ಕಾಮಗಾರಿ ವೇಳೆ ಎರಡು ಬಾರಿ ಕುಸಿದಿದ್ದ ತಡೆಗೋಡೆ


Team Udayavani, Dec 7, 2017, 5:05 PM IST

7-Dec-18.jpg

ಗುತ್ತಕಾಡು: ಕಿನ್ನಿಗೋಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗುತ್ತಕಾಡಿನಿಂದ ಕೊಲ್ಲೂರು ಪದವು ಹೋಗುವ ರಸ್ತೆಯಲ್ಲಿ ಗುತ್ತಕಾಡಿನ ರಸ್ತೆಯ ಅಂಚಿನಲ್ಲಿ ಕೆರೆಯೊಂದು ಇದ್ದು, ವಾಹನ ಚಾಲಕರಿಗೆ ತುಂಬಾ ಅಪಾಯಕಾರಿಯಾಗಿದೆ.

ಇಲ್ಲಿನ ಕೆರೆ ದಂಡೆಯ ಮೇಲೆ ಕೆಲವು ವರ್ಷಗಳ ಹಿಂದೆಯೇ ರಸ್ತೆ ಕಾಮಗಾರಿ ಮಾಡಿದ್ದು, ಆ ವೇಳೆ, ಕೆಳಭಾಗದಲ್ಲಿ ಮಾತ್ರ ತಡೆಗೋಡೆ ನಿರ್ಮಾಣ ಮಾಡಿತ್ತು. ಮೇಲಿನ ಭಾಗದಲ್ಲಿ ಆವರಣ ಗೋಡೆ ನಿರ್ಮಿಸಿಲ್ಲ. ನೀರಿನ ರಭಸಕ್ಕೆ ಕೆರೆಯ ತಡೆಗೋಡೆ ಕಾಮಗಾರಿ ಎರಡು ಬಾರಿ ಕುಸಿತ ಕಂಡಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ದಾರಿ ದೀಪ, ಸೂಚನ ಫ‌ಲಕವಿಲ್ಲ
ಗುತ್ತಕಾಡಿನಿಂದ ಕೊಲ್ಲೂರು ಪದವು ರಸ್ತೆಯಲ್ಲಿ ಕೆರೆಯ ಪರಿಸರವನ್ನು ದಟ್ಟವಾದ ಕಾಡು ಆವರಿಸಿದೆ. ಕತ್ತಲಲ್ಲಿ ಸಂಚಾರ ಮಾಡುವವರಿಗೆ ಅದು ಕೆರೆ ಎಂಬುದೇ ಗೋಚರವಾಗುವುದಿಲ್ಲ. ಹಗಲು ಹೊತ್ತಿನಲ್ಲಿ ಶಾಲಾ ವಾಹನ, ರಿಕ್ಷಾ ಹಾಗೂ ಬಸ್‌ ಸಂಚಾರ ಈ ರಸ್ತೆಯಲ್ಲಿ ಆಗುತ್ತಿದ್ದು, ಎಲ್ಲಿಯೂ ಅಪಾಯವನ್ನು ಸೂಚಿಸುವ ಫಲಕವನ್ನು ಹಾಕಿಲ್ಲ. 

ರಸ್ತೆಗಿಂತ ಕೆರೆ ಸುಮಾರು 20 ಅಡಿ ಆಳದಲ್ಲಿದ್ದು, ನಿಯಂತ್ರಣ ತಪ್ಪಿ ಬಿದ್ದರೆ ಅಪಾಯ ನಿಶ್ಚಿತ. ಇದನ್ನು ತಪ್ಪಿಸಲು ರಸ್ತೆಯ ಪಕ್ಕ ಸುಮಾರು 30 ಮೀ. ಉದ್ದಕ್ಕೆ ತಡೆಗೋಡೆ ಅಗತ್ಯವಿದ್ದು, ಕುಸಿಯುತ್ತಿರುವ ಮೋರಿಯ ಮರು ನಿರ್ಮಾಣವೂ ಆಗಬೇಕಿದೆ. ಜನವರಿ ತನಕ ನೀರು ಹರಿದು ಹೋಗುತ್ತಿದ್ದು, ಈ ಹಿಂದೆ ಕೃಷಿ ಕಾರ್ಯಕ್ಕೆ ಬಳಸಲಾಗುತ್ತಿತ್ತು. ಅದರ ಪಕ್ಕದಲ್ಲಿ ಇದ್ದ ಮೋರಿಯ ಇಕ್ಕೆಲಗಳೂ ಕುಸಿಯುವ ಹಂತದಲ್ಲಿದ್ದು, ಅಪಾಯಕಾರಿಯಾಗಿದೆ.

ಕೆರೆಯಲ್ಲಿ ತ್ಯಾಜ್ಯದ ರಾಶಿ
ಈ ಹಿಂದೆ ಎರಡು ಕೆರೆಗಳು ಇದ್ದು, ಕಾಲ ಕ್ರಮೇಣ ಒಂದು ಮುಚ್ಚಿ ಹೋಗಿದೆ. ಮೇ ತಿಂಗಳಿನ ತನಕ ಕೆರೆಯಲ್ಲಿ ನೀರು ಇರುವುದಾದರೂ ಅದರಲ್ಲಿ ಮೂಟೆಗಟ್ಟಲೆ ಕಸ, ತ್ಯಾಜ್ಯ ಹಾಗೂ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಎಸೆದಿರುವುದರಿಂದ, ನೀರು ಉಪಯೋಗಕ್ಕಿಲ್ಲದಂತಾಗಿದೆ. 

ಸಾಮಾನ್ಯ ಸಭೆಯಲ್ಲಿ ಪ್ರಸ್ತಾವಿಸಲಾಗುವುದು
ಗುತ್ತಕಾಡಿನ ಕೆರೆಯು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿದೆ. ಖಾಸಗಿಯವರದಾದರೂ ರಸ್ತೆಗೆ ಬಿಟ್ಟು ಕೊಟ್ಟ ಜಾಗದ ಪಕ್ಕದಲ್ಲಿ ಇದೆ. ಆದರೆ, ಈ ಹಿಂದೆ ಕಾಮಗಾರಿ ನಡೆಸುವ ಸಂದರ್ಭದಲ್ಲಿ ತಡೆಗೋಡೆ ಮಾಡಿಲ್ಲ. ಈ ಬಗ್ಗೆ ಗ್ರಾಮ ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ವಿಷಯ ಮಂಡನೆ ಮಾಡಲಾಗುವುದು.
ಅರುಣ್‌ ಪ್ರದೀಪ್‌ ಡಿ’ಸೋಜಾ,
   ಪಂಚಾಯತ್‌ ಅಭಿವೃದ್ಧಿ ಅಧಿಕಾರಿ

ರಘುನಾಥ ಕಾಮತ್‌ ಕೆಂಚನಕೆರೆ

ಟಾಪ್ ನ್ಯೂಸ್

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.