ಸುಳ್ಯ: 134 ಅನರ್ಹ ಪಡಿತರ ಚೀಟಿ ಪತ್ತೆ

ಒಟ್ಟು 1,81,476 ರೂ. ದಂಡ ವಸೂಲಿ: ಪರಿಶೋಧನೆ ಪ್ರಗತಿಯಲ್ಲಿ

Team Udayavani, Nov 4, 2019, 5:19 AM IST

RATION-CARD2

ಸುಳ್ಯ: ಸರಕಾರದ ಮಾನ ದಂಡಗಳಿಗೆ ವಿರುದ್ಧವಾಗಿ ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ತಾಲೂಕಿನ 134 ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿ, ದಂಡ ವಸೂಲಿ ಮಾಡ ಲಾಗಿದೆ. ಇನ್ನುಳಿದ ಅನರ್ಹ ಪಡಿತರ ಚೀಟಿದಾರರನ್ನು ಗುರುತಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಈ ತನಕ 64 ಮಂದಿ ಸ್ವಯಂಪ್ರೇರಿತರಾಗಿ ಪಡಿತರ ಚೀಟಿ ಒಪ್ಪಿಸಿದ್ದು, ಬಾಕಿ ಕಾರ್ಡ್‌ ಪತ್ತೆ ಆಹಾರ ಇಲಾಖೆ ಮೂಲಕ ನಡೆಯುತ್ತಿದೆ.

134 ಅನರ್ಹ ಪಡಿತರ ಚೀಟಿ
ತಾಲೂಕಿನಲ್ಲಿ ನಿಯಮ ಮೀರಿ 134 ಕುಟುಂಬಗಳು ಬಿಪಿಎಲ್‌ (ಆದ್ಯತಾ ಪಡಿತರ ಚೀಟಿ) ಪಡಿತರ ಚೀಟಿ ಪಡೆದು, ಅದರ ಸವಲತ್ತುಗಳನ್ನು ಉಪ ಯೋಗಿಸುತ್ತಿರುವುದು ಪತ್ತೆ ಆಗಿದೆ. ತಾಲೂಕಿನಲ್ಲಿ 29,766 ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿದ್ದು, 10,314 ಎಪಿಎಲ್‌ ಪಡಿತರ ಚೀಟಿ, 19,452 ಬಿಪಿಎಲ್‌ ಪಡಿತರ ಚೀಟಿ, 1,562 ಅಂತ್ಯೋದಯ ಪಡಿ ತರ ಚೀಟಿ ದಾರರಿದ್ದಾರೆ. ಇವರಲ್ಲಿ ಉಳಿದ ಅನರ್ಹ ಕಾರ್ಡ್‌ದಾರರ ಪತ್ತೆ ನಡೆಯುತ್ತಿದೆ.

1,81,476 ರೂ.ದಂಡ ವಸೂಲಿ
ಅನರ್ಹ ಪಡಿತರ ಚೀಟಿ ಪತ್ತೆ ಮಾಡಿ, ತಾಲೂಕಿನಲ್ಲಿ ಈ ತನಕ 1,81,476 ರೂ. ದಂಡ ವಸೂಲಿ ಮಾಡಲಾಗಿದೆ. 64 ಮಂದಿ ಸರಕಾರದ ಗಡುವಿನಲ್ಲಿ ಸ್ವಯಂಪ್ರೇರಿತರಾಗಿ ಕಾರ್ಡ್‌ ಒಪ್ಪಿಸಿದ ಕಾರಣ ಅವರು ದಂಡದಿಂದ ವಿನಾಯಿತಿ ಪಡೆದಿದ್ದಾರೆ. ಬಿಪಿಎಲ್‌ ಪಡಿತರ ಕಾರ್ಡ್‌ ಅನ್ನು ಆ ಕುಟುಂಬ ಯಾವಾಗ ಪಡೆದುಕೊಂಡಿತು ಮತ್ತು ಸರಕಾರದ ಸವಲತ್ತು ಉಪಯೋಗಿಸಿದ ಪ್ರಮಾಣ ಆಧರಿಸಿ ದಂಡ ವಿಧಿಸಲಾ ಗುತ್ತದೆ. ಇಲಾಖೆ ವಿಧಿಸಿದ ದಂಡವನ್ನು ಎ. 2ರ ಒಳಗೆ ಬ್ಯಾಂಕ್‌ ಖಾತೆಗೆ ಜಮೆ ಮಾಡಬೇಕಾಗುತ್ತದೆ. ಈ ವರೆಗೆ ಕುಟುಂಬವೊಂದಕ್ಕೆ 20 ಸಾವಿರ ರೂ. ದಂಡ ವಿಧಿಸಿರುವುದೇ ಗರಿಷ್ಠ ಮೊತ್ತ ಎಂದು ಇಲಾಖೆ ಮಾಹಿತಿ ನೀಡಿದೆ.

