ಬೆಂಗ್ರೆ ಕಸ್ಬ ಶಾಲೆ : ಶಿಕ್ಷಕರ ಕೊರತೆ-ಸೋರುತ್ತಿದೆ ತರಗತಿ ಕೊಠಡಿ


Team Udayavani, Sep 13, 2021, 3:00 AM IST

ಬೆಂಗ್ರೆ ಕಸ್ಬ ಶಾಲೆ : ಶಿಕ್ಷಕರ ಕೊರತೆ-ಸೋರುತ್ತಿದೆ ತರಗತಿ ಕೊಠಡಿ

ಮಹಾನಗರ: ಸರಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸುವಂತೆ ಸರಕಾರ ಸೂಚನೆ ನೀಡಿದರೂ ಸರಕಾರಿ ಶಾಲೆಯಲ್ಲಿ ಮೂಲ ವ್ಯವಸ್ಥೆಗಳನ್ನು ಮಾಡದಿರುವುದರಿಂದ ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿ ಮಂಗಳೂರಿನ ಬೆಂಗ್ರೆ ಕಸ್ಬ ದ ದ.ಕ ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿದೆ!

ಮಂಗಳೂರು ಉತ್ತರ ಶಿಕ್ಷಣ ಇಲಾಖೆ ವ್ಯಾಪ್ತಿಯ ಈ ಶಾಲೆಯಲ್ಲಿ ಕಳೆದ ಶೈಕ್ಷಣಿಕ ವರ್ಷಕ್ಕಿಂತ ಈ ವರ್ಷ ವಿದ್ಯಾರ್ಥಿಗಳ ಸಂಖ್ಯೆ 101ರಷ್ಟು ಏರಿಕೆಯಾಗಿದೆ. ಆದರೆ ಶಿಕ್ಷಕರ ಕೊರತೆ, ಸೋರುತ್ತಿರುವ ಕೊಠಡಿಗಳು ಹಾಗೂ ಪೀಠೊಪಕರಣದ ಕೊರತೆಯಿಂದಾಗಿ ಮಕ್ಕಳು ಶಾಲೆಗೆ ಬರುವಾಗ ಇಲ್ಲಿ ಸಮಸ್ಯೆ ಎದುರಾಗಲಿದೆ.

1958ರಲ್ಲಿ ಆರಂಭವಾದ ಶಾಲೆಯಲ್ಲಿ ಇಲ್ಲಿಯವರೆಗೆ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆದಿದ್ದಾರೆ. 1.62 ಎಕ್ರೆ ವ್ಯಾಪ್ತಿಯನ್ನು ಈ ಶಾಲೆ ಹೊಂದಿದೆ. ಕಸ್ಬಬೆಂಗ್ರೆ ವ್ಯಾಪ್ತಿಯ ಮೀನುಗಾರರು, ಕೂಲಿ ಕಾರ್ಮಿಕರ ಮಕ್ಕಳು ಇಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. 1ರಿಂದ 7ನೇ ತರಗತಿ ಇರುವ ಶಾಲೆಯಲ್ಲಿ ಕಳೆದ ವರ್ಷ 438 ಮಕ್ಕಳಿದ್ದರು. ಆದರೆ ಈ ಬಾರಿ ವಿದ್ಯಾರ್ಥಿಗಳ ಸಂಖ್ಯೆ 539ಕ್ಕೆ ಏರಿದೆ. ಇನ್ನೂ ದಾಖಲಾತಿ ನಡೆಯುತ್ತಿರುವುದರಿಂದ ಈ ಸಂಖ್ಯೆ ಮತ್ತೆ ಏರಿಕೆಯಾಗಲಿದೆ.

