ಸುರತ್ಕಲ್ ಪಾಲಿಕೆ ವಲಯ ಕಟ್ಟಡಕ್ಕೆ ಅಂತಿಮ‌ ಸ್ಪರ್ಶ

5.50 ಕೋಟಿ ರೂ. ಮಿಕ್ಕಿ ಅನುದಾನದಲ್ಲಿ ಕಾಮಗಾರಿ

Team Udayavani, Aug 12, 2022, 3:54 PM IST

15

ಸುರತ್ಕಲ್‌: ಮಂಗಳೂರು ಮಹಾನಗರ ಪಾಲಿಕೆ ಸುರತ್ಕಲ್‌ ವಲಯವಾಗಿ ಐದು ವರ್ಷ ಸಮೀಪಿಸುತ್ತಿದ್ದು, ಜನ ನಿಭಿಡ ವಲಯ ಕಚೇರಿಗೆ ಇದೀಗ ನೂತನ ಕಟ್ಟಡ ನಿರ್ಮಾಣವಾಗುತ್ತಿದ್ದು ಕಾಮಗಾರಿ ಅಂತಿಮ ಹಂತದಲ್ಲಿದೆ.

ಈಗಾಗಲೇ ಕಟ್ಟಡ ಕಾಮಗಾರಿ ಮುಗಿದಿದ್ದು, ಪೀಠೊ ಪಕರಣ ಜೋಡಿಸುವ ಕಾರ್ಯ ನಡೆಯುತ್ತಿದೆ. ಒಟ್ಟು ಎರಡು ಅಂತಸ್ತುಗಳ ಈ ಕಟ್ಟಡದಲ್ಲಿ ನೆಲ ಅಂತಸ್ತಿನಲ್ಲಿ ಪಾರ್ಕಿಂಗ್‌ ಅವಕಾಶ ನೀಡಲಾಗಿದೆ. ಉಳಿದಂತೆ ಮೊದಲ ಅಂತಸ್ತಿನಲ್ಲಿ ವಿವಿಧ ವಿಭಾಗಗಳ ಕಚೇರಿ ಇರಲಿದೆ.

ಶಾಸಕ ಡಾ| ಭರತ್‌ ಶೆಟ್ಟಿ ವೈ., ವಲಯ ಆಯುಕ್ತರಿಗೆ, ಎಂಜಿನಿಯರ್‌ ಗಳಿಗೆ ಕೊಠಡಿ ಹಾಗೂ ಸಭೆ ನಡೆಸಲು ಸಭಾಂಗಣವಿದೆ. ಪಾಲಿಕೆ ಸದಸ್ಯರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಜನರ ಭೇಟಿಗಾಗಿ ಅವಕಾಶ ಕಲ್ಪಿಸಲಾಗಿದೆ.

ಈಗಿರುವ ಕಚೇರಿ ಕಿರಿದಾಗಿದ್ದು, ಹತ್ತೈವತ್ತು ನಾಗರಿಕರು ಸೇರಲು ಸ್ಥಳಾವಕಾಶವಿಲ್ಲ. ಹೀಗಾಗಿ ಆಡಳಿತ ಯಂತ್ರ ಸುಗಮವಾಗಿ ಸಾಗಲು ಬೃಹತ್‌ ಕಟ್ಟಡ ಅಂದಾಜು 5.50 ಕೋಟಿ ರೂ. ಮಿಕ್ಕಿ ಅನುದಾನದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದೆ.

ಪ್ರಯೋಜನವೇನು?

ಮಂಗಳೂರು ಲಾಲ್‌ ಬಾಗ್‌ನಲ್ಲಿರುವ ಕೇಂದ್ರ ಕಚೇರಿ ಸದಾ ಜನಜಂಗುಳಿಯಿಂದ ಕೂಡಿರುತ್ತದೆ ಮಾತ್ರವಲ್ಲ, ಸಣ್ಣ ಕೆಲಸಕ್ಕೂ ಹೊರವಲಯದ ಜನತೆ ನಗರಕ್ಕೆ ಬರಬೇಕಾಗುತ್ತದೆ. ಒಂದು ಬಾರಿಗೆ ಆಗದಿದ್ದಲ್ಲಿ ಹಲವು ಬಾರಿ ಅಲ್ಲಿಗೆ ಅಲೆದಾಡಬೇಕಾಗುತ್ತದೆ. ಅಭಿವೃದ್ಧಿ ಕಾರ್ಯ ಚುರುಕು ಗೊಳಿಸುವ ನಿಟ್ಟಿನಲ್ಲಿ ಕಡತ ವಿಲೇವಾಗಿ ಶೀಘ್ರವಾಗಲು ವಲಯ ಕಚೇರಿ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಆಯಾ ವ್ಯಾಪ್ತಿಯ ನಿವಾಸಿಗಳಿಗೆ ವಲಯ ಕಚೇರಿಯಲ್ಲಿ ಸೌಲಭ್ಯ ದೊರಕುವಂತೆ ಮಾಡುವುದು ಇದರ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸುರತ್ಕಲ್‌ ವಲಯ ಕಚೇರಿಯನ್ನು ಮೇಲ್ದರ್ಜೆಗೆ ಏರಿಸಲಾಗಿದೆ.

