ಶೋಷಿತ, ನಿರ್ಗತಿಕ ಮಹಿಳೆಯರಿಗೆ “ಸ್ವಾಧಾರ’

ಮಂಗಳೂರಿನಲ್ಲಿ ವೃತ್ತಿ ಕೌಶಲ ತರಬೇತಿ ಸಹಿತ ಸ್ವಾಧಾರ ಗೃಹ

Team Udayavani, May 22, 2022, 6:40 AM IST

ಶೋಷಿತ, ನಿರ್ಗತಿಕ ಮಹಿಳೆಯರಿಗೆ “ಸ್ವಾಧಾರ’

ಮಂಗಳೂರು: ದೌರ್ಜನ್ಯಕ್ಕೊಳಗಾದ, ನಿರ್ಗತಿಕ ಹೆಣ್ಣು ಮಕ್ಕಳಿಗೆ ರಕ್ಷಣೆ ಮತ್ತು ಆಶ್ರಯ ಮಾತ್ರವಲ್ಲದೆ ಉತ್ತಮ ಭವಿಷ್ಯಕ್ಕೆ ಆಧಾರವಾಗುವ ವೃತ್ತಿ ಕೌಶಲ ತರಬೇತಿ ಸಹಿತವಾದ “ಸ್ವಾಧಾರ’ ಕೇಂದ್ರ ಮಂಗಳೂರು ಹೊರವಲಯದ ಮುಡಿಪುವಿನಲ್ಲಿ ಆರಂಭಗೊಳ್ಳಲಿದೆ.

ರಾಜ್ಯದಲ್ಲೇ ಪ್ರಥಮವೆನಿಸಿದ ಈ ಸ್ವಾಧಾರ ಗೃಹವು ಕೇಂದ್ರ ಸರಕಾರದ ಎಲ್ಲ ಮಾನದಂಡಗಳಿಗೆ ಅನುಗುಣವಾಗಿ ರೂಪುಗೊಳ್ಳುತ್ತಿದೆ. ಶೋಷಿತ, ನಿರ್ಗತಿಕ ಮಹಿಳೆಯರು ಬದುಕು ಕಟ್ಟಿಕೊಳ್ಳಲು ನೆರವಾಗುವ ಕೌಶಲಭಿವೃದ್ಧಿ ತರಬೇತಿ ವ್ಯವಸ್ಥೆ ಇಲ್ಲಿನ ವೈಶಿಷ್ಟ್ಯ. ಪ್ರಸ್ತುತ ಮಂಗಳೂರಿನ ಜಪ್ಪಿನಮೊಗರಿನಲ್ಲಿ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು 38 ಮಹಿಳೆಯರು ಆಶ್ರಯ ಪಡೆದುಕೊಂಡಿದ್ದಾರೆ. 50ರಿಂದ 75 ಮಂದಿಗೆ ಅವಕಾಶವಿದೆ.

ತರಬೇತಿಗಾಗಿಯೇ ಪ್ರತ್ಯೇಕ ಸಭಾಂಗಣ ಮೀಸಲಿದ್ದು ಅದಕ್ಕೆ ಸಂಬಂಧಿಸಿದ ಪೂರಕ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಫ್ಯಾಷನ್‌ ಡಿಸೈನಿಂಗ್‌, ಟೈಲರಿಂಗ್‌, ನ್ಯಾಪ್‌ಕಿನ್‌ ತಯಾರಿ ಹಾಗೂ ಕೆಲವು ಗುಡಿ ಕೈಗಾರಿಕೆಗಳ ತರಬೇತಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ನೂತನ ಕಟ್ಟಡದ ಪಕ್ಕದಲ್ಲೇ ಇರುವ “ವೊಕೇಶನ್‌ ಸ್ಕಿಲ್‌ ಟ್ರೈನಿಂಗ್‌ ಸೆಂಟರ್‌’ ನಲ್ಲಿ ವಿವಿಧ ತಾಂತ್ರಿಕ ವೃತ್ತಿ, ವಾಹನ ಚಾಲನೆ, ಫ್ಯಾಶನ್‌ ಡಿಸೈನಿಂಗ್‌, ಆ್ಯನಿಮೇಷನ್‌ ಸೇರಿದಂತೆ ವಿವಿಧ ತರಬೇತಿಗಳನ್ನು ನೀಡಲು ಉದ್ದೇಶಿಸಲಾಗಿದೆ.

