ತಾಂತ್ರಿಕ ದೋಷ: ಏರ್ ಇಂಡಿಯಾ ವಿಮಾನ ರನ್ವೇಯಿಂದ ವಾಪಸ್
Team Udayavani, Jan 29, 2018, 10:04 AM IST
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಮುಂಬಯಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆಯಾಗಿ ರನ್ವೇಯಿಂದ ವಾಪಸಾದ ಘಟನೆ ರವಿವಾರ ಸಂಭವಿಸಿದ್ದು, ಏರ್ ಇಂಡಿಯಾ ಸಂಸ್ಥೆಯು ಪ್ರಯಾಣಿಕರಿಗೆ ಸೋಮವಾರ ಮುಂಬಯಿಗೆ ಪಯಣಿಸುವ ವ್ಯವಸ್ಥೆ ಮಾಡಿದೆ.
ರವಿವಾರ ಮಧ್ಯಾಹ್ನ 12.20ಕ್ಕೆ ವಿಮಾನವು ಪ್ರಯಾಣಿಕರನ್ನು ಹೊತ್ತು ರನ್ವೇಯಲ್ಲಿ ಚಲನೆ ಆರಂಭಿಸಿತ್ತು. ಕೆಲವೇ ಮೀಟರ್ಗಳಷ್ಟು ದೂರ ಕ್ರಮಿಸಿದಾಗ ವಿಮಾನದ ಎಂಜಿನ್ನ ಸ್ಟಾರ್ಟರ್ನಲ್ಲಿ ಲೋಪ ಕಂಡುಬಂದಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಿಮಾನ ರನ್ವೇಯಿಂದ ನಿಲ್ದಾಣಕ್ಕೆ ಮರಳಿದೆ.
ವಿಮಾನದಲ್ಲಿ 116 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ. ಈ ವಿಮಾನ 180 ಆಸನ ಸಾಮರ್ಥ್ಯದ್ದಾಗಿದೆ. ರದ್ದುಗೊಂಡ ವಿಮಾನದ ಎಲ್ಲ ಪ್ರಯಾಣಿಕರಿಗೆ ನಗರದ ಹೊಟೇಲ್ನಲ್ಲಿ ತಂಗಲು ಏರ್ ಇಂಡಿಯಾ ಸಂಸ್ಥೆಯು ವ್ಯವಸ್ಥೆಯನ್ನು ಕಲ್ಪಿಸಿದೆ. ಈ ಪ್ರಯಾಣಿಕರಿಗೆ ಸೋಮವಾರ ಬೆಳಗ್ಗೆ 6 ಗಂಟೆಗೆ ಮುಂಬಯಿಗೆ ಪ್ರಯಾಣಿಸಲು ವಿಮಾನದ ವ್ಯವಸ್ಥೆ ಮಾಡಲಾಗಿದೆ ಎಂದು ಸಂಸ್ಥೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಮಾನದ ಎಂಜಿನ್ನಲ್ಲಿ ಕಾಣಿಸಿಕೊಂಡಿರುವ ತಾಂತ್ರಿಕ ದೋಷವನ್ನು ಸರಿಪಡಿಸಲು ಅಗತ್ಯವಾಗಿರುವ ಬಿಡಿಭಾಗ ರವಿವಾರ ರಾತ್ರಿ ಮುಂಬಯಿಯಿಂದ ಮಂಗಳೂರಿಗೆ ಬಂದ ವಿಮಾನದ ಮೂಲಕ ತರಿಸಲಾಗಿದೆ ಎನ್ನಲಾಗಿದ್ದು, ರಾತ್ರಿ ವೇಳೆ ದುರಸ್ತಿ ಕಾಮಗಾರಿ ನಡೆಸಿ ಸೋಮವಾರ ಬೆಳಗ್ಗೆ ವಿಮಾನ ಟೇಕ್ ಆಫ್ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಸುವ ವಿಮಾನಗಳಲ್ಲಿ ತಾಂತ್ರಿಕ ದೋಷ ಕಂಡುಬರುತ್ತಿರುವುದು ಕಳೆದ ಮೂರು ತಿಂಗಳಲ್ಲಿ ಇದು 3ನೇ ಬಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