ನೂತನ ಕಟ್ಟಡ ನಿರ್ಮಾಣದಿಂದ ಜನತೆಗೆ ಸಾಕಷ್ಟು ಸ್ಥಳಾವಕಾಶ ದೊರಕಲಿದ್ದು ಕುಳಿತುಕೊಳ್ಳಲು ಆಸನ, ಟೋಕನ್‌ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ, ಒಂದೇ ಸೂರಿನಡಿ ಅಧಿಕಾರಿಗಳ ಭೇಟಿ ಮತ್ತಿತರ ವ್ಯವಸ್ಥೆಗಳು ಸಿಗಲಿವೆ. ಶಾಸಕರ ಭೇಟಿಗೂ ಅವಕಾಶ ಇರುವುದರಿಂದ ತ್ವರಿತವಾಗಿ ಪಾಲಿಕೆ ಕೆಲಸ ಕಾರ್ಯವಾಗಲು ಪ್ರಯೋಜನವಾಗಲಿದೆ.

ಯಾವೆಲ್ಲ ಅನುಮತಿ ಸಿಗುತ್ತಿದೆ

ನಗರ ಯೋಜನೆಯಡಿ 500 ಚ.ಮೀ. ವಾಸ, ವಾಣಿಜ್ಯ ಕಟ್ಟಡಕ್ಕೆ ಪರವಾನಿಗೆ, ಪ್ರಮಾಣ ಪತ್ರ, ನವೀಕರಣ ಇತ್ಯಾದಿ, ಇದರ ಜತೆಗೆ ಖಾತಾ ನೋಂದಣಿ, ಕಟ್ಟಡ ನಂಬ್ರ ವಿತರಣೆ ಸಹಿತ ಆರೋಗ್ಯ ಶಾಖೆಯಡಿ ಪರವಾನಿಗೆ, ಉದ್ದಿಮೆ ಪರವಾನಿಗೆ ಮತ್ತಿತರ ಜವಾಬ್ದಾರಿ ನೀಡಲಾಗಿದೆ.

ಜನಸ್ನೇಹಿ ಆಡಳಿತ ವ್ಯವಸ್ಥೆಗೆ ಕ್ರಮ: ಜನತಾ ದರ್ಶನಕ್ಕೆ ಸ್ಥಳಾವಕಾಶವನ್ನು ನನ್ನ ಕಚೇರಿಯಲ್ಲಿಯೇ ನೀಡಲಾಗಿದೆ. ಸಂದರ್ಶನಕ್ಕೆ ಸಾರ್ವಜನಿಕರು ಬಂದಲ್ಲಿ ಎಲ್ಲ ಸೌಲಭ್ಯ ಸಿಗುವಂತಾಗಲು ಹೊಸಕಟ್ಟಡದಲ್ಲಿ ವ್ಯವಸ್ಥೆ ಮಾಡಲಾಗಿದೆ. ಆ. 25ರ ಒಳಗಾಗಿ ಇದನ್ನು ಸಾರ್ವಜನಿಕರ ಬಳಕೆಗೆ ಉಪಯೋಗಿಸಲು ತೀರ್ಮಾನಿಸಲಾಗಿದೆ. ಜನಸ್ನೇಹಿ ಆಡಳಿತ ವ್ಯವಸ್ಥೆ ಮಾಡಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ. –ಡಾ| ಭರತ್‌ ಶೆಟ್ಟಿ ವೈ., ಶಾಸಕರು

ಪರಿಶೀಲಿಸಿ ಉದ್ಘಾಟನೆಗೆ ದಿನ ನಿಗದಿ: ಉದ್ಘಾಟನೆಗೂ ಮುನ್ನ ಆನ್‌ಲೈನ್‌ ವ್ಯವಸ್ಥೆ ಹಾಗೂ ಕಟ್ಟಡದಲ್ಲಿ ಸಮರ್ಪಕ ಕಾರ್ಯಚಟುವಟಿಕೆ ಸರಿಯಿದೆಯೇ ಎಂಬುದನ್ನು ಪರಿಶೀಲಿಸಲ್ಲಿದ್ದೇವೆ. ಬಳಿಕ ಉದ್ಘಾಟನೆಗೆ ದಿನ ನಿಗದಿ ಮಾಡಲಾಗುವುದು. – ವಾಣಿ ವಿ. ಆಳ್ವ, ವಲಯ ಆಯುಕ್ತರು ಸುರತ್ಕಲ್

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.