾರಿಗಳಾದ ಕೋದಂಡರಾಮ ಮತ್ತು ಲಾಯ್ ರವರಿಗೆ ಹಸ್ತಾಂತರಿಸಲಾಗಿದೆ ಅಲ್ಲದೆ ಅಕ್ರಮವಾಗಿ ಮರಳು ದಾಸ್ತಾನು ಮಾಡಿದ್ದ ಭೂ ಮಾಲೀಕರ ವಿರುದ್ಧವೂ ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ಉಡುಪಿ ಜಿಲ್ಲಾ ಪೊಲೀಸರಿಂದ ”ಆಪರೇಷನ್ ಸನ್ ಸೆಟ್” ವಿಶೇಷ ಕಾರ್ಯಾಚರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