ನಗರದಲ್ಲಿ ರವಿವಾರವೇ ಅತೀ ಹೆಚ್ಚು ರಸ್ತೆ ಅಪಘಾತ: ಅಧ್ಯಯನ ವರದಿ

ಮೂರು ವರ್ಷಗಳ ಅವಧಿ

Team Udayavani, Dec 13, 2019, 9:56 PM IST

xd-12

ಮಹಾನಗರ: ಮಂಗಳೂರಿನಲ್ಲಿ ಒಂದು ವಾರದಲ್ಲಿ ಘಟಿಸುತ್ತಿರುವ ಅಪಘಾತಗಳ ಪೈಕಿ ಶೇ. 21ರಷ್ಟು ಅಪಘಾತಗಳು ರವಿವಾರದಂದೇ ಘಟಿಸುತ್ತಿವೆ. ಮೂರು ವರ್ಷಗಳ ಅವಧಿಯಲ್ಲಿ ಘಟಿಸಿದ ಅಪಘಾತಗಳಿಗೆ ಸಂಬಂಧಿಸಿ ಮಂಗಳೂರು ನಗರ ಪೊಲೀಸ್‌ ಠಾಣೆಗಳಿಂದ ವಿದ್ಯಾರ್ಥಿಗಳ ತಂಡವೊಂದು ಸಂಗ್ರಹಿಸಿದ ಡೇಟಾದಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ.

ನಗರದ ಸ್ಕೂಲ್‌ ಆಫ್‌ ರೋಶನಿ ನಿಲಯದ ಅಪರಾಧ ಪತ್ತೆ ಶಾಸ್ತ್ರ ಮತ್ತು ವಿಧಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ವಿಭಾಗ ಮುಖ್ಯಸ್ಥೆ ಸರಿತಾ ಡಿ’ಸೋಜಾ ಅವರ ಮಾರ್ಗದರ್ಶನದಲ್ಲಿ 2018ರಲ್ಲಿ ನಡೆಸಿದ ಅಧ್ಯಯನದಲ್ಲಿ ರವಿವಾರ ಅಪಘಾತ ಪ್ರಮಾಣ ಹೆಚ್ಚಳವಾಗಿರುವುದು ತಿಳಿದು ಬಂದಿದೆ. ವಿದ್ಯಾರ್ಥಿಗಳು ನಗರದ ವಿವಿಧ ಸಂಚಾರಿ ಪೊಲೀಸ್‌ ಠಾಣೆಗಳಿಂದ 2015-17ರ ನಡುವಿನ ಡೇಟಾವನ್ನು ಕಲೆ ಹಾಕಿದ್ದು, ಪ್ರತಿ ದಿನದ ಅಪಘಾತಗಳನ್ನು ಪಟ್ಟಿ ಮಾಡಿದ್ದಾರೆ. ಈ ಪೈಕಿ ರವಿವಾರ ಅಪರಾಹ್ನ 3ರಿಂದ ರಾತ್ರಿ 10 ಗಂಟೆ ನಡುವೆ ಶೇ. 21ರಷ್ಟು ಅಪಘಾತ ಸಂಭವಿಸಿರುವುದು ತಿಳಿದು ಬಂದಿದೆ. ಇದರಲ್ಲಿ ಶೇ. 20ರಷ್ಟು ಅಪಘಾತ ಸಂಜೆ 6ರಿಂದ 9 ಗಂಟೆಯೊಳಗೆ ಸಂಭವಿಸಿದ್ದಾಗಿದೆ. ಸೋಮವಾರ ಮಧ್ಯಾಹ್ನ 12ರಿಂದ 3 ಹಾಗೂ ಸಂಜೆ 6ರಿಂದ 9 ಗಂಟೆಯೊಳಗೆ ಶೇ. 16ರಷ್ಟು ರಸ್ತೆ ಅಪಘಾತಗಳು ಈ ಮೂರು ವರ್ಷಗಳ ಅವಧಿಯಲ್ಲಿ ಸಂಭವಿಸಿದೆ. ಉಳಿದಂತೆ ಎಲ್ಲ ವಾರಗಳಲ್ಲಿ ಸಣ್ಣಪುಟ್ಟ ಅಪಘಾತಗಳು ಸಂಭವಿಸಿವೆ.

