ಶಾಲೆ ಮಕ್ಕಳ ವಾಹನ ಸುರಕ್ಷತೆಗೂ ಇರಲಿ ಆದ್ಯತೆ


Team Udayavani, May 28, 2018, 5:25 AM IST

school-auto-27-5.jpg

ಪುತ್ತೂರು: ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳು ಮತ್ತು ಅವುಗಳಲ್ಲಿ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ, ಸಾರಿಗೆ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಕ್ಕಳ ಹೆತ್ತವರು ಶಾಲಾ ಆರಂಭದಿಂದಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಅಗತ್ಯ. ಎರಡು ವರ್ಷಗಳ ಹಿಂದೆ, 2016ರ ಜೂನ್‌ ನಲ್ಲಿ ಕುಂದಾಪುರದ ತ್ರಾಸಿಯಲ್ಲಿ ಶಾಲಾ ಮಕ್ಕಳ ವಾಹನ ಅಪಘಾತಗೊಂಡ ಬಳಿಕ ಎಚ್ಚೆತ್ತುಕೊಂಡ ಇಲಾಖೆಗಳು ಕಠಿನ ನಿಯಮಗಳನ್ನು ಜಾರಿಗೊಳಿಸಿದ್ದವು. ಆದರೆ ಹಲವು ದಿನಗಳು ಕಳೆದ ಬಳಿಕ ಈ ಕ್ರಮಗಳಿಗೆ ಸಾರ್ವಜನಿಕರು, ಶಾಲಾ ವಾಹನಗಳಿಗೆ ಸಂಬಂಧಪಟ್ಟವರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ 2017ನೇ ಸಾಲಿನಲ್ಲಿ ಆರಂಭದಲ್ಲೇ ನಿಯಮಗಳ ಕುರಿತು ಜಾಗೃತಿ ಮೂಡಿಸಿದ ಹಿನ್ನೆಲೆಯಲ್ಲಿ ಅಪಘಾತಗಳ ಪ್ರಮಾಣ ಕಡಿಮೆಯಾಗಿತ್ತು. ಈ ಬಾರಿಯೂ ಇಲಾಖೆಗಳ ಕಡೆಯಿಂದ ಇಂತಹ ಕ್ರಮಗಳ ಆವಶ್ಯಕತೆ ಇದೆ.

ಖಾಸಗಿ ವಾಹನ ಕುರಿತ ಗೊಂದಲ
ಹಲವು ವಿದ್ಯಾಸಂಸ್ಥೆಗಳು ತಮ್ಮ ಮಕ್ಕಳನ್ನು ಶಾಲೆಗೆ ಕರೆತಂದು ಮರಳಿ ಬಿಡಲು ಶಾಲಾ ವಾಹನ ವ್ಯವಸ್ಥೆ ಮಾಡಿಕೊಳ್ಳುತ್ತವೆ. ಆದರೆ ಶಾಲಾ ವಾಹನಗಳಲ್ಲಿ ಬರುವ ಮಕ್ಕಳ ಪ್ರಮಾಣ ಶೇ.30ರಷ್ಟು ಮಾತ್ರ ಇದೆ. ಉಳಿದಂತೆ ಶೇ. 70ರಷ್ಟು ಮಕ್ಕಳು ಸರಕಾರಿ ಬಸ್ಸುಗಳು, ಖಾಸಗಿ ಬಾಡಿಗೆ ರಿಕ್ಷಾ, ಜೀಪುಗಳನ್ನು ಅವಲಂಬಿಸಿದ್ದಾರೆ. ಗ್ರಾಮಾಂತರ ಮಕ್ಕಳು ಈ ವ್ಯವಸ್ಥೆಗಳನ್ನೇ ಹೆಚ್ಚಾಗಿ ಅವಲಂಬಿಸಿದ್ದಾರೆ.

ಖಾಸಗಿ ಬಾಡಿಗೆ ವಾಹನಗಳಲ್ಲಿ ಎಷ್ಟು ಶಾಲಾ ಮಕ್ಕಳನ್ನು ಕರೆದೊಯ್ಯಬಹುದು ಎಂಬ ಕುರಿತು ಗೊಂದಲಗಳಿವೆ. ಮಕ್ಕಳನ್ನು ಕಿಕ್ಕಿರಿದು ಕರೆದೊಯ್ಯುವುದು ಹಾಗೂ ಆ ವಾಹನಗಳಲ್ಲಿ ಸುರಕ್ಷತೆ ಇಲ್ಲದಿರುವುದು ಚರ್ಚೆಯ ವಿಚಾರ. ಆದರೆ ಹಲವು ವಾಹನ ಚಾಲಕರು -ಮಾಲಕರಿಗೆ ಇದೇ ಹೊಟ್ಟೆ ಹೊರೆಯುವ ಹಾದಿ. ಪ್ರಸ್ತುತ ವಾಹನಗಳ ಟ್ಯಾಕ್ಸ್‌, ಇನ್ಶೂರೆನ್ಸ್‌ ಹೆಚ್ಚಳವಾಗಿದ್ದು, ಮಕ್ಕಳನ್ನು ಸಾಗಿಸುವ ನಿಯಮದಲ್ಲಿ ಸಡಿಲಿಕೆ ಮಾಡಿಕೊಳ್ಳಬೇಕೆಂಬ ಒತ್ತಾಯವೂ ವಾಹನಗಳ ಮಾಲಕರ ಕಡೆಯಿಂದ ಇದೆ.