ಇಲ್ಲಿ ಸರಕಾರಿ ಆಂಗ್ಲ ಮಾಧ್ಯಮ ಶಾಲೆ ಕೂಡ ಕಳೆದ ಮೂರು ವರ್ಷದಿಂದ ನಡೆಯುತ್ತಿದೆ. ಈ ಬಾರಿ 1ನೇ ತರಗತಿಗೆ 70, 2ನೇ ತರಗತಿಗೆ 65 ಹಾಗೂ 3ನೇ ತರಗತಿಗೆ 65 ಮಕ್ಕಳು ದಾಖಲಾಗಿದ್ದಾರೆ. ಇಲ್ಲಿ ಎಲ್‌ಕೆಜಿ ಶಿಕ್ಷಣವೂ ಆರಂಭವಾಗಿದ್ದು, 42 ಹಾಗೂ ಯುಕೆಜಿಯಲ್ಲಿ 64 ಪುಟಾಣಿಗಳಿದ್ದಾರೆ. 2 ಅಂಗನವಾಡಿ ಕೇಂದ್ರವು ಶಾಲಾ ವಠಾರದಲ್ಲಿದ್ದು 65 ಮಕ್ಕಳು ದಾಖಲಾತಿ ಪಡೆದಿದ್ದಾರೆ.

ಕೊರತೆಗಳ ಪಟ್ಟಿ ದೊಡ್ಡದಿದೆ!:

ಈ ಶಾಲೆಯಲ್ಲಿ 18 ತರಗತಿ ಕೊಠಡಿಗಳಿವೆ. ಆದರೆ ಬಹುತೇಕ ಎಲ್ಲ ಕೊಠಡಿಗಳು ಮಳೆ ಬರುವಾಗ ಸೋರುತ್ತಿದೆ. ನಲಿ-ಕಲಿ ತರಗತಿ ಕೊಠಡಿ, ಕಂಪ್ಯೂಟರ್‌ ತರಬೇತಿಯ ಕೊಠಡಿ, ಎಲ್‌ಕೆಜಿ, ಯುಕೆಜಿ ಇರುವ ಕಟ್ಟಡದಲ್ಲಿ ಸೋರುವಿಕೆಯ ಬಹು ಸಮಸ್ಯೆಯಿದೆ. ಜತೆಗೆ ಪೀಠೊಪಕರಣ ಕೂಡ ಸಮರ್ಪಕವಾಗಿ ಇಲ್ಲಿಲ್ಲ. ಡೆಸ್ಕ್, ಬೆಂಚ್‌ಗಳ ಕೊರತೆಯಿದೆ. ಸದ್ಯ ಕುಡಿಯುವ ನೀರಿನ ಸಮಸ್ಯೆ ಇಲ್ಲವಾದರೂ, ಶಾಲಾ ಕಟ್ಟಡ ದುರಸ್ತಿ ಮಾಡಲೇಬೇಕಾದ ಅನಿವಾರ್ಯವಿದೆ. ಹೆಚ್ಚುವರಿಯಾಗಿ 2 ಹೊಸ ಕೊಠಡಿಗೆ ಮಂಜೂರಾತಿ ದೊರಕಿದ್ದರೂ ಕೆಲಸ ಆರಂಭವಾಗಿಲ್ಲ. ಒಂದುವೇಳೆ ತರಗತಿ ತತ್‌ಕ್ಷಣವೇ ಆರಂಭವಾದರೆ ತರಗತಿ ಕೊಠಡಿ ಹೊಂದಿಸುವುದೇ ದೊಡ್ಡ ಸವಾಲಿನ ಸಂಗತಿ.

ಕಸ್ಬಬೆಂಗ್ರೆಯಲ್ಲಿ ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆಯಿದೆ. ಹೀಗಾಗಿ ಆನ್‌ಲೈನ್‌ ತರಗತಿಗೆ ಸಮಸ್ಯೆ ಯಾಗುತ್ತಿದೆ. ಇದರ ಜತೆಗೆ ಶಾಲೆಗೆ ಬರುವ ಬಹುತೇಕ ಮಕ್ಕಳ ಮನೆಯಲ್ಲಿ ಟಿವಿ ವ್ಯವಸ್ಥೆ ಇಲ್ಲದಿರುವುದರಿಂದ ಮಕ್ಕಳಿಗೆ ಟಿವಿ ಪಾಠವೂ ಸಿಗುತ್ತಿಲ್ಲ. ಇದಕ್ಕಾಗಿ ನಾಲ್ಕು ಶಿಕ್ಷಕಿಯರು ನಿಯಮಿತವಾಗಿ ಮಕ್ಕಳನ್ನು ಬೇರೆ ಬೇರೆ ಸಮಯದಲ್ಲಿ ಶಾಲೆಗೆ ಕರೆದು ಪಾಠ ಮಾಡುತ್ತಿದ್ದಾರೆ. ಜತೆಗೆ ಶಾಲೆಯಲ್ಲಿ ಶಿಕ್ಷಕಿಯರ ಮೊಬೈಲ್‌ನಲ್ಲಿಯೇ ಮಾಹಿತಿ ನೀಡುತ್ತಿದ್ದಾರೆ.

