ಕುತ್ತಿಗೆಗೆ ಶಾಲು ಬಿಗಿದು 13 ವರ್ಷದ ಬಾಲಕಿ ಸಾವು!
Team Udayavani, Apr 12, 2021, 10:21 AM IST
ಉಳ್ಳಾಲ: ಬಾಲಕಿಯೋರ್ವಳ ಕುತ್ತಿಗೆಗೆ ಶಾಲು ಬಿಗಿದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರು ಎಂಬಲ್ಲಿ ನಡೆದಿದ್ದು, ಆರಂಭದಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದ್ದು, ಬಳಿಕ ಆತ್ಮಹತ್ಯೆ ಎಂದು ಶಂಕಿಸಲಾಗಿದೆ.
ಕಾಸರಗೋಡು ಎಡನೀರು ನಿವಾಸಿ ಮೇಘಶ್ರೀ (13) ಮೃತಪಟ್ಟ ಬಾಲಕಿ. ಚೆರ್ಕಳ ಎಡನೀರು ಮಠದ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಈಕೆ ಕೋಟೆಕಾರಿನ ಮಾವನ ಮನೆಯಲ್ಲಿ ಒಂದು ತಿಂಗಳಿನಿಂದ ಇದ್ದಳು.
ಹಾಡು ಹಾಕಿ ನೃತ್ಯ ಮಾಡುವ ಹವ್ಯಾಸ ಹೊಂದಿದ್ದ ಈಕೆ, ಶಾಲು ಕುತ್ತಿಗೆಗೆ ಬಿಗಿದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ:ಬೈಕಂಪಾಡಿ: ರೈಲು ಹಳಿಯ ಮೇಲೆ ಕತ್ತುಕೊಯ್ದ ಸ್ಥಿತಿಯಲ್ಲಿ ಕಾರ್ಮಿಕನ ಶವ ಪತ್ತೆ!
ಪ್ರಾಥಮಿಕ ತನಿಖೆಯಲ್ಲಿ ಬಾಲಕಿ ಮೇಘಶ್ರೀ ಸಾವಿನಲ್ಲಿ ಸಂಶಯ ವ್ಯಕ್ತವಾದ ಹಿನ್ನೆಲೆಯಲ್ಲಿ ಮನೆಮಂದಿಯನ್ನು ಹಾಗೂ ಹೆತ್ತವರನ್ನು ಉಳ್ಳಾಲ ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದರು. ಆ ಬಳಿಕ ಸ್ಥಳ ಮಹಜರು ವೇಳೆ ಬಾಲಕಿ ಕೋಣೆಯ ಬಾಗಿಲು ಹಾಕಿದ್ದು, ಬಾಗಿಲು ಒಡೆದು ನೋಡಿದಾಗ ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿರುವುದು ಗೊತ್ತಾಗಿದೆ.
ಮೇಘಶ್ರೀ ತನ್ನ ಬಣ್ಣ ಕಪ್ಪು ಎಂಬ ಜುಗುಪ್ಸೆಯನ್ನು ಹೊಂದಿದ್ದಳು. ಇದರಿಂದ ಬೇಸತ್ತು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ
ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ
ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ
ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ
ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?
ಹೊಸ ಸೇರ್ಪಡೆ
ಐಪಿಎಲ್ 2022: ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ಗೆ 17 ರನ್ ಗೆಲುವು
ಪಿಎಸ್ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ
ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ
ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್ಪಿ ನಿರ್ಧಾರ
ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