ಬಗಂಬಿಲ ಅಂಗನವಾಡಿ ಕೇಂದ್ರಕ್ಕೆ ಬೇಕಿದೆ ಸ್ವಂತ ಕಟ್ಟಡ ಭಾಗ್ಯ

24 ವರ್ಷಗಳಿಂದ ಖಾಸಗಿ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿ

Team Udayavani, Jul 16, 2019, 5:34 AM IST

1207ULE7

ಕೋಟೆಕಾರು: ಒಂದೆಡೆ ಖಾಸಗಿ ಆಸ್ಪತ್ರೆಯಿಂದ ಬರುವ ತ್ಯಾಜ್ಯ ನೀರಿನ ವಾಸನೆ ಇನ್ನೊಂದೆಡೆ ಮುರಿದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಇದು ಕೋಟೆಕಾರು ಬಗಂಬಿಲದ ಅಂಗನವಾಡಿ ಕೇಂದ್ರದ ದಯನೀಯ ಸ್ಥಿತಿ!

ಎರಡೂವರೆ ದಶಕದಿಂದ ಬಗಂಬಿಲ ನಾಗರಿಕ ಸೇವಾ ಸಮಿತಿಯ ಸಮುದಾಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಎರಡೂ ವರೆ ಸೆಂಟ್‌ ಜಾಗ ನೀಡಿ ಎರಡೂ ವರೆ ವರ್ಷ ಕಳೆದರೂ ಸಂಬಂಧಿತ ಇಲಾಖೆಯ ದಿವ್ಯ ನಿರ್ಲಕ್ಷದಿಂದ ಮಕ್ಕಳ ಸ್ಥಿತಿ ಅತಂತ್ರವಾಗಿದೆ.

ಬಗಂಬಿಲ ನಾಗರಿಕ ಸೇವಾ ಸಮಿತಿಯ ಸಮುದಾಯ ಕೇಂದ್ರವು 28 ವರ್ಷಗಳ ಹಳೆ ಕಟ್ಟಡ ತೆಗೆದು ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದೆ. ಕಳೆದ 24 ವರ್ಷಗಳಿಂದ ಇದೇ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಬೇಕಾದ ಸವಲತ್ತುಗಳು, ವಿದ್ಯುತ್‌ ಬಿಲ್‌ ಸಹಿತ ಸ್ಥಳೀಯ ದಾನಿಗಳಿಂದ ಹಣ ಸಂಗ್ರಹಿಸಿ ವಿವಿಧ ಮೂಲ ಸೌಕರ್ಯವನ್ನು ಸಂಸ್ಥೆ ನೀಡುತ್ತಾ ಬಂದಿದೆ. ಕಳೆದ ಐದು ತಿಂಗಳ ಹಿಂದೆ ಈ ಕಟ್ಟಡದ ಭಾಗಶಃ ಕಟ್ಟಡ ತೆಗೆದು ನೂತನ ಕಟ್ಟಡ ನಿರ್ಮಾಣ ಕಾರ್ಯ ಆರಂಭ ಗೊಂಡಿದೆ. ಉಳಿದ ಒಂದು ಕೋಣೆಯಲ್ಲಿ ವಿದ್ಯಾರ್ಥಿಗಳಿಗೆ ಅಂಗನ ವಾಡಿ ನಡೆಸಲು ವ್ಯವಸ್ಥೆ ಮಾಡಿದ್ದು, ಕಟ್ಟಡ ರಿಪೇರಿ ಮಾಡಿಕೊಟ್ಟಿದ್ದರಿಂದ ಕಟ್ಟಡ ಸುಭದ್ರವಾಗಿದ್ದರೂ ಕಟ್ಟಡ ತುಂಡಾದ ಜಾಗದಲ್ಲಿ ಫ್ಲೆಕ್ಸ್‌ ಹಾಕಿದ್ದು, ಕಳೆದ ಒಂದು ತಿಂಗಳಿನಿಂದ ಮಳೆಯ ಸಮಸ್ಯೆ ಒಂದೆಡೆ ಯಾದರೆ, ಇನ್ನೊಂದೆಡೆ ಶೌಚಾಲಯದ ಸಮಸ್ಯೆಯೂ ಹೆಚ್ಚಿದ್ದು, ನೂತನ ಅಂಗನವಾಡಿ ನಿರ್ಮಾಣಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದಾದರೆ ಸಮಸ್ಯೆ ಬಗೆಹರಿಸಬಹುದು ಎನ್ನುತ್ತಾರೆ ಸ್ಥಳೀಯರು.

