ಧರ್ಮಸ್ಥಳಕ್ಕೆ ಶ್ರೀ ವರ್ಧಮಾನ ಸಾಗರ ಮುನಿ ಮಹಾರಾಜ್‌ ಆಗಮನ


Team Udayavani, Feb 1, 2019, 1:00 AM IST

swami.jpg

ಬೆಳ್ತಂಗಡಿ: ಧರ್ಮವು ಸಕಲ ಜೀವಿಗಳಿಗೂ ಹಿತಕರವಾಗಿದ್ದು, ಸುಖ -ಶಾಂತಿ ನೀಡುತ್ತದೆ. ಧರ್ಮಾನುಷ್ಠಾನದಿಂದ ಆತ್ಮಕಲ್ಯಾಣವಾಗುತ್ತದೆ ಎಂದು ಆಚಾರ್ಯ ಶ್ರೀ ವರ್ಧಮಾನ ಸಾಗರ ಮುನಿ ಮಹಾರಾಜರು ನುಡಿದರು.
ಧರ್ಮಸ್ಥಳಕ್ಕೆ ಗುರುವಾರ ಪುರಪ್ರವೇಶ ಮಾಡಿದ ಮುನಿ ಸಂಘವನ್ನು ಸ್ವಾಗತಿಸಿ ಮುಖ್ಯ ಪ್ರವೇಶ ದ್ವಾರದಿಂದ ಬಸದಿವರೆಗೆ ಭವ್ಯ ಮೆರವಣಿಗೆಯಲ್ಲಿ ಬರ ಮಾಡಿಕೊಂಡಿತು.

ಭಗವಾನ್‌ ಶ್ರೀ ಚಂದ್ರನಾಥ ಸ್ವಾಮಿ ದರ್ಶನ ಮಾಡಿ, ಪೂಜೆ ವೀಕ್ಷಿಸಿದ ಬಳಿಕ ಅವರು ಮಂಗಲ ಪ್ರವಚನ ನೀಡಿ, ಧರ್ಮಸ್ಥಳವು ಧರ್ಮದ ನೆಲೆವೀಡಾಗಿದ್ದು, ಇಲ್ಲಿ ಸರ್ವಧರ್ಮೀಯರಿಗೂ ಸಮಾನ ಮಾನ್ಯತೆ, ಗೌರವ ಇದೆ. ಸಕಲ ಧರ್ಮಗಳಲ್ಲಿ ಧಾರ್ಮಿಕ ಕ್ರಿಯೆ ವಿಭಿನ್ನವಾಗಿದ್ದರೂ ಅಹಿಂಸಾ ಧರ್ಮ ಶ್ರೇಷ್ಠ ಧರ್ಮವಾಗಿದೆ. ಎಲ್ಲರೂ ಅಹಿಂಸೆಗೆ ಮಾನ್ಯತೆ ನೀಡುತ್ತಾರೆ. ಭಗವಾನ್‌ ಮಹಾವೀರಸ್ವಾಮಿ ಅನೇಕಾಂತದ ಮೂಲಕ ಎಲ್ಲ ಸಮಸ್ಯೆಗಳಿಗೆ ಸೌಹಾರ್ದ ಪರಿಹಾರ ನೀಡಿದರು ಎಂದರು.

ಧರ್ಮಸ್ಥಳದಲ್ಲಿ ಮಾತೃಶ್ರೀ ರತ್ನಮ್ಮನವರ ಆಶಯದಂತೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಬಾಹುಬಲಿ ಮೂರ್ತಿ ಪ್ರತಿಷ್ಠೆ ಮಾಡಿ ಮಹಾಮಸ್ತಕಾಭಿಷೇಕ ನೆರವೇರಿಸುತ್ತಿರುವುದು ಭುವನದ ಭಾಗ್ಯ; ಅದನ್ನು ನೋಡಿ ಪುಣ್ಯ ಸಂಚಯ ಮಾಡಿಕೊಳ್ಳುವುದು ನಮ್ಮ ಭಾಗ್ಯ ಎಂದರು.

ಮುನಿ ಸಂಘವನ್ನು ಭಕ್ತಿಪೂರ್ವಕ ಸ್ವಾಗತಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಪ್ರಸ್ತಾವನೆಗೈದು, ಮುನಿ ಸಂಘದ ಆಗಮನದಿಂದ ಧರ್ಮಸ್ಥಳ ಕ್ಷೇತ್ರವೇ ಪಾವನವಾಗಿದೆ. ಇದೇ ನಿಜವಾದ ಮಹೋತ್ಸವ ಎಂದರು. ಆಚಾರ್ಯ ಶ್ರೀ ವರ್ಧಮಾನ ಸಾಗರ ಮುನಿ ಮಹಾರಾಜರ ಪಾವನ ಆತ್ಮಚರಿತ್ರೆಯ ಪುಸ್ತಕವನ್ನು ಎಲ್ಲರಿಗೂ ಉಚಿತವಾಗಿ ವಿತರಿಸಲಾಯಿತು.

ಹೇಮಾವತಿ ವೀ. ಹೆಗ್ಗಡೆ, ಶ್ರೀಧಾಮ ಮಾಣಿಲದ ಮೋಹನದಾಸ ಸ್ವಾಮೀಜಿ, ಡಿ. ಸುರೇಂದ್ರ ಕುಮಾರ್‌, ಅನಿತಾ ಸುರೇಂದ್ರ ಕುಮಾರ್‌, ಡಿ. ಹಷೇìಂದ್ರ ಕುಮಾರ್‌, ಸುಪ್ರಿಯಾ ಹಷೇìಂದ್ರ ಕುಮಾರ್‌, ಮಾಜಿ ಶಾಸಕ ಕೆ. ಅಭಯಚಂದ್ರ ಜೈನ್‌, ಮೂಡುಬಿದಿರೆಯ ಆನಡ್ಕ ದಿನೇಶ್‌ ಕುಮಾರ್‌ ಮತ್ತು ಸುದೇಶ್‌ ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.