3 ವರ್ಷದವರೆಗೆ ಆಶ್ರಯ
ಲೈಂಗಿಕ ದೌರ್ಜನ್ಯ, ಕೌಟುಂಬಿಕ ಶೋಷಣೆಗೊಳಗಾದ, ನಿರ್ಗತಿಕರಾದ 18ರಿಂದ 45 ವರ್ಷದೊಳಗಿನ ಮಹಿಳೆ ಯರಿಗೆ ಗರಿಷ್ಠ 3 ವರ್ಷಗಳವರೆಗೆ ಸ್ವಾಧಾರ ಕೇಂದ್ರದಲ್ಲಿ ಉಳಿದುಕೊಳ್ಳಲು ಅವಕಾಶವಿದೆ. ಇಲ್ಲಿ ಅಗತ್ಯವಾದ ಚಿಕಿತ್ಸೆ, ಶಿಕ್ಷಣವನ್ನೂ ನೀಡಲಾಗುತ್ತದೆ. ಕೇಂದ್ರದಲ್ಲಿ ಉಳಿದುಕೊಳ್ಳಲು 5 ಡಾರ್ಮಿಟರಿಗಳಿವೆ. ಟ್ರೈನಿಂಗ್‌ ಹಾಲ್‌, ವೈದ್ಯರ ಕೊಠಡಿ, ಡೆಲಿವರಿ ರೂಮ್‌, ಕೌನ್ಸೆಲಿಂಗ್‌ ಕೊಠಡಿ, ಡೈನಿಂಗ್‌ ಹಾಲ್‌ ಮೊದಲಾದವುಗಳಿವೆ. ದೌರ್ಜನ್ಯಕ್ಕೊಳಗಾದ ಮಹಿಳೆ/ಮಗುವಿನ ಸುರಕ್ಷೆಗೆ ಗರಿಷ್ಠ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗಿದೆ.

ದೌರ್ಜನ್ಯಕ್ಕೊಳಗಾದ ಮತ್ತು ನಿರ್ಗತಿಕ ಮಹಿಳೆಯರಿಗೆ ಆಶ್ರಯ ಒದಗಿಸುವುದರೊಂದಿಗೆ ಹೊಸ ಬದುಕನ್ನು ಕಟ್ಟಿಕೊಳ್ಳಲು ಅಗತ್ಯವಾದ ಕೌಶಲಭಿವೃದ್ಧಿ ತರಬೇತಿಗೂ ವ್ಯವಸ್ಥೆ ಮಾಡಲಾಗುತ್ತಿದೆ. ನೊಂದ ಮಹಿಳೆಯರಿಗೆ ಗರಿಷ್ಠ ಸೇವೆ ಒದಗಿಸಲು ನೂತನ ಸ್ವಾಧಾರ ಕೇಂದ್ರದಿಂದ ಸಾಧ್ಯವಾಗಲಿದೆ.
– ಪ್ರೊ| ಹಿಲ್ಡಾ ರಾಯಪ್ಪನ್‌, ನಿರ್ದೇಶಕರು,
ಪ್ರಜ್ಞಾ ಕೌನ್ಸೆಲಿಂಗ್‌ ಸೆಂಟರ್‌, ಮಂಗಳೂರು

ಸ್ವಾಧಾರ ಗೃಹದ ನೂತನ ಕಟ್ಟಡ ಎಂಆರ್‌ಪಿಎಲ್‌ ಸಿಎಸ್‌ಆರ್‌ ನಿಧಿಯ ನೆರವಿನೊಂದಿಗೆ ಅಂದಾಜು 2.67 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದ್ದು ಎರಡು ತಿಂಗಳೊಳಗೆ ಸೇವೆ ಆರಂಭಿಸುವ ನಿರೀಕ್ಷೆ ಇದೆ. ಇದರ ನಿರ್ವಹಣೆಯನ್ನು ಈಗಾಗಲೇ ಸ್ವಾಧಾರ ಕೇಂದ್ರ ನೋಡಿಕೊಳ್ಳುತ್ತಿರುವ ಪ್ರಜ್ಞಾ ಕೌನ್ಸೆಲಿಂಗ್‌ ಸೆಂಟರ್‌ ಮಾಡಲಿದೆ. – ಡಾ| ರಾಜೇಂದ್ರ ಕೆ.ವಿ., ಜಿಲ್ಲಾಧಿಕಾರಿ, ದ.ಕ. ಜಿಲ್ಲೆ

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.