ಭವನ ಇಡೀ ಸಮಾಜಕ್ಕೆ ಲಭಿಸಲಿ: ಮಾಲಾಡಿ


Team Udayavani, May 6, 2019, 6:15 AM IST

bhavana

ಬಜಪೆ: ಬಂಟ ಸಮಾಜದವರು ಎಲ್ಲರ ಸುಖ-ಕಷ್ಟಗಳಿಗೆ ಸದಾ ಸ್ಪಂದಿಸುವವರು. ಎಲ್ಲರೊಂದಿಗೆ ಸಹಭಾಗಿಯಾಗಿ ನಾಯಕತ್ವ ಗುಣ ಬೆಳೆಸುವವರು. ಬಂಟರಲ್ಲಿ ಕೊಡುವ ಗುಣ ಇದೆ. ಇಲ್ಲಿ ನಿರ್ಮಾಣವಾಗಿರುವ ಭವನ ಬಂಟರಿಗೆ ಮಾತ್ರವಲ್ಲ, ಇಡೀ ಸಮಾಜಕ್ಕೆ ಉಪಯೋಗಕ್ಕೆ ಲಭಿಸಲಿ ಎಂದು ಬಂಟರ ಯಾನೆ ನಾಡವರ ಮಾತೃ ಸಂಘ ಅಧ್ಯಕ್ಷ ಮಾಲಾಡಿ ಅಜಿತ್‌ ಕುಮಾರ್‌ ರೈ ಹೇಳಿದರು.

ಎಕ್ಕಾರು ಬಂಟರ ಸಂಘದ ವತಿಯಿಂದ 2 ಕೋಟಿ ರೂ. ವೆಚ್ಚದಲ್ಲಿ ಎಕ್ಕಾರಿನಲ್ಲಿ ನಿರ್ಮಾಣಗೊಂಡ ಬಂಟರ ಭವನವನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಮಾರಂಭದ ಅಂಗವಾಗಿ ನಡೆದ ಬಂಟರ ದಿಬ್ಬಣಕ್ಕೆ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಚಾಲನೆ ನೀಡಿದರು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆನುವಂಶಿಕ ಅರ್ಚಕ ವೇ|ಮೂ| ವಾಸುದೇವ ಆಸ್ರಣ್ಣ ಹಾಗೂ ಎಕ್ಕಾರು ಶ್ರೀಕೃಷ್ಣ ಮಠದ ವೇ|ಮೂ| ಹರಿದಾಸ ಉಡುಪ ಶುಭಾಶಂಸನೆಗೈದರು.

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಎಕ್ಕಾರು ಬಂಟರ ಸಂಘ ಎಲ್ಲರಿಗೂ ಮಾದರಿಯಾಗಿದೆ ಎಂದು ಶ್ಲಾ ಸಿದರು.

ಶಾಸಕ ಉಮಾನಾಥ ಕೋಟ್ಯಾನ್‌ ಮಾತನಾಡಿ, ಎಕ್ಕಾರಿನಲ್ಲಿ ಸಭಾಂಗ ಣದ ಕೊರತೆಯನ್ನು ಬಂಟರ ಸಂಘ ನಿವಾರಿಸಿದೆ ಎಂದರು.

ಸಭಾಂಗಣವನ್ನು ಉದ್ಯಮಿ ಭಾಸ್ಕರ ಶೆಟ್ಟಿ ನಡೊÂàಡಿಗುತ್ತು, ಸಭಾ ವೇದಿಕೆವನ್ನು ಉದ್ಯಮಿ ಕೃಷ್ಣ ಡಿ. ಶೆಟ್ಟಿ, ಭೋಜನ ಶಾಲೆಯನ್ನು ಪ್ರಕಾಶ್‌ ಶೆಟ್ಟಿ, ಪಾಕಶಾಲೆಯನ್ನು ಕೃಷ್ಣ ಶೆಟ್ಟಿ, ಅಲಂಕಾರ ಕೊಠಡಿಯನ್ನು ಜಯ ಎಂ. ಶೆಟ್ಟಿ ದೊಡ್ಡಮನೆ ಮತ್ತು ಸುಜಾತಾ ಶಂಭು ಶೆಟ್ಟಿ ಮೇಲೆಕ್ಕಾರು ಅವರು ಉದ್ಘಾಟಿಸಿದರು. ಶ್ರೀದೇವಿ ಶಿಕ್ಷಣ ಸಂಸ್ಥೆಗಳ ಚೇರ್‌ಮನ್‌ ಎ. ಸದಾನಂದ ಶೆಟ್ಟಿ ಮಹಾದಾನಿಗಳನ್ನು ಗೌರವಿಸಿದರು.

