ಅಕ್ರಮ ಮರಳು ಅಡ್ಡೆಗೆ ಮಧ್ಯರಾತ್ರಿ ದಾಳಿ ನಡೆಸಿದ ಬಂಟ್ವಾಳ ತಹಶಿಲ್ದಾರ್; ಆರೋಪಿಗಳು ಪರಾರಿ
Team Udayavani, Jun 26, 2021, 7:45 AM IST
ಬಂಟ್ವಾಳ: ರಾತ್ರಿ ವೇಳೆಯಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಮಾರಾಟ ಮಾಡುತ್ತಿದ್ದ ಸ್ಥಳವೊಂದಕ್ಕೆ ಮಧ್ಯರಾತ್ರಿ ವೇಳೆ ಅರಣ್ಯ ಅಧಿಕಾರಿಗಳ ಜೊತೆ ತಹಶಿಲ್ದಾರ್ ದಾಳಿ ನಡೆಸಿ ಮರಳುಗಾರಿಕೆಗೆ ಬಳಸುವ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಅಡಿ ಭಾಗದಿಂದ ರಾತ್ರಿ ವೇಳೆ ಅಕ್ರಮವಾಗಿ ಮರಳು ತೆಗೆಯಲಾಗುತ್ತಿದೆ ಎಂಬ ಆರೋಪದ ಮೇಲೆ ತಹಶಿಲ್ದಾರ್ ರಶ್ಮಿ. ಎಸ್.ಆರ್.ಅವರು ಗೌಪ್ಯವಾಗಿ ಅರಣ್ಯ ಇಲಾಖಾ ಅಧಿಕಾರಿಗಳ ಜೊತೆ ದಾಳಿ ನಡೆಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ಆರೋಪಿಗಳು ಪರಾರಿಯಾಗಿದ್ದು ಸ್ಥಳದಲ್ಲಿ ಒಂದು ಟಿಪ್ಪರ್, ಒಂದು ದೋಣಿ ಬಿಟ್ಟು ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಕನ್ನಡಕ ಇದ್ದುದಕ್ಕೆ ವರನ ತಿರಸ್ಕರಿಸಿದ ವಧು!
ಜಿಲ್ಲಾಡಳಿತದ ಅದೇಶದಂತೆ ಸುರಕ್ಷತೆಯ ದೃಷ್ಟಿಯಿಂದ ಸೇತುವೆಯ ಸಮೀಪ ಇಲಾಖೆ ನಿಗದಿಪಡಿಸಿದ ದೂರದವರೆಗೆ ಯಾವುದೇ ಕಾರಣಕ್ಕೂ ಮರಳುಗಾರಿಕೆ ಮಾಡಬಾರದೆಂಬ ಕಟ್ಟು ನಿಟ್ಟಿನ ಆದೇಶ ಇದ್ದರೂ ಕೂಡ ಅಕ್ರಮವಾಗಿ ರಾತ್ರಿ ವೇಳೆ ಮೆಷಿನ್ ಬಳಕೆ ಮಾಡಿ ಮರಳು ತೆಗೆಯುವುದರ ಬಗ್ಗೆ ದೂರುಬಂದ ಹಿನ್ನೆಲೆಯಲ್ಲಿ ಖಚಿತ ಮಾಹಿತಿ ಆದರಿಸಿ ರಾತ್ರಿ ದಿಡೀರ್ ದಾಳಿ ನಡೆಸಿದ್ದಾರೆ.
ವಶಪಡಿಸಿಕೊಂಡ ಸೊತ್ತುಗಳ ಆಧಾರದ ಮೇಲೆ ಹೆಚ್ಚಿನ ತನಿಖೆ ಮುಂದುವರಿಸಲಾಗಿದೆ. ತಹಶಿಲ್ದಾರ್ ರಶ್ಮಿ. ಎಸ್.ಆರ್ ಅವರು ಈ ಹಿಂದೆಯೂ ಅಕ್ರಮ ಮರಳುಗಾರಿಕೆ ಬಗ್ಗೆ ಅನೇಕ ದಾಳಿ ನಡೆಸಿ ಕಾನೂನು ಕ್ರಮ ಕೈಗೊಂಡಿದ್ದರು.
ಇದನ್ನೂ ಓದಿ: ಚಿತ್ರದುರ್ಗ: ಲಾರಿಗೆ ಬೈಕ್ ಡಿಕ್ಕಿ : ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು
ಬಂಟ್ವಾಳ ವಲಯ ಅರಣ್ಯ ಧಿಕಾರಿ ರಾಜೇಶ್ ಬಳಿಗಾರ್ ನೇತ್ರತ್ವದ ತಂಡ ದಲ್ಲಿ ಅಧಿಕಾರಿಗಳಾದ ಪ್ರೀತಂ, ಜಿತೇಶ್ ಸಿಬ್ಬಂದಿ ಗಳಾದ ಬಸವ , ಪ್ರವೀಣ್ ಕಾರ್ಯಚರಣೆ ಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!