ನಗರದಲ್ಲಿ ಉತ್ತಮ,ಗ್ರಾಮಾಂತರದಲ್ಲಿ ಮಿಶ್ರ ಪ್ರತಿಕ್ರಿಯೆ


Team Udayavani, Feb 26, 2017, 3:46 PM IST

2502kpk7.jpg

ಪುತ್ತೂರು: ಕೇರಳ ಮುಖ್ಯ ಮಂತ್ರಿ ಪಿಣರಾಯಿ ವಿಜಯನ್‌ ಮಂಗಳೂರಿನಲ್ಲಿ ನಡೆಯಲಿರುವ ಕೋಮು ಸೌಹಾರ್ದ ರ್ಯಾಲಿಯಲ್ಲಿ ಭಾಗವಹಿಸುವುದನ್ನು ವಿರೋಧಿಸಿ ಸಂಘ ಪರಿವಾರದ ಸಂಘಟನೆಗಳು ಕರೆ ನೀಡಿದ ಹರತಾಳಕ್ಕೆ ಪುತ್ತೂರು ನಗರದಲ್ಲಿ ಉತ್ತಮ, ಗ್ರಾಮಾಂತರದಲ್ಲಿ  ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಖಾಸಗಿ ಬಸ್‌ಗಳು ಓಡಾಟ ಸ್ಥಗಿತಗೊ ಳಿಸಿದ್ದವು. ಆಟೋಗಳ ಓಡಾಟವು ವಿರಳವಾ ಗಿತ್ತು. ಸಣ್ಣ-ಪುಟ್ಟ ಅಹಿತಕರ ಘಟನೆ ಹೊರತುಪಡಿಸಿ ಕೆಎಸ್‌ಆರ್‌ಟಿಸಿ ಬಸ್‌ಗಳು ಎಂದಿನಂತೆ ಓಡಾಟ ಮುಂದುವರಿ ಸಿತ್ತು. ಪ್ರಥಮ ಪಿಯುಸಿ ಪರೀಕ್ಷೆ ಅಡ್ಡಿ- ಆತಂಕವಿಲ್ಲದೆ ನಡೆಯಿತು.

ರಸ್ತೆಗಿಳಿಯದ ಖಾಸಗಿ ಬಸ್‌
ಹರತಾಳ ಹಿನ್ನೆಲೆಯಲ್ಲಿ ಖಾಸಗಿ ಬಸ್‌ಗಳು ಬೀದಿಗಿಳಿಯಲಿಲ್ಲ. ಕೇರಳ ಗಡಿ ಭಾಗಕ್ಕೆ ಸಂಚರಿಸುವ ಬಸ್‌, ಕೇರಳ ಸಾರಿಗೆ ಬಸ್‌ಗಳು ಸಂಚಾರ ನಡೆಸಿಲ್ಲ. ಬಹುತೇಕ ಪ್ರಯಾಣಿಕರು ಸರಕಾರಿ ಬಸ್‌ ಅನ್ನು ಆಶ್ರಯಿಸಿದ್ದರು. ಖಾಸಗಿ ಬಸ್‌ ಮಾತ್ರ ಓಡಾಟ ನಡೆಸುತ್ತಿದ್ದ ಸ್ಥಳಗಳಲ್ಲಿ ಪ್ರಯಾಣಿಕರು ತೊಂದರೆ ಅನುಭವಿಸಿದ್ದರು. ನಗರ, ಗ್ರಾಮಾಂತರ ಪ್ರದೇಶದಲ್ಲಿ ಆಟೋ, ಟೂರಿಸ್ಟ್‌ ಕಾರುಗಳ ಓಡಾಟ ಸಾಧಾರಣ ವಾಗಿತ್ತು.

ನಗರದಲ್ಲಿ  ಶೇ. 90 ಬಂದ್‌
ನಗರ, ಗ್ರಾಮಾಂತರ ಪ್ರದೇಶದ ಪ್ರಮುಖ ಕೇಂದ್ರಗಳಲ್ಲಿ ಅಂಗಡಿ -ಮುಂಗಟ್ಟುಗಳು ಬೆಳಗ್ಗಿನಿಂದಲೇ ಬಂದ್‌ ಆಗಿತ್ತು.  ನಗರದಲ್ಲಿ ಶೇ. 90ಕ್ಕಿಂತ ಅಧಿಕ ಅಂಗಡಿ, ಮಳಿಗೆಗಳು ಬಾಗಿಲು ತೆರೆದಿರಲಿಲ್ಲ. ಪೆಟ್ರೋಲ್‌ ಬಂಕ್‌ಗಳು ಬಂದ್‌ ಆಗಿದ್ದ ಕಾರಣ, ಖಾಸಗಿ ವಾಹನ ಓಡಾಟಗಾರರಿಗೆ ತೊಂದರೆ ಉಂಟಾಯಿತು. ಸವಣೂರು, ಈಶ್ವರಮಂಗಲದಲ್ಲಿ ಹರತಾಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅಲ್ಲಿ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆದಿರಲಿಲ್ಲ. ಕೆಯ್ಯೂರು, ಪಾಣಾಜೆ, ಸುಳ್ಯಪದವು, ಉಪ್ಪಿನಂಗಡಿ, ಆಲಂಕಾರು, ಕುಂಬ್ರ, ತಿಂಗಳಾಡಿ ಮೊದಲಾದೆಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಜನ ಓಡಾಟ ವಿರಳ
ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ಜನರ ಓಡಾಟ ವಿರಳವಾಗಿತ್ತು. ಖಾಸಗಿ ವಾಹನ ಗಳ ಸಂಚಾರವೂ ಇಳಿಮುಖವಾ ಗಿತ್ತು. ಸದಾ ಜನದಟ್ಟಣೆಯಿಂದ ಕೂಡಿದ್ದ ಪುತ್ತೂರು ನಗರ ಬಿಕೋ ಎನ್ನುತ್ತಿತ್ತು. ನಗರದ ಬಹುತೇಕ ಹೊಟೇಲ್‌ ಮುಚ್ಚಿದ್ದ ಪರಿಣಾಮ, ಊಟ – ಉಪಹಾರಕ್ಕೂ ಪರ ದಾಡುವಂತಾಗಿತ್ತು. 

