ಲಾಕ್‌ಡೌನ್‌ ಮಧ್ಯೆಯೇ ಟ್ಯಾಕ್ಸಿ ಚಾಲಕರಿಗೆ ಬಹು ಸಂಕಷ್ಟ!


Team Udayavani, May 3, 2021, 4:40 AM IST

ಲಾಕ್‌ಡೌನ್‌ ಮಧ್ಯೆಯೇ ಟ್ಯಾಕ್ಸಿ ಚಾಲಕರಿಗೆ ಬಹು ಸಂಕಷ್ಟ!

ಮಹಾನಗರ: ಲಾಕ್‌ಡೌನ್‌ನಿಂದಾಗಿ ಸಮಸ್ಯೆ ಅನುಭವಿಸುತ್ತಿರುವ ಮಂಗಳೂರಿನ ಟ್ಯಾಕ್ಸಿ ಚಾಲಕರಿಗೆ ಇದೀಗ ಮತ್ತಷ್ಟು ಸಮಸ್ಯೆಗಳ ಸರಮಾಲೆಯೇ ಎದುರಾಗಿದ್ದು, ಜೀವನ ನಿರ್ವಹಣೆಯೇ ಸವಾಲಾಗಿ ಪರಿಣಮಿಸಿದೆ.

ಒಂದೆಡೆ ಕೇರಳ ರಾಜ್ಯ ಪ್ರವಾಸಕ್ಕೆ ಹೋಗಿದ್ದ ಕರ್ನಾಟಕದ ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್‌ ವಾಹನಗಳಿಗೆ ಎದುರಾಗಿದ್ದ ಬಾಕಿ ತೆರಿಗೆ ಪಾವತಿ ಸಂಕಷ್ಟ ಮತ್ತೆ ಕಾಡು ತ್ತಿದ್ದರೆ; ಮತ್ತೂಂದೆಡೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾರ್ಕಿಂಗ್‌ ಶುಲ್ಕ ಏರಿಕೆ ಆಗಿದ್ದು, ಟ್ಯಾಕ್ಸಿ ಚಾಲಕರಿಗೆ ಇದರಿಂದ ನೇರ ಹೊಡೆತ ಬೀಳು ವಂತಾಗಿದೆ. ಇದರ ಮಧ್ಯೆ ಲಾಕ್‌ಡೌನ್‌ನಿಂದಾಗಿ ಟ್ಯಾಕ್ಸಿ ಸಂಚಾರಕ್ಕೂ ಅವಕಾಶ ಸಿಗದೆ ಚಾಲಕರ ಜೀವನ ನಿರ್ವಹಣೆಗೆ ದೊಡ್ಡ ಹೊಡೆತ ಬಿದ್ದಿದೆ.

ಟ್ಯಾಕ್ಸಿಯವರಿಗೆ ಟ್ಯಾಕ್ಸ್‌ ಸಂಕಷ್ಟ ! :

ಐದಾರು ವರ್ಷಗಳ ಹಿಂದೆ ಕೇರಳ ಪ್ರವಾಸಕ್ಕೆ ಹೋಗಿದ್ದ ಕರ್ನಾಟಕದ ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್‌ ವಾಹನಗಳಿಗೆ ಎದುರಾಗಿದ್ದ ಬಾಕಿ ತೆರಿಗೆ ಪಾವತಿ ಸಂಕಷ್ಟ ಇನ್ನೂ ಪೂರ್ಣ ಪ್ರಮಾಣದಲ್ಲಿ ಪರಿಹಾರ ವಾಗಿಲ್ಲ. ಕೇರಳದಲ್ಲಿ ಟ್ಯಾಕ್ಸಿ ಬಾಕಿ ಮಾಡಿದ ಕಾರಣಕ್ಕೆ ಕರ್ನಾಟಕದಲ್ಲಿ ಈ ಟ್ಯಾಕ್ಸಿಗಳನ್ನು ಬ್ಲ್ಯಾಕ್‌ ಲಿಸ್ಟ್‌ಗೆ ಹಾಕಲಾಗಿದ್ದು, ಮಾಲಕರು ಇತ್ತ ಬಾಡಿಗೆ ಓಡಿಸಲೂ ಆಗದೆ, ಅತ್ತ ವಾಹನ ಮಾರಾಟ ಮಾಡಲೂ ಆಗದೆ ಅತಂತ್ರರಾಗಿದ್ದಾರೆ. ಸಾರಿಗೆ ಇಲಾಖೆಯ ಈ ಬಿಗಿ ಕಾನೂನಿನಿಂದ ಟ್ಯಾಕ್ಸಿ ಮಾಲಕರಿಗೆ ಕೇರ ಳಕ್ಕೂ ಹೋಗಲಾಗದೆ. ಇತ್ತ ರಾಜ್ಯದಲ್ಲೂ ಬಾಡಿಗೆ ವ್ಯವಹಾರ ಮಾಡಲಾಗದ ಸಂಕಷ್ಟ ಸ್ಥಿತಿ ಅನುಭವಿಸುವಂತಾಗಿದೆ.

