ಸಿದ್ದಕಟ್ಟೆ: ಕೆಲವು ಮೂಲ ಸೌಕರ್ಯ ಒದಗಿಸಿದರೆ ಸುಸಜ್ಜಿತ ಪೇಟೆ


Team Udayavani, Aug 13, 2018, 11:09 AM IST

13-agust-3.jpg

ಪುಂಜಾಲಕಟ್ಟೆ : ಸಿದ್ದಕಟ್ಟೆಗೆ ಒಂದು ಸುಸಜ್ಜಿತ ಪಟ್ಟಣವಾಗುವ ಎಲ್ಲ ಸಾಧ್ಯತೆಗಳು ಇವೆ. ಅದಕ್ಕೆ ಪೂರಕವಾಗಿ ಇಲ್ಲಿನ ಜಂಕ್ಷನ್‌ ಕಳೆಗಟ್ಟಬೇಕು.

ಇದು ಇಲ್ಲಿ ಕೇಳಿಬರುತ್ತಿರುವ ಅಭಿಪ್ರಾಯ. ಯಾಕೆಂದರೆ, ಮೂಡಬಿದಿರೆ, ಬಂಟ್ವಾಳ-ಬಿ.ಸಿ. ರೋಡ್‌, ವೇಣೂರು – ಈ ಮೂರು ಊರುಗಳನ್ನು ಸಂಪರ್ಕಿಸುವ ಕೇಂದ್ರ ಸ್ಥಳ ಸಿದ್ದಕಟ್ಟೆ ಜಂಕ್ಷನ್‌. ಸಂಗಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಕೇಂದ್ರ ಸ್ಥಳವಾದ ಈ ಜಂಕ್ಷನ್‌ ಸುತ್ತಮುತ್ತ ಈಗಾಗಲೇ ಪೇಟೆ ಹರಡಿಕೊಂಡಿದೆ. ಇತ್ತೀಚಿನ ಹತ್ತು ವರ್ಷಗಳಲ್ಲಿ ಈ ಜಂಕ್ಷನ್‌ ಬೆಳೆದ ರೀತಿ ಗಮನಿಸಿದರೆ, ಮುಂದಿನ ಹತ್ತು ವರ್ಷಗಳಲ್ಲಿ ಕನಿಷ್ಠವೆಂದರೂ ಈಗಿನ ಎರಡು- ಮೂರರಷ್ಟು ಬೆಳೆಯುವ ಸಾಧ್ಯತೆ ಇದೆ. ಅದಕ್ಕೆ ಪೂರಕವಾಗಿ ಅಭಿವೃದ್ಧಿ ಯೋಜನೆಗಳನ್ನೂ ಕೈಗೊಳ್ಳುವ ಹೊಣೆಗಾರಿಕೆ ಸ್ಥಳೀಯ ಆಡಳಿತದ ಮೇಲಿದೆ.

ಮೂವರದ್ದೂ ಪಾಲು
ಈ ಜಂಕ್ಷನ್‌ ಅಭಿವೃದ್ಧಿಯಲ್ಲಿ ಮೂವರ ಪಾಲಿದೆ. ಅಂದರೆ ಮೂಡಬಿದಿರೆ, ಬಂಟ್ವಾಳ, ಬೆಳ್ತಂಗಡಿ-ಮೂರೂ ತಾಲೂಕುಗಳ ಗಡಿಭಾಗ ಸಿದ್ದಕಟ್ಟೆ. ಹಾಗಾಗಿ ಮೂರೂ ತಾಲೂಕುಗಳ ಸಂಪರ್ಕ ಕೊಂಡಿ. ಇದೇ ಕಾರಣಕ್ಕಾಗಿ ಮೂರೂ ತಾಲೂಕುಗಳ ಸಂಘಟಿತ ಪ್ರಯತ್ನವೂ ಅಭಿವೃದ್ಧಿಗೆ ಅವಶ್ಯವಿದೆ. ಇಲ್ಲಿ ತುರ್ತಾಗಿ ಆಗಬೇಕಾದದ್ದು ಸರ್ಕಲ್‌ ಮತ್ತು ಬಸ್‌ ನಿಲ್ದಾಣ, ರಿಕ್ಷಾ ಪಾರ್ಕಿಂಗ್‌ ವ್ಯವಸ್ಥೆ ಹಾಗೂ ರಸ್ತೆ ಡಿವೈಡರ್‌ಗಳು.

