ರಿಕ್ಷಾ ಪರ್ಮಿಟ್ಗೆ ತಾತ್ಕಾಲಿಕ ತಡೆ: ಎ.ಸಿ. ಅವರಿಂದ ಆರ್ಟಿಒಗೆ ಸೂಚನೆ
Team Udayavani, Jul 21, 2019, 5:59 AM IST
ಪುತ್ತೂರು : ಪುತ್ತೂರಿನಲ್ಲಿ ಆಟೋ ರಿಕ್ಷಾಗಳ ಸಂಖ್ಯೆ ಮಿತಿಯನ್ನು ದಾಟಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಆಟೋಗಳಿಗೆ ಪರವಾನಿಗೆ ನೀಡುವ ಪ್ರಕ್ರಿಯೆಯನ್ನು ಕೆಲ ಸಮಯಗಳ ಮಟ್ಟಿಗೆ ತಡೆ ಹಿಡಿಯುವ ಪ್ರಕ್ರಿಯೆ ಆರಂಭಿಸುವಂತೆ ಪುತ್ತೂರು ಸಹಾಯಕ ಕಮಿಷನರ್ ಎಚ್.ಕೆ. ಕೃಷ್ಣಮೂರ್ತಿ ಅವರು ಆರ್ಟಿಒಗೆ ಸೂಚಿಸಿದರು.
ಅವರು ಶನಿವಾರ ಇಲ್ಲಿನ ಮಿನಿ ವಿಧಾನಸೌಧದಲ್ಲಿ ತನ್ನ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಿಗಳು ಹಾಗೂ ಆಟೋ ರಿಕ್ಷಾ ಮಾಲಕ-ಚಾಲಕ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಸೂಚಿಸಿದರು.
ಪ್ರಸ್ತುತ ಆಟೋ ರಿಕ್ಷಾಗಳ ಸಂಖ್ಯೆ ಏರಿಕೆಯಾಗಿರುವ ಪರಿಣಾಮ ಟ್ರಾಫಿಕ್ ಸಮಸ್ಯೆಯ ಜತೆಗೆ ಹಾಲಿ ಇರುವ ರಿಕ್ಷಾಗಳ ಆದಾಯ ಕಡಿಮೆಯಾಗುತ್ತಿದೆ. ಈ ಕುರಿತು ಹೊಸ ಪರ್ಮಿಟ್ಗಳನ್ನು ತಡೆ ಹಿಡಿಯುವಂತೆ ಕಳೆದ 4 ವರ್ಷಗಳಿಂದ ಮನವಿ ಮಾಡುತ್ತಿದ್ದು, ಯಾವುದೇ ಪ್ರಯೋಜನವಾಗಿಲ್ಲ ಎಂದು ಆಟೋ ಸಂಘಟನೆಗಳ ಮುಖಂಡರು ಸಭೆಯ ಗಮನಕ್ಕೆ ತಂದರು.
ನಗರದಲ್ಲಿದೆ 2 ಸಾವಿರ ಆಟೋ
ತಾಲೂಕಿನಲ್ಲಿ ಒಟ್ಟು ಸುಮಾರು 4,800 ರಿಕ್ಷಾಗಳಿದ್ದು, ಪುತ್ತೂರು ನಗರದಲ್ಲಿ 2000ಕ್ಕೂ ಅಧಿಕ ಆಟೋ ರಿಕ್ಷಾಗಳಿವೆ. ಜತೆಗೆ ಪ್ರತಿ ವಾರ ಹೊಸ ಆಟೋಗಳು ರಸ್ತೆಗಿಳಿಯುತ್ತಿವೆ ಎಂದು ಸಭೆಗೆ ತಿಳಿಸಲಾಯಿತು. ಹೀಗಾಗಿ ಆಟೋ ಪರ್ಮಿಟ್ಗಳನ್ನು ತಾತ್ಕಾಲಿಕವಾಗಿ ತಡೆಯುವಂತೆ ಎಸಿ ಸೂಚಿಸಿದರು.
ಉದ್ಯಮವನ್ನಾಗಿಸಿದ್ದಾರೆ
ಮುಂದಿನ ದಿನಗಳಲ್ಲಿ ಆಟೋ ರಿಕ್ಷಾ ಪರವಾನಿಗೆಯ ಶುಲ್ಕ ಏರಿಸಬೇಕು. ಜತೆಗೆ ಹೊಸ ಪರವಾನಿಗೆ ಪಡೆಯುವವರಿಗೆ ಪ್ರೋತ್ಸಾಹ ನೀಡಬಾರದು. ಒಬ್ಬ ವ್ಯಕ್ತಿಯೇ ಅಧಿಕ ಪರವಾನಿಗೆ ಪಡೆಯುವುದನ್ನು ತಡೆಯಬೇಕು. ಕೆಲವರು ಇದನ್ನೇ ಉದ್ಯಮವಾಗಿಸಿದ್ದಾರೆ ಎಂದು ಸಭೆಯಲ್ಲಿ ಆರೋಪ ವ್ಯಕ್ತವಾದಾಗ, ಅಂತಹ ವ್ಯಕ್ತಿಗಳ ಪಟ್ಟಿ ತಯಾರಿಸಿ ಸರಕಾರಕ್ಕೆ ವರದಿ ಸಲ್ಲಿಸೋಣ. ಆಗ ಇಲಾಖೆಯೇ ಒಂದು ಸುತ್ತೋಲೆಯನ್ನು ಹೊರಡಿಸುತ್ತದೆ ಎಂದು ಎಸಿಯವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್