539 ವಿದ್ಯಾರ್ಥಿಗಳಿಗೆ  4 ಶಿಕ್ಷಕಿಯರು! : ಬೆಂಗ್ರೆ ಕಸ್ಬ ಶಾಲೆಯಲ್ಲಿ ಈ ವರ್ಷ ವಿದ್ಯಾರ್ಥಿಗಳ ಸಂಖ್ಯೆ 539 ದಾಟಿದ್ದರೂ ಶಿಕ್ಷಕರ ಸಂಖ್ಯೆ ಮಾತ್ರ 4 ದಾಟಿಲ್ಲ. 14 ಹುದ್ದೆ ಮಂಜೂರಾಗಿದ್ದರೂ 10 ಹುದ್ದೆ ಖಾಲಿಯೇ ಇದೆ. ಸಾಮಾನ್ಯವಾಗಿ 30 ಮಕ್ಕಳಿಗೆ ಒಂದು ಶಿಕ್ಷಕರು ಇರಬೇಕಾದರೂ ಇಲ್ಲಿ ನೂರು ಮಕ್ಕಳಿಗೆ ಒಬ್ಬರು ಶಿಕ್ಷಕರು ಕೂಡ ಇಲ್ಲ. 2016ರಿಂದ ಮುಖ್ಯ ಶಿಕ್ಷಕ ಹುದ್ದೆ, 2019ರಿಂದ ದೈಹಿಕ ಶಿಕ್ಷಣ ಶಿಕ್ಷಕ ಹುದ್ದೆ ಖಾಲಿಯಿದೆ. ಇಲ್ಲಿ ಭೌತಿಕ ತರಗತಿ ಆರಂಭವಾದ ಬಳಿಕವೂ ಹೆಚ್ಚುವರಿ ಶಿಕ್ಷಕರ ನೇಮಕವಾಗದಿದ್ದರೆ ಶಿಕ್ಷಣದ ಗುಣಮಟ್ಟಕ್ಕೆ ಬಹುದೊಡ್ಡ ಹೊಡೆತ ಬೀಳಬಹುದು!

ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದರೆ, ಶಾಲೆಯಲ್ಲಿ ಮೂಲಸೌಕರ್ಯದ ಕೊರತೆ ಕಾಡುತ್ತಿದೆ. ತರಗತಿ ಕೊಠಡಿಗಳ ಸುಧಾರಣೆಯಾಗಬೇಕಿದೆ ಹಾಗೂ ಶಿಕ್ಷಕರ ಕೊರತೆ ನಿವಾರಣೆಯಾಗಬೇಕಿದೆ. ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಣ ಇಲಾಖೆ ಶಾಲೆಯ ಬೆಳವಣಿಗೆಗೆ ನಿರಂತರವಾಗಿ ಶ್ರಮಿಸುತ್ತಿದೆ. ಸರಕಾರಿ ಶಾಲೆಯ ಅಭಿವೃದ್ಧಿಗಾಗಿ ದಾನಿಗಳು ನೆರವಾದರೆ ಉಪಯೋಗವಾಗುತ್ತಿತ್ತು. ಗ್ರೇಸಿ ಜುಲಿಯಾನ ಮಥಾಯಸ್‌,  ಪ್ರಭಾರ ಮುಖ್ಯ ಶಿಕ್ಷಕರು.

 

-ದಿನೇಶ್‌ ಇರಾ

 

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.