ಮೂಡಬಿದಿರೆಯಲ್ಲಿ ಹಲವು ಶಿಕ್ಷಣ ಸಂಸ್ಥೆಗಳಿದ್ದು, ಹಲವರು ಶಿಕ್ಷಣಕ್ಕೆ ತೆರಳುತ್ತಾರೆ. ಬಂಟ್ವಾಳ ತಾ|ಕಿನ ಗ್ರಾಮಸ್ಥರಿಗೆ ತಾಲೂಕು ಕೇಂದ್ರ ಬಿ.ಸಿ. ರೋಡ್‌ ಆಗಿದ್ದು, ಅಲ್ಲಿಗೆ ತೆರಳುವರೂ ಹೆಚ್ಚು. ಸಿದ್ದಕಟ್ಟೆಯಲ್ಲಿ ಖಾಸಗಿ ಪ್ರಾಥಮಿಕ, ಪ್ರೌಢ, ಪದವಿಪೂರ್ವ ಶಿಕ್ಷಣ ಸಂಸ್ಥೆಗಳು, ಸರಕಾರಿ ಪ್ರೌಢ, ಪದವಿ ಪೂರ್ವ, ಪದವಿ ಕಾಲೇಜುಗಳಿದ್ದು, ನಿತ್ಯವೂ ಸಾವಿರಾರು ವಿದ್ಯಾರ್ಥಿಗಳು ಈ ಜಂಕ್ಷನ್‌ ಬಳಸಿಯೇ ತೆರಳುತ್ತಾರೆ. ಸಂಗಬೆಟ್ಟು ಗ್ರಾ.ಪಂ. ಕಚೇರಿ, ಅಂಚೆ ಕಚೇರಿ, ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳು, ವಾಣಿಜ್ಯ ಕೇಂದ್ರಗಳು, ಮಾರುಕಟ್ಟೆ, ಉಪ ಆರೋಗ್ಯ ಕೇಂದ್ರ ಇವುಗಳಿಗೆ ಸುಮಾರು 3ರಿಂದ 5 ಸಾವಿರ ಮಂದಿ ಹೋಗುತ್ತಾರೆ.

ಈ ಭಾಗದಲ್ಲಿ ಖಾಸಗಿ ಬಸ್‌ ಸಂಚಾರ ಮಾತ್ರವಿದ್ದು, ನಿತ್ಯವೂ 200ಕ್ಕೂ ಹೆಚ್ಚು ಟ್ರಿಪ್‌ ಇದೆ. ಬಂಟ್ವಾಳ-ಮೂಡಬಿದಿರೆ ರಸ್ತೆ ಅಗಲಗೊಂಡಿದ್ದರಿಂದ ಟ್ರಾಫಿಕ್‌ ಜಾಮ್‌ ಸಮಸ್ಯೆ ಇಲ್ಲ. ವೇಣೂರು ರಸ್ತೆ ಬದಿ ಕಡಿಮೆ ಸ್ಥಳವಿರುವ ಕಾರಣ ಏಕಕಾಲದಲ್ಲಿ ಎದುರು ಬದುರಾಗಿ ಎರಡು ಘನ ವಾಹನಗಳು ಬಂದರೆ ಟ್ರಾಫಿಕ್‌ ಜಾಮ್‌ ಸಾಮಾನ್ಯ. ಇದನ್ನು ಪೊಲೀಸರ ಅಗತ್ಯವಿಲ್ಲದೆ ಸಾರ್ವಜನಿಕರೇ ನಿಭಾಯಿಸುತ್ತಾರೆ ಎಂಬುದು ಸ್ಥಳೀಯರ ಹೇಳಿಕೆ. ಇದಕ್ಕೂ ಒಂದು ಪರಿಹಾರ ದೊರಕಬೇಕಿದೆ.