ಹೀಗಿದೆ RTO ನಿಯಮ
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಮಕ್ಕಳನ್ನು ಕರೆದೊಯ್ಯುವಾಗ ಶಾಲಾ ಬಸ್ಸುಗಳು ಅನುಸರಿಸಬೇಕಾದ ಕ್ರಮಗಳ ಕುರಿತು RTO ಮೂಲಕ ನಿರ್ದೇಶನ ನೀಡಲಾಗಿದೆ.
– ಶಾಲಾ ಬಸ್ಸಿನ ಹಿಂಭಾಗ ಹಾಗೂ ಮುಂಭಾಗದಲ್ಲಿ ಕಡ್ಡಾಯವಾಗಿ ಶಾಲಾ ಬಸ್ಸು ಎಂದು ಬರೆದಿರಬೇಕು.
– ವಿದ್ಯಾಸಂಸ್ಥೆಗಳು ಶಾಲಾ ಬಸ್ಸಿನ ವ್ಯವಸ್ಥೆ ಕಲ್ಪಿಸಿದ್ದರೆ ಬಸ್ಸು ಶಾಲಾ ಕರ್ತವ್ಯದಲ್ಲಿದೆ ಎಂಬ ಮಾಹಿತಿಯನ್ನು ಪ್ರದರ್ಶಿಸಬೇಕು.
– ನಿಗದಿಪಡಿಸಿದ ಆಸಗಳಿಗಿಂತ ಹೆಚ್ಚು ಆಸನಗಳನ್ನು ಅಳವಡಿಸಬಾರದು
–  ಪ್ರಥಮ ಚಿಕಿತ್ಸಾ ಬಾಕ್ಸ್‌ನ್ನು ಹೊಂದಿರಬೇಕು
– ಕಿಟಕಿಗಳಿಗೆ ಕಬ್ಬಿಣದ ಸರಳುಗಳನ್ನು ಅಳವಡಿಸಿರಬೇಕು
– ಅಗ್ನಿಶಮನ ಉಪಕರಣ ಹೊಂದಿರಬೇಕು
- ಶಾಲೆಯ ಹೆಸರು ಹಾಗೂ ದೂರವಾಣಿ ಸಂಖ್ಯೆ ಬರೆದಿರಬೇಕು
- ಬಾಗಿಲುಗಳು ಸಮರ್ಪಕ ಲಾಕ್‌ ಹೊಂದಿರಬೇಕು
- ಚಾಲಕರು 5 ವರ್ಷಗಳ ಘನ ವಾಹನ ಚಾಲನಾನುಭವ ಹೊಂದಿರಬೇಕು ಹಾಗೂ ಸಂಚಾರ ನಿಯಮ ಉಲ್ಲಂಘಿಸಿದ ದಾಖಲೆ ಹೊಂದಿರಬಾರದು.
- ಸೀಟುಗಳ ಕೆಲಭಾಗದಲ್ಲಿ ಶಾಲಾ ಬ್ಯಾಗ್‌ ಗಳನ್ನು ಇರಿಸಲು ವ್ಯವಸ್ಥೆ ಇರಬೇಕು.
- ಬಸ್ಸುಗಳಲ್ಲಿ ಶಾಲಾ ಬೆಂಗಾವಲು ಇರಬೇಕು ಹಾಗೂ ಶಿಕ್ಷಕರೋರ್ವರು ಸುರಕ್ಷತಾ ಕ್ರಮವನ್ನು ಪರಿಶೀಲನೆ ನಡೆಸಬೇಕು.
- ಮಕ್ಕಳ ರಕ್ತ ಮಾದರಿಯ ಮಾಹಿತಿ ಇರಬೇಕು.