ತೆರೆಮರೆಯಲ್ಲಿ ಒಂದೆರೆಡು ಕ್ಯಾಂಟೀನ್‌, ಹೊಟೇಲ್‌ ತೆರೆದಿದ್ದರೂ ಕ್ಷಣದಲ್ಲೇ ತಿಂಡಿ-ತಿನಿಸು ಖಾಲಿ ಆಗಿತ್ತು. ಮೆಡಿಕಲ್‌, ಹಾಲು ಮಾರಾಟ ಕೇಂದ್ರಗಳು ತೆರಿದಿದ್ದವು. ಬೆರಳೆಣಿಕೆಯ ಅಂಗಡಿ-ಮಳಿಗೆ ತೆರೆದಿದ್ದರೂ ಜನರಿಲ್ಲದೆ ವ್ಯಾಪಾರ ಕುಂಠಿತವಾಗಿತ್ತು. 

ಕೆಎಸ್‌ಆರ್‌ಟಿಸಿ ಬಸ್‌ಗೆ ಕಲ್ಲೆಸೆತ
ಕೆಎಸ್‌ಆರ್‌ಟಿಸಿ ಬಸ್‌ ಎಂದಿನಂತೆ ಓಡಾಟ ನಡೆಸಿದ್ದು, ಎಂಟು ಬಸ್‌ಗಳ ಮೇಲೆ ಕಲ್ಲು ತೂರಲಾಗಿತ್ತು. ಪಡೀಲು, ವಿಟ್ಲ, ಬೆದ್ರಾಳ, ಕೃಷ್ಣನಗರ, ನಗರದ ಎಪಿಎಂಸಿ ರಸ್ತೆ ಸೇರಿದಂತೆ ಒಟ್ಟು ಎಂಟು ಕಡೆಗಳಲ್ಲಿ ಕಲ್ಲು ತೂರಾಟ ನಡೆಸಿದ ಪರಿಣಾಮ ಬಸ್‌ನ ಗಾಜಿಗೆ ಹಾನಿ ಉಂಟಾಗಿದೆ. ಯಾವುದೇ ಪ್ರಯಾಣಿಕರಿಗೆ ಹಾನಿ ಉಂಟಾಗಿಲ್ಲ. ಮಾಣಿ-ಮೈಸೂರು ರಸ್ತೆಯ ನಗರದ ಬೈಪಾಸ್‌ನ ತೆಂಕಿಲದಲ್ಲಿ ಬೆಳಗ್ಗೆ ರಸ್ತೆ ಮಧ್ಯೆ ಟಯರ್‌ಗೆ ಬೆಂಕಿ ಹಚ್ಚಲಾಗಿತ್ತು. ಉಳಿದಂತೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಬಸ್‌ ಕಲ್ಲು ತೂರಾಟದ ಪರಿಣಾಮ ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗಕ್ಕೆ 1.5 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ವಿಭಾಗ ನಿಯಂತ್ರಣಾಧಿಕಾರಿ ನಾಗರಾಜ ಶಿರಾಲಿ ಉದಯವಾಣಿಗೆ ತಿಳಿಸಿದ್ದಾರೆ.

ಪರೀಕ್ಷೆ  ನಿರಾತಂಕ
ತಾಲೂಕಿನ ಪ.ಪೂ. ಕಾಲೇಜಿಗಳಲ್ಲಿ ವಿದ್ಯಾರ್ಥಿಗಳಿಗೆ ಗಣಿತ ಪರೀಕ್ಷೆ ಪೂರ್ವ ನಿಗದಿಯಂತೆ ಶನಿವಾರ ನಡೆದಿದೆ. ಹರತಾಳದಿಂದ ಪರೀಕ್ಷೆ ನಡೆಯುವ ಕುರಿತಂತೆ ಗೊಂದಲಗಳಿತ್ತು. ಆದರೆ ಇಲಾಖೆಧಿಕಾರಿಗಳು ಆಯಾ ನೋಡೆಲ್‌ ಅಧಿಕಾ ರಿಗಳಿಗೆ ಪರೀಕ್ಷೆ ನಡೆಸು ವಂತೆ ಶನಿವಾರ ಬೆಳಗ್ಗೆಯೇ ಸೂಚಿಸಿದ್ದರು. ಪುತ್ತೂರು ನೋಡೆಲ್‌ ವ್ಯಾಪ್ತಿಯ ಅಂಬಿಕಾ ಪ.ಪೂ. ಕಾಲೇಜು, ವಿವೇಕಾನಂದ, ಕಬಕ, ಕುಂಬ್ರ, ಮುರ, ಫಿಲೋಮಿನಾ ಸೇರಿದಂತೆ 14 ಸಂಸ್ಥೆ ಗಳಲ್ಲಿ ಪರೀಕ್ಷೆ ನಿರಾತಂಕವಾಗಿ ಸಾಗಿತ್ತು. ಒಟ್ಟು 1,645 ವಿದ್ಯಾರ್ಥಿಗಳ ಪೈಕಿ 1,640 ವಿದ್ಯಾ ರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.