ಶಿಕ್ಷಕರ ನೇಮಕಾತಿ ಪರೀಕ್ಷೆ ದ.ಕ.: 1,606 ಅಭ್ಯರ್ಥಿಗಳು ಗೈರು
Team Udayavani, May 22, 2022, 10:30 PM IST
ಮಂಗಳೂರು: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ಎರಡನೇ ದಿನದ ಪರೀಕ್ಷೆ ರವಿವಾರ ದಕ್ಷಿಣ ಕನ್ನಡ ಜಿಲ್ಲೆಯ 22 ಕೇಂದ್ರಗಳಲ್ಲಿ ಸುಗಮವಾಗಿ ನಡೆಯಿತು.
ಎರಡನೇ ದಿನದ ಪರೀಕ್ಷೆಗೆ 1,606 ಮಂದಿ ಅಭ್ಯರ್ಥಿಗಳು ಗೈರು ಹಾಜರಾಗಿದ್ದರು. ರವಿವಾರ ಬೆಳಗ್ಗೆ ಸಮಾಜ ವಿಜ್ಞಾನ, ಗಣಿತ/ ವಿಜ್ಞಾನ, ಜೀವ ವಿಜ್ಞಾನ, ಕನ್ನಡಕ್ಕೆ 4,638 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಇದರಲ್ಲಿ 3,036 ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. 1,602 ಮಂದಿ ಗೈರಾಗಿದ್ದಾರೆ. ಅದೇ ರೀತಿಯಲ್ಲಿ ಮಾಧ್ಯಮ ಭಾಷಾ ಪರೀಕ್ಷೆಗೆ 4,638 ಮಂದಿಯಲ್ಲಿ 3,032 ಮಂದಿ ಪರೀಕ್ಷೆ ಬರೆದು 1,606 ಮಂದಿ ಗೈರು ಹಾಜರಾಗಿದ್ದಾರೆ.
ಉಡುಪಿ: 313 ಮಂದಿ ಗೈರು
ಉಡುಪಿ: ಜಿಲ್ಲೆಯಲ್ಲಿ ರವಿವಾರ ನಡೆದ ಪದವೀಧರ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಪತ್ರಿಕೆ-1 ಮತ್ತು ಪತ್ರಿಕೆ-2ಕ್ಕೆ ನೋಂದಾಯಿಸಿದ್ದ 1,459 ಅಭ್ಯರ್ಥಿಗಳಲ್ಲಿ 1,146 ಅಭ್ಯರ್ಥಿಗಳು ಹಾಜರಾಗಿದ್ದು, 313 ಮಂದಿ ಗೈರು ಹಾಜರಾಗಿದ್ದಾರೆ.
ಪರೀಕ್ಷೆಯು ಉಡುಪಿಯ ಸರಕಾರಿ ಪ್ರೌಢಶಾಲೆ ಒಳಕಾಡು, ಕ್ರಿಶ್ಚಿಯನ್ ಹೈಸ್ಕೂಲ್ ಮಿಷನ್ ಹಾಸ್ಪಿಟಲ್ ರಸ್ತೆ, ಸರಕಾರಿ ಪ.ಪೂ.ಕಾಲೇಜು (ಪ್ರೌಢಶಾಲಾ ವಿಭಾಗ), ಸರ್ವಿಸ್ ಬಸ್ ನಿಲ್ದಾಣದ ಸರಕಾರಿ ಪ.ಪೂ.ಕಾಲೇಜು (ಪ್ರೌಢಶಾಲಾ ವಿಭಾಗ), ಯು. ಕಮಲಾಬಾಯಿ ಹೈಸ್ಕೂಲ್ ಕಡಿಯಾಳಿ, ಆದಿ ಉಡುಪಿ ಹೈಸ್ಕೂಲ್ಗಳಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು, ಯಾವುದೇ ಗೊಂದಲ, ಅಕ್ರಮ ನಡೆದಿಲ್ಲ ಎಂದು ಡಿಡಿಪಿಐ ಗೋವಿಂದ ಮಡಿವಾಳ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