ಕೂಡಲೇ ಬೀದಿದೀಪ ಉರಿಯಲಿ
ಪ್ರಸ್ತುತ ಜಂಕ್ಷನ್‌ನ ಮಧ್ಯ ಭಾಗದಲ್ಲಿ ವಿಶಾಲವಾದ ವೃತ್ತವೊಂದನ್ನು ನಿರ್ಮಿಸಿದರೆ ಸುತ್ತಲೂ ಸ್ಥಳ ಸಿಗುವುದರಿಂದ ವಾಹನ ಸಂಚಾರ ಸುಗಮವಾಗಲಿದೆ. ಇಲ್ಲಿರುವ ಹೈಮಾಸ್ಟ್‌ ದೀಪಸ್ತಂಭದಲ್ಲಿ ಒಂದೇ ದೀಪ ಉರಿಯುತ್ತಿದ್ದು, ಮೂರೂ ದೀಪಗಳು ಉರಿಸಲು ಪಂಚಾಯತ್‌ ಕೂಡಲೇ ಕ್ರಮ ಕೈಗೊಳ್ಳಬೇಕಿದೆ.

ಇಲ್ಲಿ ಜನಸಂಚಾರಕ್ಕೆ ತಕ್ಕಂತೆ ಆಟೋ ರಿಕ್ಷಾಗಳ ಸಂಖ್ಯೆಯೂ ಜಾಸ್ತಿಯಾಗಿದೆ. ಸುತ್ತಮುತ್ತ ಸಾಕಷ್ಟು ಖಾಸಗಿ ಒಡೆತನದ ಅಂಗಡಿ ಮುಂಗಟ್ಟುಗಳಿದ್ದು, ಅವುಗಳ ಎದುರು ನೋ ಪಾರ್ಕಿಂಗ್‌ ಫ‌ಲಕ ಹಾಕಲಾಗಿದೆ. ಆದ ಕಾರಣ ರಿಕ್ಷಾ ಪಾರ್ಕಿಂಗ್‌ ಗೆ ಸೂಕ್ತ ಜಾಗ ನೀಡಬೇಕಿದೆ. ಪಂಚಾಯತ್‌ ಸೂಚಿಸಿದ ಸ್ಥಳದಲ್ಲಿ ನಿಲ್ಲಿಸಲು ಒಪ್ಪದ ರಿಕ್ಷಾ ಚಾಲಕರು, ರಸ್ತೆಯ ಬದಿಗಳಲ್ಲಿ ನಿಲ್ಲಿಸುತ್ತಿದ್ದಾರೆ. ಇದರಿಂದ ಪಾದಚಾರಿಗಳಿಗೆ, ಬಸ್‌ಗಾಗಿ ಕಾಯುವವರಿಗೆ ಸ್ವಲ್ಪಮಟ್ಟಿನ ತೊಂದರೆಯಾಗುತ್ತಿದೆ. ಆದ್ದರಿಂದ ರಿಕ್ಷಾ ನಿಲ್ಲಿಸಲು ಸೂಕ್ತ ಸ್ಥಳವನ್ನು ನೀಡಬೇಕಿದೆ.

ಸುಸಜ್ಜಿತ ಬಸ್‌ ನಿಲ್ದಾಣವಾಗಲಿ
ಬಂಟ್ವಾಳ-ಮೂಡಬಿದಿರೆ ರಸ್ತೆಯಲ್ಲಿ ಎರಡೂ ಬದಿಗೆ ಬಸ್‌ ನಿಲ್ದಾಣವಿದೆ. ಆದರೆ ಇವು ಚಿಕ್ಕದು. ಬಂಟ್ವಾಳ ಕಡೆಯ ಬಸ್‌ ನಿಲ್ದಾಣ ಖಾಸಗಿ ನಿರ್ಮಿತ. ವೇಣೂರು ಕಡೆ ಬಸ್‌ ನಿಲ್ದಾಣವಿಲ್ಲ. ಮೂರೂ ಕಡೆ ಸುಸಜ್ಜಿತ ಬಸ್‌ ನಿಲ್ದಾಣವಾಗಬೇಕಿದೆ. ಈ ಹಿಂದೆ ಇಲ್ಲಿನ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆ 1ಕೋಟಿ ರೂ. ಅನುದಾನ ನೀಡಿದ್ದರೂ ಯೋಜಿತ ಕಾಮಗಾರಿ ಸಮರ್ಪಕವಾಗಿಲ್ಲ. ಆದ ಕಾರಣ ಡಿವೈಡರ್‌ ಬಳಸಿ ದ್ವಿಪಥ ರಸ್ತೆ ನಿರ್ಮಿಸುವ ಯೋಜನೆ ನನೆಗುದಿಗೆ ಬಿದ್ದಿದೆ. ರಸ್ತೆ ಡಿವೈಡರ್‌ ನಿರ್ಮಿಸಿದಲ್ಲಿ ವಾಹನಗಳ ಅಡ್ಡಾದಿಡ್ಡಿ ಚಲನೆಗೆ ತಡೆ ಬೀಳುವುದಲ್ಲದೇ ವಾಹನಗಳು ಮತ್ತು ಪಾದಚಾರಿಗಳಿಗೆ ಸಂಚಾರ ಸುಗಮವಾಗಲಿದೆ. ಜತೆಗೆ ರಸ್ತೆ ಸೂಚನ ಫಲಕಗಳನ್ನೂ ಅಳವಡಿಸಬೇಕು.

