ಕಡಬ: ಇನ್ನೂ ತೆರೆದಿಲ್ಲ ತಾಲೂಕು ಮಟ್ಟದ ಸರಕಾರಿ ಕಚೇರಿಗಳು

ಪತ್ರಾಂಕಿತ ಉಪ ಖಜಾನಾಧಿಕಾರಿಗಳ ಕಚೇರಿ (ಟ್ರೆಜರಿ) ಕೂಡ ನಾಮಫಲಕಕ್ಕೆ ಸೀಮಿತ

Team Udayavani, Nov 8, 2020, 1:16 PM IST

ಕಡಬ: ಇನ್ನೂ  ತೆರೆದಿಲ್ಲ ತಾಲೂಕು ಮಟ್ಟದ ಸರಕಾರಿ ಕಚೇರಿಗಳು

ಕಡಬ, ನ. 7: ನೂತನ ಕಡಬ ತಾಲೂಕು ಉದ್ಘಾಟನೆ ಗೊಂಡು 2 ವರ್ಷಗಳಾದರೂ ಸರಕಾರದ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಕಚೇರಿಗಳು ಇನ್ನೂ ತೆರೆದುಕೊಂಡಿಲ್ಲ. ಆ ಪೈಕಿ ಕಡಬ ತಾಲೂಕು ಪತ್ರಾಂಕಿತ ಉಪ ಖಜಾನಾಧಿಕಾರಿಗಳ ಕಚೇರಿ (ಟ್ರೆಜರಿ) ಕೂಡ ನಾಮಫಲಕಕ್ಕೆ ಸೀಮಿತವಾಗಿದೆ.

ಆರ್ಥಿಕ ಇಲಾಖೆಯು ರಾಜ್ಯ ಹಣಕಾಸಿನ ನಿರ್ವಹಣೆಯ ಕಾರ್ಯಭಾರವನ್ನು ಹೊಂದಿದ್ದು, ಆ ಕಾರ್ಯದಲ್ಲಿ ಖಜಾನೆ ಇಲಾಖೆಯು ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದೆ. ಪ್ರತಿ ತಾಲೂಕು ಕೇಂದ್ರಗಳಲ್ಲಿಯೂ ತಾಲೂಕು ಖಜಾನೆಗಳು ಕಾರ್ಯನಿರ್ವಹಿಸುತ್ತಿವೆ. ಕಡಬದಲ್ಲಿಯೂ ಶೀಘ್ರದಲ್ಲಿ ತಾಲೂಕು ಖಜಾನೆ ಕಾರ್ಯಾರಂಭಿಸಬೇಕೆನ್ನುವುದು ಸ್ಥಳೀಯರ ಆಗ್ರಹ.

ಪುತ್ತೂರಿನಿಂದಲೇ ಕಾರ್ಯನಿರ್ವಹಣೆ :  ಕಡಬದ ತಹಶೀಲ್ದಾರ್‌ ಕಚೇರಿಯ ಬಳಿ ಇರುವ ಎಪಿಎಂಸಿ ಕಟ್ಟಡದಲ್ಲಿನ ಕೊಠಡಿಯೊಂದಕ್ಕೆ ಕಡಬ ತಾಲೂಕು ಪತ್ರಾಂಕಿತ ಉಪ ಖಜಾನಾಧಿಕಾರಿಗಳ ಕಚೇರಿ ಎನ್ನುವ ನಾಮಫಲಕ ಅಳವಡಿಸಿ 2 ತಿಂಗಳುಗಳು ಕಳೆದಿವೆ . ಕಚೇರಿಗೆ ಪೀಠೊಪಕರಣಗಳು, ಕಂಪ್ಯೂಟರ್‌ ಅಳವಡಿಕೆ ಕಾರ್ಯವೂ ಮುಗಿದಿದೆ. ಕಡಬ ತಾ| ಉಪ ಖಜಾನಾಧಿಕಾರಿಗಳ ಕಚೇರಿಗೆ ತಾಲೂಕು ಮಟ್ಟದ ಅಧಿಕಾರಿ ಸೇರಿ ಒಟ್ಟು 6 ಹುದ್ದೆಗಳು ಮಂಜೂರಾಗಿವೆೆ. ಆದರೆ ಕಚೇರಿ ನಾಮಫಲಕಕ್ಕೆ ಮಾತ್ರ ಸೀಮಿತವಾಗಿರುವುದು ಸಾರ್ವಜನಿಕ ವಲಯದಲ್ಲಿ ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಕಡಬ ಉಪ ಖಜಾನಾಧಿಕಾರಿಗಳ ಕಚೇರಿಗೆ ನೇಮಕಗೊಂಡ ಸಿಬಂದಿ ಪ್ರಸ್ತುತ ಪುತ್ತೂರು ತಾ| ಉಪ ಖಜಾನಾಧಿಕಾರಿ ಕಚೇರಿಯಿಂದಲೇ ಕಡಬಕ್ಕೆ ಸಂಬಂಧಿಸಿದ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ.

