ಸೌಕರ್ಯದ ಕೊರತೆ; ಸಮರ್ಪಕ ಸೇವೆ ಒದಗಿಸಲು ವಿಫಲ


Team Udayavani, Feb 27, 2019, 4:43 AM IST

27-february-1.jpg

ಸುರತ್ಕಲ್‌: ಇಲ್ಲಿಯ ಅಟಲ್‌ ಜನಸ್ನೇಹಿ ಕೇಂದ್ರದ ಅವ್ಯವಸ್ಥೆಯನ್ನು ಹೋಗಲಾಡಿಸಿ ಸಮರ್ಪಕ ಸೇವೆ ಒದಗಿಸುವಂತೆ ಸಾರ್ವಜನಿಕರು ಪದೇ ಪದೇ ಆಗ್ರಹಿಸಿದರೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮಾತ್ರ ಅಸಹಾಯಕರಾಗಿ ಕುಳಿತಿದ್ದಾರೆ! ಅಟಲ್‌ ಜನಸ್ನೇಹಿ ಕೇಂದ್ರದಲ್ಲಿ ಸಿಬಂದಿ ಕೊರತೆ, ಅಂತರ್ಜಾಲ ಪದೇ ಪದೇ ಕೈ ಕೊಡುವುದರಿಂದ ಜನರ ಸಮಯ ಪೋಲಾಗುತ್ತಿದೆ.

ನಾಗರಿಕರಿಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಹಾಗೂ ಸುಲಭವಾಗಿ ಆದಾಯ, ಜಾತಿ ದೃಢೀಕರಣ ಪ್ರಮಾಣ ಪತ್ರ ಲಭಿಸಬೇಕು ಎಂಬ ನಿಟ್ಟಿನಲ್ಲಿ ಸರಕಾರ ತೆರೆದಿರುವ ಅಟಲ್‌ ಜನಸ್ನೇಹಿ ಕೇಂದ್ರ ಮೂಲ ಸೌಕರ್ಯದ ಕೊರತೆಯಿಂದ ಸಮರ್ಪಕ ಸೇವೆ ಒದಗಿಸಲು ವಿಫಲವಾಗುತ್ತಿದೆ.

ವಿದ್ಯಾರ್ಥಿಗಳು ಯಾವುದೇ ಕಾಲೇಜಿಗೆ ಉನ್ನತ ವಿದ್ಯಾಧ್ಯಾಸಕ್ಕೆ ಅರ್ಜಿ ಹಾಕಬೇಕಾದರೆ ಆದಾಯ, ಜಾತಿ ಪ್ರಮಾಣ ಪತ್ರ ಅಗತ್ಯವಾಗಿದೆ. ಜನ ಸ್ನೇಹಿ ಕೇಂದ್ರದಲ್ಲಿ ಮಾತ್ರ ಈ ಪ್ರಮಾಣ ಪತ್ರ ನೀಡಲಾಗುವುದರಿಂದ ಇದು ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ.

ವಿಲೇವಾರಿ ವಿಳಂಬ
ಒಂದೇ ಕೌಂಟರ್‌ನಲ್ಲಿ ಅರ್ಜಿ ಪಡೆಯಲಾಗುತ್ತಿದ್ದು, ದಿನಕ್ಕೆ ಸಾವಿರಾರು ಜನ ಅರ್ಜಿ ಸಲ್ಲಿಸುತ್ತಿದ್ದಾರೆ. ಇದನ್ನು ಸಕಾಲದಲ್ಲಿ ವಿಲೇವಾರಿ ಮಾಡಲು ಆಗುತ್ತಿಲ್ಲ. ಇದಲ್ಲದೇ ಪಡಿತರ ಚೀಟಿ ಪಡೆಯಲು ಆದಾಯ ಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ.

