ಸಂಸ್ಕೃತಿ ಬಗ್ಗೆ ಮುಂದಿನ ಪೀಳಿಗೆಗೂ ತಿಳಿಸಿ: ಮೈನಾ ಸದಾನಂದ ಶೆಟ್ಟಿ

ಕುಡ್ಲ ಫೆವಿಲಿಯನ್‌ನಲ್ಲಿ ಮಹಿಳಾ ವಿಭಾಗದಿಂದ ಬಿಸು ದಿನ ಆಚರಣೆ

Team Udayavani, Apr 18, 2019, 6:10 AM IST

1704MLR20

ಮಹಾನಗರ: ನಮ್ಮ ಪೂರ್ವ ಜರು ಆಚರಿಸಿಕೊಂಡು ಬಂದ ಸಂಸ್ಕೃತಿ, ನಡವಳಿಕೆಗಳಿಗೆ ಧಾರ್ಮಿಕ ಹಿನ್ನೆಲೆ ಇದೆ. ಅದನ್ನು ನಾವು ಮರೆಯಲಾಗದು. ನಮ್ಮ ಆಹಾರ, ಆರೋಗ್ಯ, ದೈವ ಭಕ್ತಿ ಅದನ್ನು ಹೊಂದಿಕೊಂಡಿರುತ್ತದೆ. ಇದರಿಂದಾಗಿ ನಮ್ಮ ಹಿರಿಯರು ನೂರಾರು ಕಾಲ ಯಾವುದೇ ರೋಗ ರುಜಿನಗಳಿಲ್ಲದೆ ಬಾಳಿದ್ದರು ಎಂದು ಶ್ರೀದೇವಿ ಎಜುಕೇಶನ್‌ ಟ್ರಸ್ಟ್‌ನ ಆಡಳಿತ ನಿರ್ದೇಶಕಿ ಮೈನಾ ಸದಾನಂದ ಶೆಟ್ಟಿ ಹೇಳಿದರು.

ನಗರದ ಬಲ್ಮಠ ರಸ್ತೆಯ ಕುಡ್ಲ ಫೆವಿಲಿಯನ್‌ನಲ್ಲಿ ಮಹಿಳಾ ವಿಭಾಗದಿಂದ ನಡೆದ ಬಿಸು ದಿನ ಕಾರ್ಯಕ್ರಮದಲ್ಲಿ ಬಿಸುಕಣಿ ಉದ್ಘಾಟಿಸಿ ಮಾತನಾಡಿದ ಆವರು, ನಾವು ನಡೆದು ಬಂದ ದಾರಿ ಸಂಸ್ಕೃತಿ ಇದನ್ನು ಮುಂದಿನ ಪೀಳಿಗೆಗೆ ಮುಂದುವರಿಸ‌ಬೇಕಾಗಿದೆ ಎಂದರು.

ಕ್ಷೇಮಾ ನಿಟ್ಟೆ ಮಾನವಿಕಾ ವಿಭಾಗದ ಮುಖ್ಯಸ್ಥೆ ಗೀತಾ ಹೆಗಡೆ ಬಿಸು ಸಂದೇಶ ನೀಡಿ ಮಾತನಾಡಿ,ಸಾಂಪ್ರದಾಯಿಕ ಮತ್ತು ಸಂಸ್ಕೃತಿಯ ಬದುಕು, ಹಿರಿಯರ ಎಲ್ಲ ಆಚರಣೆಯಲ್ಲಿ ಧಾರ್ಮಿಕ ಹಿನ್ನೆಲೆ ಇದೆ. ಬಿಸು ನಮ್ಮ ಬದುಕಿಗೆ ಆಸರೆಯಾಗುವ ಸಲಕರಣೆಗಳನ್ನು ಆರಾಧಿಸುವ ದಿನ ಹಾಗೂ ಹೊಸ ವರ್ಷವನ್ನು ಸ್ವಾಗತಿಸುವ ಸಮಯ. ಯುವ ಪೀಳಿಗೆಯನ್ನು ವಿದೇಶಿ ಸಂಸ್ಕೃತಿಯ ವ್ಯಾಮೋಹದಿಂದ ಹೊರತಂದು ನಮ್ಮ ಸಂಸ್ಕೃತಿಯ ಆಚರಣೆಗೆ ಅವರನ್ನು ತೊಡಗಿಸುವಲ್ಲಿ ನಾವು ಪ್ರಯತ್ನಿಸಬೇಕಾಗಿದೆ ಎಂದರು.