ಡಿಸೆಂಬರ್‌ನಲ್ಲಿ ಆರಂಭದ ನಿರೀಕ್ಷೆ :  ಸಣ್ಣ ತಾಂತ್ರಿಕ ಸಮಸ್ಯೆಯಿಂದಾಗಿ ಕಡಬದಲ್ಲಿ ನಮ್ಮ ಕಚೇರಿ ಕಾರ್ಯಾರಂಭ ಮಾಡಲು ಸಾಧ್ಯವಾಗಿಲ್ಲ. ಕಡಬ ಉಪ ಖಜಾನಾಧಿಕಾರಿಗಳ ಕಚೇರಿಗೆ ಸಂಬಂಧಿಸಿದ ಎಲ್ಲ ಕೆಲಸ ಕಾರ್ಯಗಳು ಪುತ್ತೂರಿನಿಂದ ಕಡಬ ಕಚೇರಿಯ ಕೋಡ್‌ ಸಂಖ್ಯೆಯ ಮೂಲಕವೇ ನಡೆಯುತ್ತಿವೆ. ಡಿಸೆಂಬರ್‌ ಆರಂಭದಲ್ಲಿ ಕಡಬದ ಕಚೇರಿ ಕಾರ್ಯಾರಂಭ ಮಾಡಬೇಕೆಂಬ ಪ್ರಯತ್ನದಲ್ಲಿದ್ದೇವೆ. -ಸುಜಾತಾ ರಾವ್‌, ಉಪ ನಿರ್ದೇಶಕರು, ಜಿಲ್ಲಾ ಖಜಾನೆ, ಮಂಗಳೂರು

ಕಡಬ ತಾಲೂಕು ಪತ್ರಾಂಕಿತ ಉಪಖಜಾನಾಧಿಕಾರಿಗಳ ಕಚೇರಿಗೆ ಈಗಾಗಲೇಅಧಿಕಾರಿ ಹಾಗೂ ಸಿಬಂದಿ ಹುದ್ದೆಮಂಜೂರಾಗಿದೆ. ಪ್ರಸ್ತುತ ಕಡಬ ತಾಲೂಕು ಕಚೇರಿಯ ಬಳಿ ಇರುವ ಎಪಿಎಂಸಿ ಕಟ್ಟಡದಲ್ಲಿ ಬಾಡಿಗೆ ಕೊಠಡಿ ಪಡೆದು ಕಚೇರಿ ತೆರೆಯಲುಸಿದ್ಧತೆ ನಡೆಸಲಾಗಿದೆ. ತಾಂತ್ರಿಕ ಸಮಸ್ಯೆಯಿಂದಾಗಿಸ್ವಲ್ಪ ತಡವಾಗಿದೆ. ಇತರ ಇಲಾಖೆಗಳ ತಾಲೂಕುಮಟ್ಟದ ಕಚೇರಿಗಳನ್ನು ಕೂಡ ಹಂತ ಹಂತವಾಗಿತೆರೆಯುವುದಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. -ಎಸ್‌.ಅಂಗಾರ, ಸುಳ್ಯ ಶಾಸಕರು

– ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.