ಅಧಿಕಾರಿಗಳ ನಿರ್ಲಕ್ಷ್ಯ 
ನೆಮ್ಮದಿ ಕೇಂದ್ರದಲ್ಲಿ ಮೂಲ ಸೌಕರ್ಯ ಕೊರತೆಯಿಂದ ಸಮಸ್ಯೆ ಉದ್ಭವಿಸಿ ಕೆಲವು ತಿಂಗಳಾದರೂ ಅ ಧಿಕಾರಿಗಳು ಈ ಬಗ್ಗೆ ಗಮನ ಹರಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಆದ್ದರಿಂದ ಈ ಕೂಡಲೇ ಅತಿ ವೇಗವಾಗಿ ಆದಾಯ, ಜಾತಿ ಪ್ರಮಾಣ ಪತ್ರ, ಆರ್‌ ಟಿಸಿ ನೀಡಲು ನೆಮ್ಮದಿ ಕೇಂದ್ರದಲ್ಲಿ ಕನಿಷ್ಠ 3 ಕೌಂಟರ್‌ ತೆರೆಯಬೇಕು. ಇನ್ನು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ದಾಖಲಾತಿಗೆ ಅಗತ್ಯವಾಗಿರುವುದರಿಂದ ಅವರಿಗಾಗಿಯೇ ಬೇರೊಂದು ಕೌಂಟರ್‌ ರನ್ನು ಪ್ರಾರಂಭಿಸಿ ಸಮರ್ಪಕ ಸೇವೆಗೆ ಅನುವು ಮಾಡಬೇಕು ಎಂಬುದು ಸಾರ್ವಜನಿಕರ ಒತ್ತಾಯ.

ಬಾಪೂಜಿ ಸೇವಾ ಕೇಂದ್ರಗಳೂ ಹೆಸರಿಗೆ!
ಇತ್ತ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಬಾಪೂಜಿ ಸೇವಾ ಕೇಂದ್ರ ತೆರೆದು ಸ್ಥಳೀಯವಾಗಿ ಸವಲತ್ತು ವಿತರಿಸಲು ಸರಕಾರ ಯೋಜನೆ ರೂಪಿಸಿದೆ. ಆದರೆ ಇಲ್ಲೂ ಸಿಬಂದಿ, ಕಂಪ್ಯೂಟರ್‌, ನೆಟ್‌ವರ್ಕ್‌ ಸಮಸ್ಯೆ.ಹೀಗಾಗಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಗ್ರಾಮೀಣ ಜನತೆ ಸೌಲಭ್ಯ ಪಡೆಯಲು ಆಗುತ್ತಿಲ್ಲ. ಪಟ್ಟಣದ ಅಟಲ್‌ ಜನಸ್ನೇಹಿ ಕೇಂದ್ರದಲ್ಲಿ ಸಿಬಂದಿ ಕೊರತೆ, ಇಂಟರ್‌ನೆಟ್‌ ನೆಟ್‌ವರ್ಕ್‌ ಸಮಸ್ಯೆಯಿಂದ ಓರ್ವ ಆರ್‌ಟಿಸಿ ಇಲ್ಲವೆ, ಇತರ ದಾಖಲೆ ಪತ್ರ ಪಡೆಯಲು ಕನಿಷ್ಠ ಒಂದು ತಾಸಾದರೂ ಕಾಯಲೇ ಬೇಕು. ಹೀಗಾಗಿ ಅಧಿಕಾರ ವಿಕೇಂದ್ರೀಕರಣದ ಸೌಲಭ್ಯ ಮಾತ್ರ ಜನತೆಗೆ ಸಿಗದೆ ಮಂಗಳೂರನ್ನೇ ನೆಚ್ಚಿಕೊಳ್ಳಬೇಕಾದ ಸ್ಥಿತಿಯಿದೆ.

ಕ್ರಮಕ್ಕೆ ಸೂಚನೆ
ಸುರತ್ಕಲ್‌ ಅಟಲ್‌ ಜನಸ್ನೇಹಿ ಕೇಂದ್ರದಲ್ಲಿ ಕಂಪ್ಯೂಟರ್‌ ಕೊರತೆ, ಸಿಬಂದಿ ಕೊರತೆ ನೆಟ್‌ವರ್ಕ್‌ ಸಮಸ್ಯೆ ಗಮನಕ್ಕೆ ಬಂದಿದೆ. ತತ್‌ ಕ್ಷಣ ಹೆಚ್ಚುವರಿ ಕಂಪ್ಯೂಟರ್‌ ಅಳವಡಿಸಿ ಸಿಬಂದಿ ನೇಮಿಸಿ ಎಂದು ತಹಶೀಲ್ದಾರ್‌ ಅವರಿಗೆ ಸೂಚಿಸಲಾಗಿದೆ.
 - ಡಾ| ಭರತ್‌ ಶೆಟ್ಟಿ ವೈ
     ಶಾಸಕರು

 ಲಕ್ಷ್ಮೀನಾರಾಯಣ ರಾವ್‌

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.