ಬಾಂಜಾರುಮಲೆಗೆ ತಹಶೀಲ್ದಾರ್ ಭೇಟಿ
Team Udayavani, Aug 7, 2018, 2:30 PM IST
ಬೆಳ್ತಂಗಡಿ: ನೆರಿಯ ಗ್ರಾಮದ ಬಾಂಜಾರುಮಲೆ ಮಲೆಕುಡಿಯ ಕಾಲನಿಗೆ ಸೋಮವಾರ ಬೆಳ್ತಂಗಡಿ ತಹಶೀಲ್ದಾರ್ ಮದನ್ಮೋಹನ್ ಸಿ. ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ನಿವಾಸಿಗಳಿಂದ ಸಮಸ್ಯೆಗಳ ಮಾಹಿತಿ ಪಡೆಯಿತು. ಈ ಪ್ರದೇಶದ ರಸ್ತೆ ಕಾಂಕ್ರೀಟ್ ಕಾಮಗಾರಿಗೆ 2 ಕೋ.ರೂ. ಅನುದಾನ ಮಂಜೂರುಗೊಂಡು 2 ವರ್ಷ ಕಳೆದರೂ ಕಾಮಗಾರಿ ಆರಂಭ ಗೊಳ್ಳದೇ ಇರುವ ಕುರಿತು ಸ್ಥಳೀಯರು ತಹಶೀಲ್ದಾರರ ಬಳಿ ಅಳಲು ತೋಡಿ ಕೊಂಡರು. ಚುನಾವಣೆ ಸಂದರ್ಭ ಪ್ರತಿಭಟನೆ ನಡೆಸಿದಾಗ ಅಧಿಕಾರಿಗಳು ನೀಡಿದ್ದ ಭರವಸೆ ಈಡೇರಿಸಿಲ್ಲ. ಆದಿವಾಸಿಗಳ ಅಭಿವೃದ್ಧಿಗೆ ಕೋಟಿಗಟ್ಟಲೆ ರೂ. ಇದ್ದರೂ ಅಭಿವೃದ್ಧಿಯಾಗದೇ ಇರುವ ಕುರಿತು ಆಕ್ರೋಶ ವ್ಯಕ್ತಪಡಿಸಿದರು.
ಸಮಸ್ಯೆಗಳು ಹಲವು
ಬೇಡಿಕೆ ಆಲಿಸಿದ ತಹಶೀಲ್ದಾರ್ ಮಾತನಾಡಿ, ಇಲ್ಲಿ ಕಂದಾಯಕ್ಕಿಂತ ಇತರ ಇಲಾಖೆ ಗಳ ಸಮಸ್ಯೆಯೇ ಹೆಚ್ಚಿದೆ.
ಐಟಿಡಿಪಿ, ಸಮಾಜ ಕಲ್ಯಾಣ, ಪಂಚಾ ಯತ್ ರಾಜ್ ಎಂಜಿನಿಯರಿಂಗ್ ಇಲಾಖೆ, ಮೆಸ್ಕಾಂ ಇಲಾಖೆಗೆ ಸಂಬಂಧಿ ಸಿದ ಸಮಸ್ಯೆಗಳ ಕುರಿತು ಆಯಾಯ ಇಲಾಖೆಗೆ ಸೂಚಿಸುವುದಾಗಿ ಭರವಸೆ ನೀಡಿದರು. ನಮಗೆ ಭರವಸೆಗಿಂತಲೂ ಪರಿಹಾರ ಬೇಕಿದೆ ಎಂಬ ಜನರ ಒತ್ತಾಯಕ್ಕೆ, ಎಲ್ಲ ಸಮಸ್ಯೆಗಳನ್ನೂ ಜಿಲ್ಲಾಧಿಕಾರಿಯವರ ಗಮನಕ್ಕೆ ತರುತ್ತೇನೆ. ಕಂದಾಯ ಇಲಾಖೆಯ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ನನ್ನ ಗಮನಕ್ಕೆ ತನ್ನಿ ಎಂದರು.
ಬಾಂಜಾರು ಸಮುದಾಯ ಭವನ
ದಲ್ಲಿ ನಡೆದ ಮಾತುಕತೆಯಲ್ಲಿ ನೆರಿಯ ಗ್ರಾ.ಪಂ. ಸದಸ್ಯೆ ಮೀನಾಕ್ಷಿ ಬಾಂಜಾರು ಅವರ ನೇತೃತ್ವದಲ್ಲಿ ಸಮಸ್ಯೆಗಳನ್ನು ಜನರು ತಹಶೀಲ್ದಾರರ ಗಮನಕ್ಕೆ ತಂದರು. ಬೆಳ್ತಂಗಡಿ ಕಂದಾಯ ನಿರೀಕ್ಷಕ ರವಿಕುಮಾರ್, ಪ್ರಥಮ ದರ್ಜೆ ಸಹಾಯಕ ಶಂಕರ್, ನೆರಿಯ ಗ್ರಾಮ ಕರಣಿಕ ಸತೀಶ್ ಮೊದಲಾದವರು ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!