ತಣ್ಣೀರುಬಾವಿ ಬೀಚ್ ಬಳಿ ಬಾಲಕನಿಗೆ ಲಾಠಿ ಚಾರ್ಜ್ ಮಾಡಿದ ಪೊಲೀಸ್ ಪೇದೆ ಅಮಾನತು
Team Udayavani, Jan 3, 2023, 3:12 PM IST
ಪಣಂಬೂರು: ತಣ್ಣೀರುಬಾವಿ ಬೀಚ್ ಬಳಿ ರವಿವಾರ ಟ್ರಾಫಿಕ್ ಜಾಂ ನಡುವೆ ಕ್ರಿಕೆಟ್ ಮ್ಯಾಚ್ನಲ್ಲಿ ಜಯಗಳಿಸಿದ ಯುವಕರ ತಂಡವೊಂದು ಬೈಕಿನಲ್ಲಿ ಮೆರವಣಿಗೆ ಬಂದಾಗ ಕರ್ತವ್ಯ ನಿರತ ಪೊಲೀಸ್ ಸಿಬಂದಿ ಲಾಠಿಯಿಂದ ಹೊಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಪೇದೆ ಸುನೀಲ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಹೇಳಿದ್ದಾರೆ.
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಲಾಠಿ ಚಾರ್ಜ್ ಘಟನೆಯ ಸಂಬಂಧ ಪೊಲೀಸ್ ಪೇದೆ ಸುನೀಲ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಬಾಲಕನ ಪೋಷಕರು ಹಾಗು ಹುಡುಗರಿಂದ ಯಾವುದೇ ದೂರು ದಾಖಲಾಗಿಲ್ಲ ಎಂದು ಕಮಿಷನರ್ ಹೇಳಿದರು.
ಹೊಸ ವರ್ಷದ ಆರಂಭದ ದಿನ ತಣ್ಣೀರುಬಾವಿ ಬೀಚ್ ಬಳಿ ವಾಹನ ದಟ್ಟಣೆ ಜಾಂ ಆಗಿತ್ತು. ಪಣಂಬೂರು ಪೊಲೀಸರು ಕರ್ತವ್ಯದಲ್ಲಿದ್ದು, ಟ್ರಾಫಿಕ್ ನಿಯಂತ್ರಣಕ್ಕೆ ಪರದಾಡುತ್ತಿದ್ದರು ಎನ್ನಲಾಗಿದೆ. ಇದರ ನಡುವೆ ವಿಜಯೋತ್ಸವ ಯುವಕರ ಮೆರವಣಿಗೆ ಬಂದಾಗ ಈ ಘಟನೆ ನಡೆದಿದೆ. ಬಾಲಕನಿಗೆ ಹೊಡೆದ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಸಾಮಾಜಿಕ ಜಾಲತಾಣದಲ್ಲಿ ಈ ಘಟನೆ ಸಂಬಂಧ ವಿಡಿಯೋಗಳು ವೈರಲ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