ಸಮಸ್ಯೆ ಏನು? :

ಕೇರಳದಲ್ಲಿ 2014ರಲ್ಲಿ ತೆರಿಗೆ ವಸೂಲಾತಿ ನಿಯಮ ತಿದ್ದುಪಡಿ ಮಾಡಲಾಗಿತ್ತು. ಆದರೆ ಅಲ್ಲಿನ ಸಾರಿಗೆ ಇಲಾಖೆ ತಿದ್ದುಪಡಿ ಮಾಡ ಲಾದ ದರದಲ್ಲಿ ತೆರಿಗೆ ವಸೂಲಿ ಮಾಡದೆ ಕಂಪ್ಯೂಟರಿಕೃತ ಆಧಾರದಲ್ಲಿ ಹಿಂದಿನಂತೆ ತೆರಿಗೆಯನ್ನು ವಸೂಲಿ ಮಾಡಿತ್ತು. ಆದರೆ 2016ರಲ್ಲಿ ಕೇರಳ ಸರಕಾರ ಆಡಿಟ್‌ ಮಾಡಿದ ಸಂದರ್ಭ ಭಾರಿ ಪ್ರಮಾಣದಲ್ಲಿ ತೆರಿಗೆ ಕಡಿಮೆ ವಸೂಲಿ ಆಗಿರುವುದು ಪತ್ತೆ ಯಾಗಿತ್ತು. ಕಾರಣ ಹುಡುಕಿದಾಗ ಕರ್ನಾ ಟಕದ ಟ್ಯಾಕ್ಸಿ ವಾಹನಗಳಿಗೆ 2014ರಿಂದ 2016ರ ವರೆಗೆ ಹಿಂದಿನ ದರದಲ್ಲೇ ತೆರಿಗೆ ವಸೂಲಾಗಿರುವುದು ಪತ್ತೆಯಾಗಿತ್ತು. ಇದರಿಂದ ಕೇರಳ ಸರಕಾರ ಕರ್ನಾಟಕದ ಸುಮಾರು 5 ಸಾವಿರಕ್ಕೂ ಅಧಿಕ ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್‌ ವಾಹನಗಳಿಗೆ ನೋಟಿಸ್‌ ಜಾರಿ ಮಾಡಿ ಹಿಂದಿನ ಬಾಕಿ ತೆರಿಗೆಯನ್ನು ಪಾವತಿ ಮಾಡುವಂತೆ ಸೂಚನೆ ನೀಡಿದೆ.

ಏರ್‌ಪೋರ್ಟ್‌ ಪಾರ್ಕಿಂಗ್‌ ಶುಲ್ಕ ದುಪ್ಪಟ್ಟು :

