“ಅಧ್ಯಾಪಕರು ಮಾಹಿತಿ ಸಂಗ್ರಹಣೆಗೆ ಮುಂದಾಗಿ’
Team Udayavani, Jul 14, 2019, 5:46 AM IST
ಹಂಪನಕಟ್ಟೆ: ಅಧ್ಯಾಪನ ವೃತ್ತಿಯಲ್ಲಿರುವವರು ತಮ್ಮ ವಲಯಕ್ಕಷ್ಟೇ ಸೀಮಿತವಾಗಿರಬಾರದು. ಬಹುಮೂಲದ ಮಾಹಿತಿ ಸಂಗ್ರಹಣೆಯೊಂದಿಗೆ ವಿದ್ಯಾರ್ಥಿ ಗಳಿಗೆ ಅದನ್ನು ಧಾರೆ ಎರೆಯಬೇಕು ಎಂದು ಮಂಗಳೂರು ವಿವಿ ಕಾಲೇಜು ಪ್ರಾಂಶುಪಾಲ ಪ್ರೊ| ಉದಯ ಕುಮಾರ್ ಹೇಳಿದರು.
ಮಂಗಳೂರು ವಿವಿ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ವತಿಯಿಂದ ವಿಶ್ವ ವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ನಡೆದ ರಾಜ್ಯ ಶಾಸ್ತ್ರದ ಹೊಸ ಪಠ್ಯಕ್ರಮದ ಬಗೆಗಿನ ಕಾರ್ಯಾಗಾರವನ್ನು ಅವರು ಶನಿವಾರ ಉದ್ಘಾಟಿಸಿದರು.
ಪರಿಣಾಮಕಾರಿ ಬೋಧನೆಗೆ ಕೇವಲ ಪಠ್ಯ ವಿಷಯಗಳು ಸಾಕಾಗುವುದಿಲ್ಲ. ಜ್ಞಾನದ ಹಸಿವು ಅಧ್ಯಾಪಕರಲ್ಲಿ ನಿರಂತರ ವಾಗಿರಬೇಕು. ಪುಸ್ತಕ ಓದುವಿಕೆಯನ್ನು ರೂಢಿಸಿಕೊಳ್ಳಬೇಕು. ಅಧ್ಯಾಪಕರು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಂಡಾಗ ಬೋಧನೆಯಲ್ಲಿ ಧನಾತ್ಮಕ ಬದಲಾವಣೆ ಸಾಧ್ಯ ಎಂದವರು ಅಭಿಪ್ರಾಯಪಟ್ಟರು.
ಪ್ರಾಧ್ಯಾಪಕರಾದ ಪ್ರೊ| ಪಿ.ಎಲ್. ಧರ್ಮ, ಪ್ರೊ| ದಯಾನಂದ ನಾಯಕ್ ಹೊಸ ಪಠ್ಯಕ್ರಮಕ್ಕೆ ಸಂಬಂಧಿಸಿ ಮಾಹಿತಿ ನೀಡಿದರು. ಪ್ರಾಧ್ಯಾಪಕರಾದ ಡಾ| ಈಶ್ವರ ಭಟ್, ಜಯರಾಜ್ ಅಮೀನ್, ಗಣೇಶ್ ಶೆಟ್ಟಿ, ಪ್ರೊ| ಥೋಮಸ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