ಎರಡು ಬಾರಿ ಅವಕಾಶ
ಸರಕಾರದ ಮಾನದಂಡಗಳನ್ನು ಮೀರಿ ಬಿಪಿಎಲ್‌ ಪಡಿತರ ಚೀಟಿ ಹೊಂದಿದ್ದರೆ ದಂಡ ರಹಿತವಾಗಿ 2019 ಸೆ. 3ರೊಳಗೆ ಆಯಾ ತಾಲೂಕು ಕಚೇರಿಯ ಆಹಾರ ಶಾಖೆಗೆ ತೆರಳಿ ಪಡಿತರ ಚೀಟಿ ಒಪ್ಪಿಸಿ, ರದ್ದು ಮಾಡುವಂತೆ ಸರಕಾರ ಸೂಚನೆ ನೀಡಿತ್ತು. ಆ ಬಳಿಕ ಅ. 15ರ ತನಕ ಅವಧಿ ವಿಸ್ತರಿಸಿತು. ಎರಡು ಬಾರಿ ನೀಡಿದ ಅವಕಾಶದಲ್ಲಿ ಪಡಿತರ ಚೀಟಿ ರದ್ದು ಮಾಡದೆ ಇದ್ದ ಅನರ್ಹ ಪಡಿತರ ಚೀಟಿದಾರರು ಸರಕಾರದ ನಿಯಮ ದಂತೆ ದಂಡ ಕಟ್ಟಬೇಕಿದೆ.

ಮನೆಗೆ ನೋಟಿಸ್‌
ತಾಲೂಕು ಆಹಾರ ಇಲಾಖೆಯು ಕುಟುಂಬ ಗಳು ಹೊಂದಿ ರುವ ಬಿಪಿಎಲ್‌, ಅಂತ್ಯೋ ದಯ ಪಡಿತರ ಚೀಟಿಗಳ ಬಗ್ಗೆ ತನಿಖೆ ನಡೆಸುತ್ತಿದೆ. ಅಗತ್ಯ ವಸ್ತುಗಳ ಕಾಯ್ದೆ 1955ರಡಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ. ಅನರ್ಹ ಪಡಿತರ ಚೀಟಿದಾರರು ರದ್ದುಪಡಿಸದೆ ಇದ್ದರೆ ಜಿಲ್ಲಾಧಿಕಾರಿ ಕಚೇರಿಯಿಂದ ಆಯಾ ಪಡಿತರದಾರನ ಮನೆಗೆ ನೋಟಿಸ್‌ ಜಾರಿಯಾಗುತ್ತದೆ. ಜಿಲ್ಲಾಧಿಕಾರಿ ಕಚೇರಿ ಆರ್‌ಟಿಒ, ಮೆಸ್ಕಾಂ ಮಾಹಿತಿ ಆಧರಿಸಿ ಅನರ್ಹ ಫಲಾನುಭವಿಗಳ ಪತ್ತೆ ಪ್ರಕ್ರಿಯೆ ನಡೆಯುತ್ತಿದೆ. ಶೀಘ್ರ ನೋಟಿಸ್‌ ಜಾರಿಯಾಗುವ ಸಾಧ್ಯತೆ ಇದೆ.

