ಸುರತ್ಕಲ್‌: ಹಳೆ ಸಂತೆ ಮಾರುಕಟ್ಟೆ ತೆರವು


Team Udayavani, Mar 23, 2018, 11:02 AM IST

23-March-4.jpg

ಸುರತ್ಕಲ್‌: ಇಲ್ಲಿಯ ಹಳೆಯ ಸಂತೆ ಮಾರುಕಟ್ಟೆಯನ್ನು ಗುರುವಾರ ಕೆಡಹುವ ಕಾರ್ಯ ಆರಂಭವಾಯಿತು. ಮುಂಜಾನೆ ಏಳು ಗಂಟೆಯ ಸುಮಾರಿಗೆ ಪೊಲೀಸರ ಬೆಂಗಾವಲಿನೊಂದಿಗೆ ನಡೆದ ಕಾರ್ಯಾಚರಣೆಯ ನೇತೃತ್ವವನ್ನು ಕಂದಾಯ ಇಲಾಖೆಯ ಸಹಾಯಕ ಆಯುಕ್ತೆ ಗಾಯತ್ರಿ ನಾಯಕ್‌ ವಹಿಸಿದ್ದರು.

ಮುಂಜಾನೆ ವ್ಯಾಪಾರಿಗಳು ಹಳೆಯ ಮಾರುಕಟ್ಟೆ ತೆರವಿಗೆ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ತೆರವು ಕಾರ್ಯಾಚರಣೆ ಮಾಹಿತಿ ತಿಳಿದು ಶಾಸಕ ಮೊಯಿದಿನ್‌ ಬಾವಾ ಹಾಗೂ ಕಾರ್ಪೊ ರೇಟರ್‌ ಪ್ರತಿಭಾ ಕುಳಾಯಿ ಸ್ಥಳಕ್ಕೆ ಆಗಮಿಸಿ ವ್ಯಾಪಾರಿಗಳು ತಮ್ಮ ಸಾಮಾನು ಸರಂಜಾಮುಗಳನ್ನು ಸ್ಥಳಾಂತರಗೊಳಿಸಲು ಅವಕಾಶ ನೀಡಬೇಕು ಎಂದು ಸೂಚಿಸಿದರಾದರೂ ಆಯುಕ್ತೆ ಇದಕ್ಕೆ ಒಪ್ಪಲಿಲ್ಲ. ಈಗಾಗಲೇ ಮಾ. 22ರಂದು ತೆರವು ನಡೆಯಲಿದೆ ಎಂದು ನೋಟಿಸ್‌ ನೀಡಲಾಗಿತ್ತು. ಬಹಳಷ್ಟು ವ್ಯಾಪಾರಿಗಳು ಈಗಾಗಲೇ ಸ್ಥಳಾಂತರಗೊಳಿಸಿದ್ದು, ಕಾರ್ಯಚರಣೆ ನಿಲ್ಲಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.

ಮುಖಂಡರಾದ ಗಣೇಶ್‌ ಹೊಸಬೆಟ್ಟು, ಸತ್ಯಜಿತ್‌ ಸುರತ್ಕಲ್‌, ಶೋಭೇಂದ್ರ ಸಸಿಹಿತ್ಲು, ಯಶ್‌ಪಾಲ್‌ ಸಾಲ್ಯಾನ್‌, ವಚನ್‌, ನಯನಾ ಉಪಸ್ಥಿತರಿದ್ದು, ಆಯುಕ್ತರಿಗೆ ಪರಿಸ್ಥಿತಿಯ ಮನವರಿಕೆ ಮಾಡಿಕೊಡುವ ಯತ್ನ ನಡೆಸಿದರು. ಈ ಸಂದರ್ಭ ಪಾಲಿಕೆ ವಲಯಾಯುಕ್ತರಿಗೆ ಮೂವತ್ತೈದು ಮೀನು ಮಾರಾಟ ಮಾಡುವ ಮಹಿಳೆಯರಿದ್ದರೆ ತತ್‌ಕ್ಷಣ ಪರಿಶೀಲಿಸಿ ವ್ಯವಸ್ಥೆ ಮಾಡಲು ಸೂಚಿಸಿದರು.

ಕಾರ್ಯಾಚರಣೆ ಸಂದರ್ಭ ಸುರತ್ಕಲ್‌ ವಲಯಾಯುಕ್ತ ರವಿಶಂಕರ್‌, ಮುಖ್ಯ ಎಂಜಿನಿಯರ್‌ ಗಣೇಶ್‌, ಖಾದರ್‌, ಆರೋಗ್ಯ ಇಲಾಖೆಯ ಭಾಸ್ಕರ್‌ಉಪಸ್ಥಿತರಿದ್ದರು. ಸುರತ್ಕಲ್‌ ಠಾಣೆಯ ಇನ್‌ಸ್ಪೆಕ್ಟರ್‌ ರಾಮಕೃಷ್ಣ, ಮೂಲ್ಕಿ, ಪಣಂಬೂರು ಠಾಣೆಯ ಅಧಿಕಾರಿಗಳು, ಸಿಬಂದಿ ಭದ್ರತಾ ಕಾರ್ಯದಲ್ಲಿ ಭಾಗವಹಿಸಿದ್ದರು.