ಮೇ 1ರಿಂದ ಮಂಗಳೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾರ್ಕಿಂಗ್‌ ಶುಲ್ಕ ಏರಿಕೆ ಮಾಡಲಾಗಿದೆ. ಇಲ್ಲಿ ಬಾಡಿಗೆ ನಡೆಸುತ್ತಿರುವ ಟ್ಯಾಕ್ಸಿ ಚಾಲಕರಿಗೆ ಇದರಿಂದ ಸಮಸ್ಯೆ ಆಗಲಿದೆ. ಈ ಬಗ್ಗೆ “ಉದ ಯವಾಣಿ’ ಜತೆಗೆ ಮಾತನಾಡಿದ ಕಂಕನಾಡಿ ಟ್ಯಾಕ್ಸಿ ಚಾಲಕ ಶುಭಕರ, “ಏರ್‌ಪೋರ್ಟ್‌ ನಲ್ಲಿ ಟ್ಯಾಕ್ಸಿ ಚಾಲಕರಿಂದ ಇದುವರೆಗೆ ಪಡೆಯುತ್ತಿದ್ದ ಪಾರ್ಕಿಂಗ್‌ ಶುಲ್ಕವನ್ನು 20 ರೂ.ಗಳಿಂದ 90 ರೂ.ಗೆ ಏರಿಸಿದ್ದಾರೆ. ಅದೂ ಅರ್ಧ ತಾಸಿಗೆ. ಹೀಗಾಗಿ ಇನ್ನು ಮುಂದೆ ಉಡುಪಿಯಿಂದ ವಿಮಾನ ನಿಲ್ದಾಣಕ್ಕೆ ಹೋಗಲು ವಿವಿಧ ಕಡೆಯಲ್ಲಿ 250 ರೂ. ಟೋಲ್‌, ಏರ್‌ಪೋರ್ಟ್‌ನಲ್ಲಿ ದುಬಾರಿ ಪಾರ್ಕಿಂಗ್‌ ಶುಲ್ಕ ಕಟ್ಟಬೇಕು. ಮೊದಲೇ ಲಾಕ್‌ಡೌನ್‌, ಡೀಸೆಲ್‌ ದರ ಏರಿಕೆಯಿಂದ ಸಮಸ್ಯೆಯಲ್ಲಿರುವ ಟ್ಯಾಕ್ಸಿ ಚಾಲಕರಿಗೆ ಇದು ದೊಡ್ಡ ಸಮಸ್ಯೆಯಾಗಿದೆ’ ಎನ್ನುತ್ತಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಖಾಸಗಿ ವಾಹನಕ್ಕೆ 10 ನಿಮಿಷ ಉಚಿತ ನೀಡುವಂತೆ ಟ್ಯಾಕ್ಸಿಯವರಿಗೂ 10 ನಿಮಿಷ ಉಚಿತ ಅವಕಾಶ ನೀಡಬೇಕು. ಬೆಂಗಳೂರು, ಕಣ್ಣೂರು ಸಹಿತ ಇತರ ವಿಮಾನ ನಿಲ್ದಾಣಗಳಲ್ಲಿರುವಂತೆ ಉಚಿತ ವಾದ “ಪಿಕಪ್‌ ವೇ’ ಮಾಡಬೇಕು.  –ಆನಂದ್‌ ಕೆ., ಪ್ರಧಾನ ಕಾರ್ಯದರ್ಶಿ, ದ.ಕ. ಜಿಲ್ಲಾ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್‌ ಅಸೋಸಿಯೇಶನ್‌

ಕಳೆದ ಲಾಕ್‌ಡೌನ್‌ನಿಂದಾಗಿ ಹಲವು ವರ್ಗದವರು ಸಮಸ್ಯೆಅನುಭವಿಸಿ ಚೇತರಿಕೆ ಕಂಡಿದ್ದರೂ ಟ್ಯಾಕ್ಸಿ ಸಮೂಹದವರು ಮಾತ್ರ ಇನ್ನೂ ಚೇತರಿಕೆ ಕಂಡಿರಲಿಲ್ಲ. ಇಂಧನ ಬೆಲೆ ಏರಿಕೆ, ಟೋಲ್‌ ದರ ಏರಿಕೆ ಸಹಿತ ಹಲವು ಏರಿಕೆಗಳು ನಮಗೆ ಕಷ್ಟ ನೀಡಿದೆ. ಅದರ ಜತೆಗೆ ಈಗ ಮತ್ತೆ ಲಾಕ್‌ಡೌನ್‌, ಕೇರಳ ಟ್ಯಾಕ್ಸ್‌ ವಿಚಾರ, ವಿಮಾನ ನಿಲ್ದಾಣ ಪಾರ್ಕಿಂಗ್‌ ಶುಲ್ಕ ಏರಿಕೆಯು ನಮ್ಮನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ.  ದಿನೇಶ್‌ ಕುಂಪಲ, ಅಧ್ಯಕ್ಷರು, ದ.ಕ. ಜಿಲ್ಲಾ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್‌ ಅಸೋಸಿಯೇಶನ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.