ಬೆಳ್ಳಿ ಹಬ್ಬಕ್ಕಿಲ್ಲ ಸ್ವಂತ ಕಟ್ಟಡ ಭಾಗ್ಯ
ಒಂದೆಡೆ ಖಾಸಗಿ ಆಸ್ಪತ್ರೆಯ ತ್ಯಾಜ್ಯ ನೀರಿನ ಸಮಸ್ಯೆ ಇಲ್ಲಿದೆ. ನೀರನ್ನು ಒಂದು ಟ್ಯಾಂಕ್‌ನಿಂದ ಇನ್ನೊಂದು ಟ್ಯಾಂಕ್‌ಗೆ ವರ್ಗಾಯಿಸುವಾಗ ವಾಸನೆ ಬಡಿಯುತ್ತದೆ. ಇದು ಕಳೆದ ಹಲವು ವರ್ಷಗಳಿಂದ ನಿರಂತರವಾಗಿದೆ. ನಾಗರಿಕ ಸೇವಾ ಸಮಿತಿಯೂ 2019ರ ಜುಲೈ 27ಕ್ಕೆ ಅಂಗನವಾಡಿ ಕೇಂದ್ರ 25 ವರ್ಷ ಪೂರೈಸಿ ಬೆಳ್ಳಿ ಹಬ್ಬ ಆಚರಣೆಯಲ್ಲಿದ್ದರೂ ಅಂಗನ ವಾಡಿ ಕೇಂದ್ರಕ್ಕೆ ಸ್ವಂತ ಕಟ್ಟಡ ಭಾಗ್ಯ ಸಿಗದಿ ರುವುದು ದುರಂತ ಎನ್ನುತ್ತಾರೆ ಅಂಗನವಾಡಿ ನಿವೃತ್ತ ಕಾರ್ಯಕರ್ತೆ ಪುಷ್ಪಾ ಬಗಂಬಿಲ.

ಅಂಗನವಾಡಿ ಕೇಂದ್ರ ನಿರ್ಮಾಣದ ಬಳಿಕ ನಾಗರಿಕ ಸಮಿತಿಗೆ ಕಟ್ಟಡ ನಿರ್ಮಾಣ ಮಾಡುವ ಯೋಚನೆಯಿತ್ತು, ಆದರೆ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯಾವುದೇ ಬೆಳವಣಿಗೆಗಳು ಇಲ್ಲದ ಕಾರಣ ಅನಿವಾರ್ಯವಾಗಿ ಇದ್ದ ಕಟ್ಟಡವನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎನ್ನುತ್ತಾರೆ ಪುಷ್ಪಾ ಅವರು. ಪ್ರಸ್ತುತ ಇಲ್ಲಿ 25 ವಿದ್ಯಾರ್ಥಿಗಳು ದಾಖಲಾಗಿದ್ದು, 20 ವಿದ್ಯಾರ್ಥಿಗಳು ಅಂಗನವಾಡಿ ಕೇಂದ್ರದಲ್ಲಿ ಕಲಿಯುತ್ತಿದ್ದಾರೆ ಎನ್ನುತ್ತಾರೆ ಪ್ರಸ್ತುತ ಅಂಗನವಾಡಿ ಕಾರ್ಯಕರ್ತೆಯಾಗಿರುವ ಸುಮತಿ ಬಗಂಬಿಲ.

