ರಸ್ತೆ ಬದಿ ಬೃಹತ್‌ ಸ್ವತ್ಛತೆ ಆಂದೋಲನ


Team Udayavani, Nov 26, 2018, 9:22 AM IST

ujire.jpg

ಬೆಳ್ತಂಗಡಿ: ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಹುಟ್ಟುಹಬ್ಬ ಹಾಗೂ ಕ್ಷೇತ್ರದ ಲಕ್ಷದೀಪೋತ್ಸವದ ಅಂಗವಾಗಿ ರವಿವಾರ ಉಜಿರೆಯಿಂದ ಧರ್ಮಸ್ಥಳದವರೆಗೆ ಬೃಹತ್‌ ಸ್ವತ್ಛತಾ ಆಂದೋಲನ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 11 ವಲಯಗಳ ಸದಸ್ಯರಿಂದ ತಾಲೂಕಿನ ವಿವಿಧೆಡೆ ಸ್ವತ್ಛತಾ ಕಾರ್ಯ
ಕ್ರಮವೂ ಇದೇವೇಳೆ ನೆರವೇರಿತು.

ಮುಂಜಾನೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಚಾಲನೆ ನೀಡಲಾಯಿತು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ, ಉಜಿರೆ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯ ರಾಘವ ಪಡ್ವೆಟ್ನಾಯ, ಪ್ರತಾಪ್‌ಸಿಂಹ ನಾಯಕ್‌, ಮಹಾವೀರ ಅಜ್ರಿ ಪಾಲ್ಗೊಂಡಿದ್ದರು.

ಉಜಿರೆಯಿಂದ ಧರ್ಮಸ್ಥಳದ ವರೆಗೆ ರಸ್ತೆ ಬದಿ ಕಸ ಹಾಕದಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಆಂದೋಲನ ಆಯೋಜಿಸ ಲಾಗಿದ್ದು, ಶೂನ್ಯ ಕಸ ವಲಯ ಎಂಬ ಫಲಕಗಳನ್ನು ಹಾಕಿ ನಿರಂತರ ಅಭಿಯಾನ ನಡೆಸುವ ಕುರಿತು ಅಭಿಪ್ರಾಯಗಳು ವ್ಯಕ್ತವಾಗಿವೆ.

ಗಣ್ಯರಿಂದ ಗೌರವ
ಡಾ| ಹೆಗ್ಗಡೆ ಅವರ ಅಭಿಮಾನಿಗಳು ಕ್ಷೇತ್ರಕ್ಕೆ ಆಗಮಿಸಿ ಗೌರವ ಸಲ್ಲಿಸಿ, ಆಶೀರ್ವಾದ ಪಡೆದರು. ಕೆ. ಪ್ರತಾಪಸಿಂಹ ನಾಯಕ್‌, ಎಸ್‌ಬಿಐ ಮಹಾಪ್ರಬಂಧಕ ಇಂದು ಶೇಖರ್‌, ಪರಿಷತ್‌ ಸದಸ್ಯ ಕೆ. ಹರೀಶ್‌ ಕುಮಾರ್‌, ಸ್ವಾತಂತ್ರ ಹೋರಾಟಗಾರ ಪಡಂಗಡಿ ಭೋಜರಾಜ ಹೆಗ್ಡೆ, ಪ್ರೊ| ಎಂ. ರಾಮಚಂದ್ರ, ಬಿಳಿಯೂರು ಧನ್ಯಕುಮಾರ್‌ ರೈ ಶುಭ ಹಾರೈಸಿದರು. ಜತೆಗೆ ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಕಲಿಯುತ್ತಿರುವ ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಡಾ| ಹೆಗ್ಗಡೆ ಅವರಿಗೆ ಕೇಕ್‌ ನೀಡಿ ಶುಭಾಶಯ ಕೋರಿದರು.

408 ಚೀಲ ಕಸ ಸಂಗ್ರಹ
ಸ್ವತ್ಛತಾ ಕಾರ್ಯದಲ್ಲಿ ಡಾ| ಹೆಗ್ಗಡೆ ಅವರ ಅಭಿಮಾನಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಜನಪ್ರತಿನಿಧಿಗಳು, ಸಂಘ-ಸಂಸ್ಥೆಯವರು, ಕಾಲೇಜಿನ ವಿದ್ಯಾರ್ಥಿಗಳು, ಗ್ರಾ.ಪಂ. ಸದಸ್ಯರು, ತಾಲೂಕಿನ ಸ್ವತ್ಛತಾ ಸೇನಾನಿಗಳು, ಜನಜಾಗೃತಿ ವೇದಿಕೆ ಸದಸ್ಯರು, ಪ್ರಗತಿ ಬಂಧು ಒಕ್ಕೂಟ ಸದಸ್ಯರು ಸೇರಿ 350ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಒಟ್ಟು 408 ಗೋಣಿಚೀಲಗಳಲ್ಲಿ ಕಸ ಸಂಗ್ರಹವಾಗಿದ್ದು, ಎರಡು ಕಸ ಸಂಗ್ರಹ ವಾಹನಗಳ ಮೂಲಕ ವಿಲೇವಾರಿ ಮಾಡಲಾಯಿತು. ಬೆಳ್ತಂಗಡಿ ಸರಕಾರಿ ಆಸ್ಪತ್ರೆಯವರು 400 ಕೈಚೀಲ (ಗ್ಲೌಸ್‌)ಗಳನ್ನು ನೀಡಿದ್ದು, ಉಜಿರೆ ರಾಮಚಂದ್ರ ಶೆಟ್ಟಿ ಅವರು ಗೋಣಿಚೀಲಗಳ ವ್ಯವಸ್ಥೆ ಮಾಡಿದ್ದರು.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.