ಸುರತ್ಕಲ್: ಹಿಂ.ಜಾ.ವೇ. ಕಾರ್ಯಕರ್ತನ ಮೇಲೆ ಹಲ್ಲೆ ಯತ್ನ
Team Udayavani, Jan 9, 2018, 6:20 AM IST
ಸುರತ್ಕಲ್: ಸುರತ್ಕಲ್ ಬಳಿಯ ಅಗರಮೇಲು ರೈಲ್ವೇ ಸೇತುವೆ ಬಳಿ ಸುರತ್ಕಲ್ ಹಿಂದೂ ಜಾಗರಣಾ ವೇದಿಕೆ ಸಹಸಂಚಾಲಕ ಭರತ್ ಅಗರಮೇಲು ಅವರ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಯತ್ನಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಕೇಬಲ್ ಕೆಲಸದಲ್ಲೂ ಭರತ್ ತೊಡಗಿಸಿಕೊಂಡಿದ್ದು ರಾತ್ರಿ ಮನೆಗೆ ತೆರಳುವ ಸಂದರ್ಭ ಪೊದೆಯಿಂದ ಹೊರಬಂದ ನಾಲ್ಕು ಮಂದಿ ಹಲ್ಲೆಗೆ ಯತ್ನಿಸಿದ್ದಾರೆ.
ಪೊದೆಯಲ್ಲಿ ಅಡಗಿದ್ದವರು ಏಕಾಏಕಿ ಮೇಲೇಳುತ್ತಿದ್ದಂತೆ ಬೆ„ಕ್ ಸ್ಥಳದಲ್ಲೇ ಬಿಟ್ಟು ಓಡಿದ ಪರಿಣಾಮ ಭರತ್ ಅಪಾಯದಿಂದ
ಪಾರಾಗಿದ್ದಾರೆ. ಮಾಹಿತಿ ಸಿಗುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ದುಷ್ಕರ್ಮಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದರು.
ದೀಪಕ್ ರಾವ್ ಹತ್ಯೆಯ ಬಳಿಕ ಭರತ್ ಮುಂಜಾಗರೂಕತೆಯಿಂದ ಹೋಗುತ್ತಿದ್ದರು. ಸುರತ್ಕಲ್ ಠಾಣೆಯಲ್ಲಿ ಭರತ್ ಅವರು ಈ ಬಗ್ಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’