 ಅಂಗನವಾಡಿ ಕೇಂದ್ರ ಮುಂದುವರಿಕೆ
ಸಾರ್ವಜನಿಕರ ಸಹಕಾರಕ್ಕಾಗಿ ಸ್ಥಳೀಯ ದಾನಿಗಳ ಮತ್ತು ಯುನೆಸ್ಕೋ ಸಹಕಾರದಿಂದ ನಿರ್ಮಾಣವಾಗಿದ್ದ ನಾಗರಿಕ ಸೇವಾ ಸಮಿತಿ ಕಟ್ಟಡದ ಅಭಿವೃದ್ಧಿಯ ನಿಟ್ಟಿನಲ್ಲಿ ಕಟ್ಟಡವನ್ನು ಕೆಡವಿದ್ದು, ಅಂಗನವಾಡಿಗೆ ತಾತ್ಕಾಲಿಕ ಭಾಗಶಃ ಕಟ್ಟಡವನ್ನು ಉಳಿಸಕೊಳ್ಳಲಾಗಿದೆ. ಸಮಿತಿಯೂ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಖಾಲಿ ಜಾಗವನ್ನು ದಾನ ಮಾಡಿದ್ದು, ನೂತನ ಅಂಗನವಾಡಿ ಕೇಂದ್ರ ಸ್ಥಾಪನೆಗೆ ಸಂಬಂಧಿತ ಇಲಾಖೆ ಮತ್ತು ಕೋಟೆಕಾರು ಪಟ್ಟಣ ಪಂಚಾಯತ್‌ಗೆ ಅರ್ಜಿ ಸಲ್ಲಿಸಿ ಒತ್ತಾಯಿಸಿದೆ. ಅಂಗನವಾಡಿ ಕೇಂದ್ರವನ್ನು ಮುಂದುವರೆಸಲು ಸಮಿತಿ ನಿರ್ಧರಿಸಿದೆ.
– ರಿತೇಶ್‌ ಬಗಂಬಿಲ, ಬಗಂಬಿಲ ನಾಗರಿಕ ಸೇವಾ ಸಮಿತಿ ಅಧ್ಯಕ್ಷ

 ಅನುದಾನ ಬಿಡುಗಡೆಯಾದರೆ ಕಟ್ಟಡ ನಿರ್ಮಾಣ
ನಾಗರಿಕ ಸಮಿತಿಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರದ ಈ ಹಿಂದಿನ ಕಟ್ಟಡ ತೆರ ವಿನಿಂದ ವಿದ್ಯಾರ್ಥಿಗಳಿಗೆ ಜಾಗದ ಅಭಾವ ಇದೆ. ಸ್ಥಳೀಯ ಸರಕಾರಿ ಶಾಲೆಗೆ ತಾತ್ಕಾಲಿಕ ವ್ಯವಸ್ಥೆಗೆ ಮನವಿ ಮಾಡಿದ್ದು ಅದಕ್ಕೆ ಲಿಖೀತ ಮನವಿ ಮಾಡಲು ತಿಳಿಸಿದ್ದಾರೆ. ಅಂಗನವಾಡಿ ಕೇಂದ್ರ ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ಬರುವುದರಿಂದ ಅನುದಾನಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಯಾದರೆ ಕಟ್ಟಡ ನಿರ್ಮಾಣ ಸಾಧ್ಯ
– ಶ್ಯಾಮಲಾ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಮ. ಗ್ರಾ.

 ಅನುದಾನಕ್ಕೆ ಮನವಿ ಸಲ್ಲಿಸಲಾಗಿದೆ
ಕೋಟೆಕಾರು ಪಟ್ಟಣ ಪಂಚಾಯತ್‌ನಿಂದ 5 ಲಕ್ಷದವರೆಗೆ ಅನುದಾನ ನೀಡಲು ಅವಕಾಶವಿದೆ. ಬಗಂಬಿಲ ಮತ್ತು ಕೊಂಡಾಣದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ 10 ಲಕ್ಷ ರೂ. ಅನುದಾನಕ್ಕೆ ಪ್ರಸ್ತಾವ ಸರಕಾರಕ್ಕೆ ಸಲ್ಲಿಸಲಾಗಿದೆ. ಈಗಾಗಲೇ ಕೆಲವು ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ.
 - ಪೂರ್ಣಕಲಾ, ಮುಖ್ಯಾಧಿಕಾರಿ, ಕೋಟೆಕಾರು ಪಟ್ಟಣಪಂಚಾಯತ್‌

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.