ತೋಕೂರು: ಮಳೆಗಾಲದಲ್ಲಿ ಕುಸಿದಿದ್ದ ತಡೆಗೋಡೆಗೆ ಮುಕ್ತಿ


Team Udayavani, Apr 26, 2019, 6:00 AM IST

2504HALE-2

ಪ್ರಸ್ತುತ ವರ್ಷದಲ್ಲಿ ಶಾಶ್ವತವಾಗಿ ನಡೆಸಿರುವ ತಡೆಗೋಡೆ.

ತೋಕೂರು: ಇಲ್ಲಿನ ಪಡುಪಣಂಬೂರು ಗ್ರಾಮ ಪಂಚಾಯತ್‌ನ ತೋಕೂರಿನಲ್ಲಿ ಕಳೆದ ಬಾರಿ ಪಾದೂರು ಪೈಪ್‌ಲೈನ್‌ ಕಾಮಗಾರಿ ನಡೆಸುವಾಗ ಕುಸಿದಿದ್ದ ಮಳೆ ನೀರು ಹರಿಯುವ ತೋಡಿನ ತಡೆಗೋಡೆ ಕಾಮಗಾರಿಗೆ ಕೊನೆಗೆ ಮುಕ್ತಿ ನೀಡಲಾಗಿದೆ.

ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ರಸ್ತೆಯ ಈ ತೋಡಿನಲ್ಲಿ ಪಾದೂರು ಪೈಪ್‌ಲೈನ್‌ ಕಾಮಗಾರಿ ನಡೆಯುವಾಗ ತಾತ್ಕಾಲಿಕ ತಡೆಗೋಡೆ ನಿರ್ಮಿಸಿದ್ದರು. ಕಳೆದ ಬಾರಿ ಮಳೆ ನೀರು ರಭಸವಾಗಿ ತೋಡಿನಲ್ಲಿ ಹರಿದು ತಡೆಗೋಡೆ ಕುಸಿದಿತ್ತಲ್ಲದೇ ಪಕ್ಕದ ಕೃಷಿ ಭೂಮಿಗೆ ಮಳೆ ನೀರು ನುಗ್ಗಿ ಸಾಕಷ್ಟು ಹಾನಿಯಾಗಿತ್ತು. ಅವೈಜ್ಞಾನಿಕವಾಗಿ ನಿರ್ಮಿಸಿದ್ದ ಈ ಕಾಮಗಾರಿಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದರಲ್ಲದೇ ಪಡು ಪಣಂಬೂರು ಗ್ರಾಮ ಪಂಚಾಯತ್‌ ಸಹ ಈ ಬಗ್ಗೆ ಪಾದೂರು ಪೈಪ್‌ಲೈನ್‌ ನಡೆಸುವ ಗುತ್ತಿಗೆದಾರರಿಗೆ ಎಚ್ಚರಿಕೆಯನ್ನು ನೀಡಿತ್ತು.

ದುರಸ್ತಿಗೆ ಸೂಚನೆ
ಮಳೆ ನೀರು ರಭಸವಾಗಿ ಹರಿ ಯುತ್ತಿದ್ದರಿಂದ ಆ ಸಂದರ್ಭ ಯಾವುದೇ ರೀತಿಯಲ್ಲೂ ಕಾಮಗಾರಿ ನಡೆಸದೇ ಆಸಹಾಯಕತೆಯಿಂದ ತುರ್ತು ಕ್ರಮವಾಗಿ ಮರಳಿನ ಚೀಲ ಗಳನ್ನು ಹಾಕಲಾಗಿದ್ದರು ಅದು ಶಾಶ್ವತ ಪರಿಹಾರ ಕಂಡು ಬಂದಿ ರಲಿಲ್ಲ. ಈ ವರ್ಷದ ಮಳೆಗಾಲ ಆರಂಭಕ್ಕೂ ಮುನ್ನ ದುರಸ್ತಿ ನಡೆಸಲು ಗುತ್ತಿಗೆದಾರರು ಮುಂದಾಗದೇ ಇದ್ದುದರಿಂದ ಕಳೆದ ನಾಲ್ಕು ತಿಂಗಳ ಹಿಂದೆಯೇ ಗ್ರಾ.ಪಂ.ಮರಳಿ ಗುತ್ತಿಗೆದಾರರಿಗೆ ಶಾಶ್ವತವಾಗಿ ದುರಸ್ತಿ ಮಾಡಲು ಸೂಚನೆ ನೀಡಲಾಗಿತ್ತು.

ಗ್ರಾಮದಲ್ಲಿ ಪೈಪ್‌ಲೈನ್‌ಗಾಗಿ ನಡೆಸಿರುವ ಯಾವುದೇ ಕಾಮಗಾರಿಗೆ ಅಧಿಕೃತವಾಗಿ ಎನ್‌ಒಸಿ ನೀಡುವುದಿಲ್ಲ, ಬದಲಾಗಿ ಆಕ್ಷೇಪ ನೀಡುತ್ತೇವೆ ಎಂದು ಷರತ್ತು ವಿಧಿಸಿತ್ತು. ಇದೀಗ ಎಚ್ಚೆತ್ತುಕೊಂಡಿರುವ ಗುತ್ತಿಗೆದಾರರು ಕಾಂಕ್ರೀಟ್ ಮಿಶ್ರಿತ ತಡೆಗೋಡೆಯನ್ನು ನಿರ್ಮಿಸಿ ಪಂಚಾಯತ್‌ನ ಸೂಚನೆಯನ್ನು ಪಾಲಿಸಿದಂತಿದೆ.

ಈ ಬಾರಿ ಮಳೆಗಾಲದಲ್ಲಿ ತೋಡಿನ ನೀರು ಸರಾಗವಾಗಿ ಹರಿಯಲು ಅನುಕೂಲಕರವಾಗಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮಳೆಗಾಲಕ್ಕೆ ಮುನ್ನೆಚ್ಚರಿಕೆಗೆ ಕ್ರಮ
ಕಳೆದ ವರ್ಷದಲ್ಲಿ ತಡೆಗೋಡೆ ಕುಸಿತ ಕಂಡಿದ್ದು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೆವು. ಆದರೂ ಕೃಷಿ ಭೂಮಿಗೆ ಹಾನಿಯಾಗಿತ್ತು. ಈ ಬಾರಿ ಮುನ್ನೆಚ್ಚರಿಕೆ ಕ್ರಮವಾಗಿ ಮಳೆಗಾಲಕ್ಕೆ ಮೊದಲೇ ದುರಸ್ಥಿ ನಡೆಸಲು ಸ್ಪಷ್ಟವಾಗಿ ಸೂಚನೆ ನೀಡಿದ್ದೇವೆ. ಇನ್ನೂ ಹಲವು ಕಡೆಗಳಲ್ಲಿ ಪಾದೂರು ಪೈಪ್‌ಲೈನ್‌ ಕಾಮಗಾರಿಯಿಂದ ತೊಂದರೆಯಾಗಿದ್ದು ಅದನ್ನು ಸಹ ಸರಿಪಡಿಸಲು ಸೂಚನೆ ನೀಡಲಾಗಿದೆ.
– ಮೋಹನ್‌ದಾಸ್‌,
ಅಧ್ಯಕ್ಷರು, ಪಡುಪಣಂಬೂರು ಗ್ರಾಮ ಪಂಚಾಯತ್‌

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.