ತನಿಖೆ ನೆಪದಲ್ಲಿ ರಾತ್ರಿ ಮನೆಗೆ ನುಗ್ಗಿ ಅಮಾಯಕರಿಗೆ ಕಿರುಕುಳ ನೀಡಬೇಡಿ: ಶಾಸಕ ಡಾ. ಭರತ್
Team Udayavani, Jul 29, 2022, 12:22 PM IST
ಮಂಗಳೂರು: ಸುರತ್ಕಲ್ ನಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯ ನೆಪದಲ್ಲಿ ರಾತ್ರೋ ರಾತ್ರಿ ಮನೆಗೆ ನುಗ್ಗಿ ಅಮಾಯಕರಿಗೆ ಕಿರುಕುಳ ನೀಡುವುದನ್ನು ಸಹಿಸಲಾಗದು. ನೈಜ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಿ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಪೊಲೀಸ್ ಹಿರಿಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಗೃಹ ಸಚಿವರು ಈಗಾಗಲೇ ಸೂಕ್ತ ತನಿಖೆ ಮಾಡಲು ಆದೇಶ ನೀಡಿದ್ದಾರೆ. ವಿನಾಕಾರಣ ರಾತ್ರೋರಾತ್ರಿ ಮನೆಗಳಿಗೆ ನುಗ್ಗಿ ವಿಚಾರಣೆ ನೆಪದಲ್ಲಿ ಕಿರುಕುಳ ನೀಡುವುದು ಸರಿಯಲ್ಲ.ಸಿಸಿ ಟಿವಿ ಸಾಕ್ಷ್ಯಾಧಾರದಲ್ಲಿ ನೈಜ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಕಾರ್ಯಯೋನ್ಮುಖವಾಗಬೇಕು ಎಂದು ಒತ್ತಾಯಿಸಿ, ಕ್ಷೇತ್ರದಲ್ಲಿ ಶಾಂತಿ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕು ಎಂದರು.
ಕಾಂಗ್ರೆಸ್ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಅವರು ಸುರತ್ಕಲ್ ನಲ್ಲಿ ನಡೆದ ಹತ್ಯೆಯ ಕುರಿತಂತೆ ಕೋಮು ಭಾವನೆ ಕೆರಳಿಸುವ ರೀತಿ ಹೇಳಿಕೆಯನ್ನು ನೀಡಿರುವುದನ್ನು ಖಂಡಿಸುತ್ತೇನೆ. ಪೊಲೀಸರು ಪ್ರಾಥಮಿಕ ತನಿಖೆ ನಡೆಸುತ್ತಿರುವಾಗಲೇ ಮಾಜಿ ಶಾಸಕರು ದುಷ್ಕರ್ಮಿಗಳನ್ನು ಹಿಂದುಗಳು ಎಂಬ ಭಾವನೆಯಲ್ಲಿ ಮಾತನಾಡಿ ಕೋಮು ವೈಶಮ್ಯ ಕೆರಳಿಸುವ ಯತ್ನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಸಚಿವರಾಗಿ ಯು.ಟಿ ಖಾದರ್ ಅವರು ಸಂಯಮದಿಂದ ವರ್ತಿಸಿ ಶಾಂತಿ ಸೌಹಾರ್ದತೆಗೆ ಸಹಕರಿಸಬೇಕು. ಪ್ರಚೋದನಾತ್ನಕ ಹೇಳಿಕೆ ಸರಿಯಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್