ಇವರಿಗೆಲ್ಲ ಇದೇ ಪೇಟ
ಸಂಗಬೆಟ್ಟು, ಕುಕ್ಕಿಪಾಡಿ, ಆರಂಬೋಡಿ, ರಾಯಿ, ಅರಳ, ಇರುವೈಲು 6 ಗ್ರಾಮ ಪಂ.ಗಳ ಸಂಗಬೆಟ್ಟು, ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು, ಆರಂಬೋಡಿ, ಗುಂಡೂರಿ, ಅರಳ, ರಾಯಿ, ಕೊಯಿಲ, ಪುಚ್ಚೆಮೊಗರು ಹೀಗೆ 10 ಗ್ರಾಮಗಳ ಸಿದ್ದಕಟ್ಟೆ, ಕರ್ಪೆ, ಹೆಣ್ಣೂರುಪದವು, ರಾಯಿ, ಕೊಯಿಲ, ಅರಳ ಅಣ್ಣಳಿಕೆ, ಕುದ್ಕೋಳಿ, ಪುಚ್ಚೆಮೊಗರು, ಸಂಗಬೆಟ್ಟು, ಆರಂಬೋಡಿ, ಹೊಕ್ಕಾಡಿಗೋಳಿ, ಹನ್ನೆರಡುಕವಲು, ಉಪ್ಪಿರ, ಪೂಂಜ, ಗುಂಡೂರಿ, ಉಮನೊಟ್ಟು, ಕೊನೆರೊಟ್ಟು ಪ್ರದೇಶಗಳ ಜನರು ವ್ಯವಹಾರಗಳಿಗೆ ಈ ಪೇಟೆಯನ್ನೇ ಅವಲಂಬಿಸಿದ್ದಾರೆ.

ಸೌಲಭ್ಯಗಳಿಗೆ ಗಮನ
ಪಂಚಾಯತ್‌ನಲ್ಲಿ ತ್ಯಾಜ್ಯ ವಿಲೇವಾರಿ ಘಟಕವಿದ್ದು, 2 ದಿನಗಳಿಗೊಮ್ಮೆ ತ್ಯಾಜ್ಯ ವಿಲೇವಾರಿ ನಡೆಸಲಾಗುತ್ತಿದೆ. ಸ್ವಚ್ಛತೆ ಬಗ್ಗೆ ಶಾಲೆ, ಕಾಲೇಜು, ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಅಧಿಕೃತ ರಿಕ್ಷಾ ಪಾರ್ಕಿಂಗ್‌ಗೆ ಸ್ಥಳ ಸೂಚಿಸಿದ್ದು, ಬಸ್‌ ನಿಲ್ದಾಣದ ನಿರ್ಮಾಣಕ್ಕೆ ಸ್ಥಳದ ಕೊರತೆ ಇದೆ.
– ಸಿಲ್ವಿಯಾ ಫೆರ್ನಾಂಡಿಸ್‌
ಪಂ.ಅ. ಅಧಿಕಾರಿ, ಸಂಗಬೆಟ್ಟು ಗ್ರಾ.ಪಂ

ರತ್ನದೇವ್‌ ಪುಂಜಾಲಕಟ್ಟೆ

ಟಾಪ್ ನ್ಯೂಸ್

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.