ಮಂಗಳಾದೇವಿಯ ಆಡಳಿತ ಮೊಕ್ತೇಸರ ರಮಾನಾಥ ಹೆಗ್ಡೆ ಮಾತನಾಡಿ, ಪ್ರತಿಫಲಾಪೇಕ್ಷೆ ಇಲ್ಲದೆ ಎಲ್ಲ ಸಮಾಜ ಬಾಂಧವರೊಡನೆ ಕಷ್ಟ ಸುಖಗಳಲ್ಲಿ ಭಾಗವಹಿಸಿ ಅಶಕ್ತರಿಗೆ ನೆರವು ನೀಡುತ್ತಿರುವ ಎ. ಸದಾನಂದ ಶೆಟ್ಟಿ ನೇತೃತ್ವದ ಸಂಘಟಣೆಯ ಕಾರ್ಯ ಪ್ರಶಂಸನೀಯ ಎಂದ ಅವರು ಇಂತಹ ಸಮಾಜಮುಖೀ ಚಟುವಟಿಕೆಗಳಿಂದ ಸಂಘಟನೆಗಳು ಬೇಗ ಜನ ಪ್ರೀತಿಗಳಿಸುತ್ತವೆ ಎಂದರು.

ಟ್ರಸ್ಟ್‌ನ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಟ್ರಸ್ಟ್‌ನಲ್ಲಿ ಸಮಾನ ಮನಸ್ಕರ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಪರಿಣತರ ತಂಡವಿದ್ದು, ಇದರಿಂದ ಯೋಜನೆ, ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುತ್ತಿವೆ. ಭವಿಷ್ಯದಲ್ಲಿ ಇನ್ನಷ್ಟು ಸಮಾಜಮುಖೀ ಕಾರ್ಯಕ್ರಮಗಳ ರೂಪುರೇಖೆ ತಯಾರಿಸಿ ಮುನ್ನಡೆಯಬೇಕಾಗಿದೆ ಎಂದರು.

ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಸಾಧನೆಗೈದ ನಿವೃತ್ತ ವಿಜಯ ಬ್ಯಾಂಕ್‌ನ ವಲಯ ಪ್ರಬಂಧಕ ಎ. ಕೃಷ್ಣಾನಂದ ಶೆಟ್ಟಿ ಮತ್ತು ವಸಂತಿ ಕೆ. ಶೆಟ್ಟಿ ದಂಪತಿ ಇವರನ್ನು ಈ ಸಂದರ್ಭದಲ್ಲಿ ಸಮ್ಮಾನಿಸಿ ಗೌರವಿಸಲಾಯಿತು. ಸಮಾರಂಭ ದಲ್ಲಿ ಸಭಿ ಸವಾಲು, ಬಿಸು ಪದರಂಗಿತ, ರಸಪ್ರಸ್ನೆ ಸ್ಪರ್ಧೆಗಳು ಏರ್ಪಡಿಸಲಾಯಿತು.

ಮಹಿಳಾ ವಿಭಾಗದ ಅಧ್ಯಕ್ಷೆ ವಿಜಯ ಲಕ್ಷ್ಮೀ ಬಿ. ಶೆಟ್ಟಿ ಇವರ ನೇತೃತ್ವದಲ್ಲಿ ಅಮೃತ ಪಲಹಾರ ವಿತರಣೆ, ಸಿರಿಮನೆ ಕಮಲಾಕ್ಷ ಬಿ. ಶೆಟ್ಟಿಯವರಿಂದ ತುಳುನಾಡ ಸಂಸ್ಕೃತಿಯ ವಸ್ತು ಪ್ರದರ್ಶನ ಮತ್ತು ಮುರಳೀಧರ ಕಾಮತ್‌ ಬಳಗದವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಯುವ ವಿಭಾಗದ ಅಧ್ಯಕ್ಷ ದೇವಿಚರಣ್‌ ಶೆಟ್ಟಿ, ಕಾರ್ಯದರ್ಶಿ ವಸಂತ್‌ ಕುಮಾರ್‌ ಶೆಟ್ಟಿ, ಕೊಡಾ¾ಣು ರಾಮಚಂದ್ರ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ವಿಜಯಲಕ್ಷ್ಮೀ ಬಿ. ಶೆಟ್ಟಿ, ಕಮಲಾಕ್ಷ ಬಿ. ಶೆಟ್ಟಿ ಉಪಸ್ಥಿತರಿದ್ದರು.

ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ವಸಂತ್‌ ಕುಮಾರ್‌ ಶೆಟ್ಟಿ ಪ್ರಸ್ತಾಪಿಸಿ ಸಂಘಟನ ಕಾರ್ಯದರ್ಶಿ ರಾಜಗೋಪಾಲ ರೈ ಸ್ವಾಗತಿಸಿ,ಸೀತಾರಾಮ ಶೆಟ್ಟಿ ವಂದಿಸಿದರು.ಕದ್ರಿ ನವನೀತ ಶೆಟ್ಟಿ ಮತ್ತು ಸಾಹಿಲ್‌ ರೈ, ನಿತೀಶ್‌ ಎಕ್ಕಾರು ನಿರ್ವಹಿಸಿದರು.

 

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.