ನಿಂತಿದ್ದ ಆಮ್ನಿ ಮೇಲೆ ಬಿದ್ದ ಲಾರಿ: ಗುತ್ತಿಗೆದಾರ ಸಾವು; ಮತ್ತೋರ್ವ ಪಾರು
Team Udayavani, Jul 8, 2022, 1:24 PM IST
ಸುರತ್ಕಲ್ : ಗೋಣಿ ಚೀಲ ತುಂಬಿಕೊಂಡು ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 66ರ ಹೊನ್ನಕಟ್ಟೆ ಜಂಕ್ಷನ್ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಆಮ್ನಿ ಕಾರಿನ ಮೇಲೆ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಯುವಗುತ್ತಿಗೆದಾರ ಕುಳಾಯಿ ಗೋಕುಲ ನಗರ ನಿವಾಸಿ ಲೋಕೇಶ್ ಕುಲಾಲ್ (37) ಸಾವನ್ನಪ್ಪಿದ್ದಾರೆ. ಘಟನೆ ಶುಕ್ರವಾರ ಮಧ್ಯಾಹ್ನ 1.30ರ ಸುಮಾರಿಗೆ ನಡೆದಿದೆ.
ಲೋಕೇಶ್ ಕುಲಾಲ್ ಅವರು ತನ್ನ ಆಮ್ನಿ ಕಾರಿನಲ್ಲಿ ಕೆಲಸದ ನಿಮಿತ್ತ ಹೊನ್ನಕಟ್ಟೆ ಹೆದ್ದಾರಿ ಬಳಿ ಇರುವ ಅಂಗಡಿಗೆ ಬಂದಿದ್ದರು. ಇನ್ನೇನು ಹೆದ್ದಾರಿಯಿಂದ ಪಕ್ಕಕ್ಕೆ ತಿರುವು ತೆಗೆದುಕೊಳ್ಳಬೇಕು ಎನ್ನುವಷ್ಟರಲ್ಲಿ ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ಹಠಾತ್ತನೆ ಕಂಬಕ್ಕೆ ಢಿಕ್ಕಿಯಾಗಿ ಕಾರಿನ ಮೇಲೆ ಮಗುಚಿ ಬಿದ್ದಿತ್ತು.
ಸಿಗ್ನಲ್ ಕಂಬಕ್ಕೆ ಢಿಕ್ಕಿಯಾಗಿ ಪಲ್ಟಿ
ಲಾರಿ ಚಾಲಕ ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ಲಾರಿಯು ನಿಯಂತ್ರಣ ತಪ್ಪಿದ್ದು, ಮೊದಲಿಗೆ ಪಕ್ಕದಲ್ಲಿದ್ದ ಸಿಗ್ನಲ್ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದು ಅನಂತರ ಆಮ್ನಿಯ ಮೇಲೆ ಮಗುಚಿ ಬಿದ್ದಿದೆ. ಆಮ್ನಿಯ ಪಕ್ಕದಲ್ಲೇ ಸ್ಕೂಟರ್ ಕೂಡ ಇತ್ತು. ಸ್ಕೂಟರ್ನಲ್ಲಿದ್ದವರು ಹಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕ್ರೇನ್ಗಳ ಮೂಲಕ ಲಾರಿಯನ್ನು ಮೇಲೆತ್ತಿ ಅದರಡಿಯಲ್ಲಿ ಅಪ್ಪಚ್ಚಿಯಾಗಿದ್ದ ಆಮ್ನಿ ಕಾರಿನಿಂದ ಗಂಭೀರ ಗಾಯಗೊಂಡಿದ್ದ ಲೋಕೇಶ್ ಅವರನ್ನು ಹೊರತೆಗೆದು ಮಂಗಳೂ ರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು.
ಸುಮಾರು ಅರ್ಧ ಗಂಟೆ ಕಾರ್ಯಾಚರಣೆ ನಡೆಸಿ ಗಾಯಾಳುವನ್ನು ಹೊರತೆಗೆಯ ಲಾಗಿತ್ತು. ಲಾರಿ ಚಾಲಕ ಕೂಡ ಗಾಯಗೊಂಡಿದ್ದಾರೆ.
ಮಂಗಳೂರು ಉತ್ತರ ಸಂಚಾರಿ ಠಾಣೆಯ ನಿರೀಕ್ಷಕ ಸುರೇಶ್ ಕುಮಾರ್, ಎಸ್ಸೆ„ ಯೋಗೀಶ್ ಕುಮಾರ್ ಹಾಗೂ ಸಿಬಂದಿ ಸ್ಥಳಕ್ಕೆ ಬಂದಿದ್ದು, ಹೆದ್ದಾರಿಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸ್ಥಳೀಯರು ಸಹಕರಿಸಿದರು. ಪೊಲೀ ಸರು ಲಾರಿ ಚಾಲಕನ ಮೇಲೆ ಕೇಸು ದಾಖಲಿಸಿಕೊಂಡಿದ್ದಾರೆ.
ಇಬ್ಬರು ಪುಟ್ಟ ಮಕ್ಕಳು
ಯುವ ಗುತ್ತಿಗೆದಾರರಾಗಿದ್ದ ಲೋಕೇಶ್ ಕುಲಾಲ್ ಅವರು ಗೋಕುಲನಗರ ಬಡಾವಣೆ ಹಾಗೂ ಸ್ನೇಹಿತ ವಲಯದಲ್ಲಿ ಉತ್ತಮ ವ್ಯಕ್ತಿತ್ವ ಹೊಂದಿದ ವರಾಗಿದ್ದರು. ಸಾಮಾಜಿಕ, ಕ್ರೀಡಾ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು. ಹಲವಾರು ಬಾಡಿ ಬಿಲ್ಡಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಗಳಿಸಿದ್ದರು. ಹಳೆಯಂಗಡಿಯ ಪವಿತ್ರಾ ಅವರನ್ನು ವಿವಾಹವಾಗಿರುವ ಅವರಿಗೆ ಇಬ್ಬರು ಪುಟ್ಟ ಮಕ್ಕಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