ದೀಪಾವಳಿ ಸಂಭ್ರಮ ಆರಂಭ; ಬೆಳಕಿನ ಹಬ್ಬದ ಸಡಗರ


Team Udayavani, Nov 4, 2021, 6:24 AM IST

ದೀಪಾವಳಿ ಸಂಭ್ರಮ ಆರಂಭ; ಬೆಳಕಿನ ಹಬ್ಬದ ಸಡಗರ

ಮಂಗಳೂರು/ಉಡುಪಿ: ಮನೆ, ಮನದ ಅಂಧಕಾರವನ್ನು ಹೊಡೆದೋಡಿಸುವ ಬೆಳಕಿನ ಹಬ್ಬವನ್ನು ಸಡಗರ – ಸಂಭ್ರಮದಿಂದ ಆಚರಿಸಲು ಕರಾವಳಿಯಾದ್ಯಂತ ಜನತೆ ಸಿದ್ಧತೆ ನಡೆದಿದ್ದು, ಮಾರುಕಟ್ಟೆಯಲ್ಲಿ ಬುಧವಾರ ಹಬ್ಬದ ಖರೀದಿ ಜೋರಾಗಿ ನಡೆದಿದೆ.

ದೀಪಾವಳಿಯ ಮೊದಲ ದಿನವಾದ ಬುಧವಾರ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಆಲಯಗಳಲ್ಲಿ ಭಕ್ತರ ಸಂಖ್ಯೆಯೂ ಅಧಿಕವಿತ್ತು. ಬಹುತೇಕ ದೇವಾಲಯದಲ್ಲಿ ಹಣತೆ ಹಚ್ಚಿ ದೀಪಾವಳಿ ಸಂಭ್ರಮವೂ ನಡೆಯಿತು.

ಖರೀದಿ ಜೋರು
ಲಕ್ಷ್ಮೀಪೂಜೆ ಹಿನ್ನೆಲೆಯಲ್ಲಿ ಜನ ಹೂ, ಹಣ್ಣು ಖರೀದಿಯಲ್ಲಿ ತೊಡಗಿದ್ದರು. ನಾಡಿನ ವಿವಿಧ ಭಾಗಗಳಿಂದ ತರಕಾರಿ/ಹೂವು ಮಾರುಕಟ್ಟೆಗೆ ಬಂದಿದ್ದು ವ್ಯಾಪಾರ ಜೋರಾಗಿತ್ತು. ಲಕ್ಷ್ಮೀಪೂಜೆ ಹಿನ್ನೆಲೆಯಲ್ಲಿ ಹೂ, ಹಣ್ಣು ಖರೀದಿಯೂ ಜೋರಾಗಿತ್ತು. ಉಡುಗೊರೆ ನೀಡಲು ಸಿಹಿತಿಂಡಿ / ಒಣಹಣ್ಣುಗಳ ಖರೀದಿಯೂ ಕಂಡುಬಂತು.

ಬೆಳಕಿನ ಸಾಲು
ವಿವಿಧ ದೇಗುಲಗಳಲ್ಲಿ ಗುರುವಾರ ಲಕ್ಷ್ಮೀ ಪೂಜೆ, ವಾಹನ ಪೂಜೆ ಸಹಿತ ವಿವಿಧ ಪೂಜೆಗಳು ನಡೆಯಲಿದ್ದು, ಸಿದ್ಧತೆಗಳು ಪೂರ್ಣಗೊಂಡಿವೆ. ನಗರದ ಮನೆ, ವಾಣಿಜ್ಯ ಮಳಿಗೆಗಳಿಗೆ ಆಕರ್ಷಕ ದೀಪಾಲಂಕಾರ ಮಾಡಲಾಗಿತ್ತು. ಮಾರುಕಟ್ಟೆಯಲ್ಲಿ ತರಕಾರಿ ಹಾಗೂ ಹೂವಿನ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ.