ಮಾಜಿ ಸಚಿವ ಅಮರನಾಥ ಶೆಟ್ಟಿ, ಮಾಜಿ ಶಾಸಕ ವಿಜಯ ಕುಮಾರ್‌ ಶೆಟ್ಟಿ, ವಿವೇಕ್‌ ಶೆಟ್ಟಿ ಬೊಲ್ಯಗುತ್ತು, ಸಂತೋಷ್‌ ಕುಮಾರ್‌ ಶೆಟ್ಟಿ, ಮಂಜುನಾಥ ಭಂಡಾರಿ ಶೆಡ್ಡೆ, ಡಾ| ಜಯರಾಮ್‌ ಶೆಟ್ಟಿ , ವಾದಿರಾಜ ಶೆಟ್ಟಿ, ದೇವಿಪ್ರಸಾದ್‌ ಶೆಟ್ಟಿ ಕಲ್ಲಾಡಿ, ರವಿರಾಜ್‌ ಶೆಟ್ಟಿ ನಿಟ್ಟೆಗುತ್ತು, ಸುಧಾಕರ ಪೂಂಜ, ಸಂತೋಷ್‌ ಕುಮಾರ್‌ ಹೆಗ್ಡೆ, ಮೋನಪ್ಪ ಶೆಟ್ಟಿ ಎಕ್ಕಾರು, ನಿತಿನ್‌ ಹೆಗ್ಡೆ, ಅಶೋಕ್‌ ಶೆಟ್ಟಿ ದಾದರ್‌, ದೇವಿಪ್ರಸಾದ್‌ ಶೆಟ್ಟಿ ಬೆಳಪು, ನಿಶಾಕಾಂತ್‌ ಶೆಟ್ಟಿ ಉಪಸ್ಥಿತರಿದ್ದರು.

ಮಾಜಿ ಶಾಸಕ ವಿಜಯ ಕುಮಾರ್‌ ಶೆಟ್ಟಿ ತನ್ನ ಒಂದು ತಿಂಗಳ ಮಾಸಾಶನವನ್ನು ಸಂಘಕ್ಕೆ ನೀಡಿದರು. ಎಕ್ಕಾರು ಬಂಟರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ ಪ್ರಸ್ತಾವನೆಗೈದು ಮಾಜಿ ಅಧ್ಯಕ್ಷ ದಿ| ಯಶೋಧರ ಶೆಟ್ಟಿ ಅವರ ಪ್ರಯತ್ನದಿಂದ ಈ ಕನಸು ನನಸಾಗಿದೆ ಎಂದರು. ದಯಾನಂದ ಮಾಡ ಹಾಗೂ ನಿತೇಶ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಸಮ್ಮಾನ
ಉದ್ಯಮಿ ಭಾಸ್ಕರ ಶೆಟ್ಟಿ ನಡೊÂàಡಿಗುತ್ತು, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್‌ ಕುಮಾರ್‌ ರೈ, ಉದ್ಯಮಿ ಕೃಷ್ಣ ಡಿ. ಶೆಟ್ಟಿ, ಜಯ ಎಂ. ಶೆಟ್ಟಿ, ಸುಜಾತಾ ಶಂಭು ಶೆಟ್ಟಿ ಮೇಲೆಕ್ಕಾರು, ಭವನದ ಗುತ್ತಿಗೆದಾರ ಪ್ರದೀಪ್‌ ಕುಮಾರ್‌ ಶೆಟ್ಟಿ, ಎಲೆಕ್ಟ್ರೀಶಿಯನ್‌ ರಮೇಶ್‌ ಶೆಟ್ಟಿ, ಸುಂದರಿ ಶೆಟ್ಟಿ ಮಜಿಕರೆ, ಅಧ್ಯಕ್ಷ ರತ್ನಾಕರ ಶೆಟ್ಟಿ ಮತ್ತು ಲತಾ ಶೆಟ್ಟಿ, ಮಲ್ಲಿಕಾ ಯಶೋಧರ ಶೆಟ್ಟಿ, ಕಳ್ಳಿಗೆ ಬಾಲಕೃಷ್ಣ ಶೆಟ್ಟಿ ಮತ್ತು ಶೋಭ ಶೆಟ್ಟಿ ಹಾಗೂ ದೇಣಿಗೆ ನೀಡಿದ ಇತರರನ್ನು ಸಮ್ಮಾನಿಸಲಾಯಿತು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.