“ವೈದ್ಯರ ಮೇಲೆ ಹಲ್ಲೆ ತಡೆ ಸಮಾಜದ ಜವಾಬ್ದಾರಿ’
Team Udayavani, Jul 3, 2017, 3:45 AM IST
ಮಹಾನಗರ: ವೈದ್ಯರ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳನ್ನು ಸಮಾಜ ಗಂಭೀರವಾಗಿ ಪರಿಗಣಿಸಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಸಮಾಜದ ಜವಾಬ್ದಾರಿ ಎಂದು ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಎಂ.ಎಸ್.ಮಹಾಬಲೇಶ್ವರ ಹೇಳಿದರು.
ಮಂಗಳೂರು ಐಎಂಎ ಘಟಕದ ವತಿಯಿಂದ ಶನಿವಾರ ಜರಗಿದ ವೈದ್ಯರ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಅವರು ವೈದ್ಯ ವೃತ್ತಿಯು ಪವಿತ್ರವಾದ ವೃತ್ತಿಯಾಗಿದೆ. ರೋಗಿಗಳು ಮತ್ತು ವೈದ್ಯರ ಸಂಬಂಧ ಆಧುನಿಕ ವ್ಯವಸ್ಥೆಯಲ್ಲಿ ಶಿಥಿಲವಾಗುತ್ತಿದ್ದು, ಇದನ್ನು ಉಳಿಸಿಕೊಂಡಲ್ಲಿ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದರು.
ವೈದ್ಯರಿಗೆ ಡಾ| ಬಿ.ಸಿ.ರಾಯ್ ಅವರ ಆದರ್ಶಗಳು ಅನುಕರಣೀಯ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಮೂಲಕ ವೃತ್ತಿ ಘನತೆ ಎತ್ತಿ ಹಿಡಿಯಬೇಕು. ವೈದ್ಯ ವೃತ್ತಿಯು ಇತರ ವೃತ್ತಿಗಳಂತೆ ಕೇವಲ ಜೀವನ ನಿರ್ವಹಣೆಯ ವೃತ್ತಿಯಲ್ಲ. ಇಡೀ ಸಮಾಜದ ಭವಿಷ್ಯವೇ ತಮ್ಮ ಕೈಯಲ್ಲಿದೆ ಎಂಬ ಹೊಣೆಯರಿತು ವೈದ್ಯರು ಕಾರ್ಯನಿರ್ವಹಿಸಬೇಕು ಎಂದು ಸಲಹೆ ಮಾಡಿದರು.
ಹಿರಿಯ ವೈದ್ಯರಿಗೆ ಸಮ್ಮಾನ
ವೈದ್ಯರ ದಿನಾಚರಣೆ ಅಂಗವಾಗಿ ನಗರದ ಹಿರಿಯ ವೈದ್ಯರಾದ ಎಂ. ಎಸ್. ಪುತ್ರನ್, ಭಾಸ್ಕರ್ ಆಳ್ವ, ಡಾ| ಸಿ.ಕೆ.ಬಲ್ಲಾಳ್, ಸಂತೋಷ್ ಕುಮಾರ್ ಶಾಸಿŒ ಮತ್ತು ಮಾಧವಿ ವಿಜಯ ಕುಮಾರ್ ಅವರನ್ನು ಸಮ್ಮಾನಿಸಲಾಯಿತು. ಡಾ| ಬಿ.ಸಿ.ರಾಯ್ ಅವರ ಜೀವನ ಹಾಗೂ ಸಾಧನೆ ಬಗ್ಗೆ ಡಾ| ರೀಟಾ ಭಗವಾನ್ ಉಪನ್ಯಾಸ ನೀಡಿದರು.
ಐಎಂಎ ಅಧ್ಯಕ್ಷ ಡಾ| ರಾಘವೇಂದ್ರ ಭಟ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಕದ್ರಿ ಯೋಗೀಶ್ ಬಂಗೇರ, ಖಜಾಂಚಿ ಡಾ | ಜಿ.ಕೆ.ಭಟ್ ಸಂಕಬಿತ್ತಿಲು, ನಿಯೋಜಿತ ಅಧ್ಯಕ್ಷ ಡಾ| ಕೆ.ಆರ್.ಕಾಮತ್, ಐಎಂಎ ಟ್ರಸ್ಟ್ ಅಧ್ಯಕ್ಷ ಡಾ | ಹಬೀಬ್ ರೆಹಮಾನ್ ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು
Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ
Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು
Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ ಹತ್ಯೆ; ಆಪ್ತರ ಮೇಲೆ ಶಂಕೆ
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?
ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ
Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