ಹಸುರು ಪಟಾಕಿ ಸದ್ದು
ಸರಕಾರವು ಹಸುರು ಪಟಾಕಿಯನ್ನೇ ಉಪಯೋಗಿಸಬೇಕು ಎಂದು ಆದೇಶಿಸಿರುವ ಹಿನ್ನೆಲೆಯಲ್ಲಿ ಹಸುರು ಪಟಾಕಿಗಳ ಮಾರಾಟ ಬಿರುಸಾಗಿತ್ತು. ಗೋಮಯ ಹಣತೆಗಳು, ಸಾದಾ ಮಣ್ಣಿನ ಹಣತೆಗಳಿಗಾಗಿ ಜನರು ಹೆಚ್ಚು ಬೇಡಿಕೆ ಮಂಡಿಸುತ್ತಿರುವುದು ಕಂಡುಬಂತು. ಸಾಂಪ್ರದಾಯಿಕ ಗೂಡುದೀಪಗಳನ್ನು ಜನರು ಹೆಚ್ಚು ಖರೀದಿಸುತ್ತಿದ್ದುದು ಕಂಡುಬಂತು.

ಇದನ್ನೂ ಓದಿ:ರಾಜ್ಯ ಸರ್ಕಾರದಿಂದ 7 ರೂ. ಗಳಷ್ಟು ಪೆಟ್ರೋಲ್, ಡೀಸೆಲ್ ತೆರಿಗೆ ಇಳಿಕೆ

ಹಸುರು ಪಟಾಕಿ: ಸಮಿತಿ ರಚನೆ
ಉಡುಪಿ ಜಿಲ್ಲೆಯಲ್ಲಿ ಹಸುರು ಪಟಾಕಿ ಬಿಟ್ಟು ಇತರ ಪಟಾಕಿ ಮಾರಾಟಕ್ಕೆ ಅನುಮತಿ ನೀಡಿಲ್ಲ. ಜಿಲ್ಲಾದ್ಯಂತ ಒಟ್ಟು 100 ಕಡೆಯಲ್ಲಿ ಪಟಾಕಿ ಮಳಿಗೆ ತೆರೆಯಲು ಅನುಮತಿ ನೀಡಲಾಗಿದೆ. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕಂದಾಯ ಇಲಾಖೆ ತಹಶೀಲ್ದಾರ್‌/ ಕಂದಾಯ ನಿರೀಕ್ಷಕರು, ಪೊಲೀಸ್‌ ಇಲಾಖೆ, ನಗರಾಡಳಿತ ಹಾಗೂ ಪರಿಸರ ಎಂಜಿನಿಯರ್‌, ಪಿಡಿಒ ನೇತೃತ್ವದಲ್ಲಿ ಸಮಿತಿ ರಚನೆಯಾಗಿದೆ. ಹಸುರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ.

ಟ್ರಾಫಿಕ್‌ ಜಾಮ್‌
ಉಡುಪಿ ನಗರದ ಸಿಟಿ ಬಸ್‌ ನಿಲ್ದಾಣ ರಸ್ತೆ, ಆಭರಣ ಮಳಿಗೆ ಸಮೀಪ, ಚಿತ್ತರಂಜನ್‌ ಸರ್ಕಲ್‌, ಕೋರ್ಟ್‌ ರೋಡ್‌, ಕಲ್ಸಂಕ್‌ ಮಾರ್ಗ, ಶಿರಿಬೀಡು ಜಂಕ್ಷನ್‌, ಮಸೀದಿ ರೋಡ್‌ನ‌ಲ್ಲಿ ಟ್ರಾಫಿಕ್‌ ಸಮಸ್ಯೆ ಎದುರಾಗಿತ್ತು. ನಗರದ ಕೆಲವು ಭಾಗದಲ್ಲಿ ಪೊಲೀಸ್‌ ಸಿಬಂದಿಯನ್ನು ನೇಮಕ ಮಾಡಿದ್ದು, ಮಳೆಯಿಂದಾಗಿ ವಾಹನ ದಟ್ಟಣೆ ನಿಯಂತ್ರಿಸಲಾಗದೆ ರಸ್ತೆ ಯಲ್ಲಿ ಅಸಹಾಯಕ ಸ್ಥಿತಿಯಲ್ಲಿ ನಿಂತು ಕೊಂಡಿರುವ ದೃಶ್ಯಗಳು ಕಂಡು ಬಂದವು.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.