ದಂಡ ಕಟ್ಟುವುದು ಹೇಗೆ?
ಅನರ್ಹ ಪಡಿತರ ಚೀಟಿದಾರರು ತಾಲೂಕು ಕೇಂದ್ರದಲ್ಲಿರುವ ತಾಲೂಕು ಕಚೇರಿಯ ಕಂದಾಯ ಇಲಾಖೆಯ ಆಹಾರ ಶಾಖೆಯಲ್ಲಿ ಸ್ವತಃ ತೆರಳಿ ಮಾಹಿತಿ ನೀಡಬೇಕಾಗಿದೆ.
ಈಗಲೂ ಸ್ವಯಂ ಪ್ರೇರಿತರಾಗಿ ಕಾರ್ಡ್‌ ಒಪ್ಪಿಸಿದರೆ ದಂಡ ಮೊತ್ತದಲ್ಲಿ ಸ್ವಲ್ಪ ವಿನಾಯಿತಿ ಸಿಗಲಿದೆ. ಇಲಾಖೆ ಪತ್ತೆ ಹಚ್ಚಿದ ಅನಂತರ ಕಾರ್ಡ್‌ ಒಪ್ಪಿಸಿದರೆ ಪೂರ್ಣ ಪ್ರಮಾಣದ ದಂಡ ಪಾವತಿಸಬೇಕು.

ಯಾರೆಲ್ಲ ಅನರ್ಹರು?
-ಕುಟುಂಬದಲ್ಲಿ ಸರಕಾರಿ ಅಥವಾ ಅರೆ ಸರಕಾರಿ ಉದ್ಯೋಗ ಹೊಂದಿರುವರು.
– ಆದಾಯ ತೆರಿಗೆ ಪಾವತಿಸುವವರು.
– ಪಡಿತರ ಚೀಟಿ ವಿಳಾಸದಲ್ಲಿ ವಾಸ್ತವ್ಯ ಇಲ್ಲದೇ ಇರುವವರು
– ಒಂದು ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿರುವವರು.
– ಮರಣ ಹೊಂದಿದವರ ಮತ್ತು ಕುಟುಂಬದಲ್ಲಿ ವಾಸ್ತವ್ಯವಿಲ್ಲದೇ ಇರುವವರ ಹೆಸರನ್ನು ಪಡಿತರ ಚೀಟಿಯಿಂದ ತೆಗೆಯದೇ ಉಳಿಸಿಕೊಂಡವರು.
– ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್‌ ಭೂಮಿ ಹಾಗೂ ನಗರ ಪ್ರದೇಶಗಳಲ್ಲಿ 1,000 ಸಾವಿರ ಚ.ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆ ಸ್ವಂತವಾಗಿ ಹೊಂದಿರುವವರು.
– ಸ್ವಂತ ಉಪಯೋಗಕ್ಕಾಗಿ ಕಾರು, ಲಾರಿ, ಜೆಸಿಬಿ ಇತ್ಯಾದಿ ವಾಹನ ಹೊಂದಿರುವನರು.
-ವಾರ್ಷಿಕ ಆದಾಯ 1.20 ಲಕ್ಷ ರೂ.ಗಳಿಗಿಂತ ಅಧಿಕ ಇರುವ ಕುಟುಂಬಗಳು.

ನೋಟಿಸ್‌ ಜಾರಿ
ತಾಲೂಕಿನಲ್ಲಿ ಅ. 30ರ ವರೆಗೆ 134 ಕಾರ್ಡ್‌ದಾರರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. 64ಕ್ಕೂ ಹೆಚ್ಚು ಬಿಪಿಎಲ್‌ ಪಡಿತರ ಚೀಟಿದಾರರು ಕಂದಾಯ ಇಲಾಖೆಯ ಆಹಾರ ಶಾಖೆಯಲ್ಲಿ ಸ್ವತಃ ಬಂದು ಕಾರ್ಡ್‌ ರದ್ದುಪಡಿಸಿ, ದಂಡ ಪಾವತಿಸಿದ್ದಾರೆ. ಈ ತನಕ 1,81,476 ರೂ. ದಂಡ ಸಂಗ್ರಹವಾಗಿದೆ. ಸ್ವಯಂಪ್ರೇರಿತರಾಗಿ ಕಾರ್ಡ್‌ ಒಪ್ಪಿಸಿದ್ದಲ್ಲಿ ಅವರಿಗೆ ವಿಧಿಸುವ ದಂಡದ ಮೊತ್ತದಲ್ಲಿ ಸ್ವಲ್ಪ ವಿನಾಯಿತಿ ನೀಡಲಾಗುವುದು.
ಎನ್‌.ಎ. ಕುಂಞಿ ಅಹಮದ್‌
ತಹಶೀಲ್ದಾರ್‌, ಸುಳ್ಯ

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.