60 ಕೋ.ರೂ. ಕಾಮಗಾರಿ
ಪ್ರಥಮ ಹಂತದ 60 ಕೋಟಿ ರೂಪಾಯಿ ವೆಚ್ಚದಲ್ಲಿ ಪಾರ್ಕಿಂಗ್‌, ಬಸ್‌ ನಿಲ್ದಾಣ ಸಹಿತ ಮಾರುಕಟ್ಟೆ ಮಳಿಗೆ ಕಾಮಗಾರಿ ಆರಂಭವಾಗಲಿದೆ.

ಗಲಿಬಿಲಿಯಲ್ಲಿ ಸರಕು ಸ್ಥಳಾಂತರ
ಮನಪಾ ನೋಟಿಸ್‌ ನೀಡಿದ್ದರೂ ಕೆಲವು ವ್ಯಾಪಾರಿಗಳು ಸ್ಥಳಾಂತರ ಮಾಡಿರಲಿಲ್ಲ. ಬೆಳ್ಳಂಬೆಳಗ್ಗೆ ಎರಡು ಜೇಸಿಬಿಗಳು ಕಾರ್ಯಾಚರಣೆಯಲ್ಲಿ ತೊಡಗಿದಾಗ ವ್ಯಾಪಾರಿಗಳು ಗಲಿಬಿಲಿಯಲ್ಲಿ ಸಾಧ್ಯವಾದಷ್ಟು ಸರಕುಗಳನ್ನು ಸ್ಥಳಾಂತರಗೊಳಿಸಲು ಮುಂದಾದರು. 

ಜೇಬುಕಳ್ಳರಿಗೆ ಕಡಿವಾಣ
ಇಲ್ಲಿನ ಸಂತೆ ಸಂದರ್ಭ ದಿನಕ್ಕೆ ಕನಿಷ್ಠ ಹತ್ತು ಮೊಬೈಲ್‌ಗ‌ಳು ಕಳುವಾಗುತ್ತಿದ್ದವು. ಬೀದಿ ದೀಪದ ವ್ಯವಸ್ಥೆಯಿಲ್ಲದೆ ಮುಸ್ಸಂಜೆ ಸಮಯ ಮಾರುಕಟ್ಟೆಗೆ ಬರುವ ಗ್ರಾಹಕರು ಕಳ್ಳರ ಕೈಚಳಕಕ್ಕೆ ಸಿಲುಕಿ ಸಾವಿರಾರು ರೂ. ಮೌಲ್ಯದ ಮೊಬೈಲ್‌ ಕಳೆದುಕೊಳ್ಳುತ್ತಿದ್ದರು. ಇನ್ನು ಅದಕ್ಕೆ ಕಡಿವಾಣ ಬೀಳಲಿದೆ.

ಮಹಿಳಾ ಮೀನುಗಾರರ ವಿರೋಧ
ಮಾರುಕಟ್ಟೆಯಲ್ಲಿ ಒಟ್ಟು 35 ಮೀನು ಮಾರಾಟ ಮಾಡುವ ಮಹಿಳೆಯರಿದ್ದು ತಾತ್ಕಾಲಿಕ ವಿಭಾಗದಲ್ಲಿ ಕೇವಲ 20 ಮಂದಿಗೆ ಅವಕಾಶ ಕಲ್ಪಿಸಲಾಗಿದೆ. ಈಗಿನ ವ್ಯವಸ್ಥೆಯಲ್ಲಿ ವಯಸ್ಸಾದ ಮಹಿಳೆಯರು ಮೀನು ಮಾರಾಟ ಮಾಡುವ ಸ್ಥಿತಿಯಲ್ಲಿ ಇಲ್ಲ ಮಾತ್ರವಲ್ಲ ಐಸ್‌, ಮತ್ತಿತರ ಸರಕುಗಳನ್ನು ತರಲು ವಾಹನ ಬರಲಾಗುವುದಿಲ್ಲ. ಇದಕ್ಕೆ ಮೊದಲು ಯೋಜನೆ ರೂಪಿಸಿ ಕಾರ್ಯಗತಗೊಳಿಸಿ ಅಲ್ಲಿಯವರೆಗೆ ಹೋಗುವುದಿಲ್ಲ ಎಂದು ಧರಣಿ ಕುಳಿತರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.