ಖಾಸಗಿ ವಾಹನಗಳು ಮಕ್ಕಳಿಗೆ ಸಾರಿಗೆ ಸೌಲಭ್ಯ ಒದಗಿಸಬೇಕಾದರೆ…
- ಮೋಟಾರು ವಾಹನ ಕಾಯಿದೆ 1988 ಕಲಂ 74ರ ಪ್ರಕಾರ ವಾಹನ ರಹದಾರಿ ಹೊಂದಿರಬೇಕು
- ವಾಹನದ ಆಸನ ಸಾಮರ್ಥ್ಯ 12+1 ಮೀರಬಾರದು. ನಿಗದಿತ ಆಸನ ಸಾಮರ್ಥ್ಯ ಬದಲಾವಣೆ ಮಾಡಿರಬಾರದು
- ಅನುಮೋದಿತ ಸ್ಪೀಡ್‌ ಗವರ್ನರ್‌ ಅಳವಡಿಸಿದ್ದು, ವೇಗಮಿತಿ ಕಿ.ಮೀ.40ಕ್ಕೆ ನಿಯಂತ್ರಿತವಾಗುವಂತೆ ಇರಬೇಕು.
- ವಾಹನವು ನೋಂದಣಿ ದಿನಾಂಕದಿಂದ 15 ವರ್ಷ ಮೀರಿರಬಾರದು
- ವಾಹನಕ್ಕೆ ಹೆದ್ದಾರಿ ಹಳದಿ ಬಣ್ಣ ಬಳಿಯಬೇಕು ಹಾಗೂ ಇತರ.

ಜಿಲ್ಲಾ ಸಭೆ ಕರೆದಿದ್ದೇವೆ
ಮಕ್ಕಳ ಸುರಕ್ಷತೆಯ ಶಾಲಾ ಪ್ರಯಾಣದ ದೃಷ್ಟಿಯಿಂದ ಶಾಲೆಗಳು, ಪೋಷಕರು, ಪೊಲೀಸ್‌ ಇಲಾಖೆ, RTO ಸಮನ್ವಯತೆಯ ಜವಾಬ್ದಾರಿ ತೋರಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಮತ್ತು ಇತರ ಇಲಾಖೆಗಳ ಜಿಲ್ಲಾ ಸಭೆ ಕರೆದಿದ್ದೇವೆ. ತಾಲೂಕು ವ್ಯಾಪ್ತಿಗಳಲ್ಲೂ ಸೂಕ್ತ ನಿರ್ದೇಶನ ನೀಡಲಿದ್ದೇವೆ.
– ಶಶಿಕಾಂತ ಸೆಂಥಿಲ್‌, ದ.ಕ. ಜಿಲ್ಲಾಧಿಕಾರಿ

ಶಾಲೆಗಳಿಗೆ ನಿರ್ದೇಶನ
ಶಾಲೆಗಳಲ್ಲಿರುವ ಮಕ್ಕಳ ಸುರಕ್ಷಾ ಸಮಿತಿಯ ಸಭೆ ಕರೆಯಬೇಕು. ಈ ಸಮಿತಿಯಲ್ಲಿ ವಾಹನಗಳಲ್ಲಿ ಬರುವ ಮಕ್ಕಳ ಮಾಹಿತಿ, ಕೈಗೊಂಡಿರುವ ಸುರಕ್ಷತೆ ಕ್ರಮಗಳ ಕುರಿತು ಮಾಹಿತಿ ಇರಬೇಕು. ಈ ನಿಟ್ಟಿನಲ್ಲಿ ಸಭೆ ಕರೆದು ಸೂಕ್ತ ನಿರ್ದೇಶನ ನೀಡಲಾಗುವುದು.
– ಸುಕನ್ಯಾ ಡಿ.ಎನ್‌., ಕ್ಷೇತ್ರ ಶಿಕ್ಷಣಾಧಿಕಾರಿ, ಪುತ್ತೂರು

ನಿಯಮ ಪಾಲನೆ
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಶಾಲಾ ವಾಹನಗಳಲ್ಲಿ ಸುರಕ್ಷತೆ ಕ್ರಮಗಳನ್ನು ಅನುಷ್ಠಾನಿಸುವ ಕುರಿತ RTO ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ನಿಯಮ ಮೀರಿದವರಿಗೆ ಶಿಕ್ಷೆ, ದಂಡ ವಿಧಿಸಲಾಗುತ್ತದೆ. ಖಾಸಗಿ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಕೊಂಡೊಯ್ಯದಂತೆ ನಿಯಮವಿದ್ದರೂ ಸಣ್ಣ ನಗರಗಳಲ್ಲಿ ಸಿಟಿ ಬಸ್ಸು ವ್ಯವಸ್ಥೆ ಇಲ್ಲದಿರುವುದರಿಂದ ವಿನಾಯಿತಿ ನೀಡಲಾಗುತ್ತಿದೆ. ಆದರೆ ಮಕ್ಕಳನ್ನು ಮಿತಿಯಲ್ಲಷ್ಟೇ ಕೊಂಡೊಯ್ಯಬೇಕು.
– ಫೆಲಿಕ್ಸ್‌ ಡಿ’ಸೋಜಾ, RTO, ಪುತ್ತೂರು

— ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.