25-35 ವಯಸ್ಸಿನವರೇ ಹೆಚ್ಚು!
ನಗರದಲ್ಲಿ ನಡೆಯುವ ಬಹುತೇಕ ರಸ್ತೆ ಅಪಘಾತಗಳಲ್ಲಿ 25-35 ವಯಸ್ಸಿನವರೇ ಹೆಚ್ಚಿದ್ದಾರೆ. ಬಳಿಕ 35-45 ವಯಸ್ಸಿವರಿದ್ದಾರೆ. ಅಪಘಾತಕ್ಕೊಳಗಾದವರ ಪೈಕಿ ಬಹುತೇಕ ಬೈಕ್‌ ಚಾಲಕರು ಮತ್ತುಯುವಕರೇ ಸೇರಿದ್ದಾರೆ. ಮಧ್ಯಮ ವಯಸ್ಕರು ಮತ್ತು ಪ್ರಾಯಸ್ಥರು ಜಾಗರೂಕತೆಯಿಂದ ವಾಹನ ಚಲಾಯಿಸುವುದರಿಂದ ಮತ್ತು ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ಅಂತಹವರಿಂದ ಆಗುವ ಅಪಘಾತಗಳ ಸಂಖ್ಯೆ ಕಡಿಮೆ ಇದೆ ಎನ್ನುತ್ತದೆ ಅಧ್ಯಯನ. 15-35 ವರ್ಷದೊಳಗಿನವರಿಂದ ಹಿಟ್‌ ಆ್ಯಂಡ್‌ ರನ್‌ ಕೇಸ್‌ ಪ್ರಕರಣ ಜಾಸ್ತಿಯಾಗುತ್ತಿವೆ ಎಂಬುದು ಅಧ್ಯಯನದಲ್ಲಿ ಗೊತ್ತಾಗಿರುವ ಅಂಶ ಎನ್ನುತ್ತಾರೆ ವಿಭಾಗ ಮುಖ್ಯಸ್ಥೆ ಸರಿತಾ ಡಿ’ಸೋಜಾ.

ಅತಿವೇಗ ಕಾರಣ
ಅಪಘಾತಗಳಿಗೆ ಅತಿವೇಗ ಮತ್ತು ನಿರ್ಲಕ್ಷéದ ಚಾಲನೆಯೇ ಕಾರಣವಾಗಿದೆ. ರವಿವಾರ ಕಡಿಮೆ ಟ್ರಾಫಿಕ್‌ ಇರುವುದರಿಂದ ಅತಿವೇಗದ ಚಾಲನೆ ಮಾಡುತ್ತಿರುವುದೇ ಅಪಘಾತ ಸಂಭವಿಸಲು ಕಾರಣವಾಗುತ್ತಿದೆ. ರಾತ್ರಿ ಅತಿವೇಗದ ಚಾಲನೆ ಹೆಚ್ಚುತ್ತಿದೆ. ಅತಿಯಾದ ಟ್ರಾಫಿಕ್‌, ಬೈಕ್‌ ಸ್ಕಿಡ್‌ ಆಗುವುದರಿಂದಾಗಿ ಸಣ್ಣಪುಟ್ಟ ಅಪಘಾತಗಳು ಘಟಿಸಿವೆ. ಪಾಂಡೇಶ್ವರ, ಹಂಪನಕಟ್ಟೆ, ಮಾರ್ಕೆಟ್‌ ರೋಡ್‌, ಸ್ಟೇಟ್‌ಬ್ಯಾಂಕ್‌ ಸಹಿತ ನಗರದ 11 ಸ್ಥಳೀಯ ರಸ್ತೆಗಳಲ್ಲಿ ಶೇ. 41ರಷ್ಟು ಅಪಘಾತಗಳುಂಟಾದರೆ, ಶೇ. 33ರಷ್ಟು ಅಪಘಾತಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟಿಸಿದ್ದವಾಗಿವೆ. ಸುರತ್ಕಲ್‌, ಪಣಂಬೂರು, ಮೂಲ್ಕಿ, ನಂತೂರಿನಲ್ಲೇ ಹೆಚ್ಚಿನ ಅಪಘಾತ ಘಟಿಸಿವೆ. ಚಳಿಗಾಲದಲ್ಲಿ (ಡಿಸೆಂಬರ್‌-ಮಾರ್ಚ್‌) ಬಹುತೇಕ ಅಪಘಾತಗಳು ಘಟಿಸುತ್ತಿವೆ ಎಂಬುದಾಗಿ ಅಧ್ಯಯನದಲ್ಲಿ ಗೊತ್ತಾಗಿದೆ.

ರವಿವಾರವೇ ಶೇ. 21ರಷ್ಟು ರಸ್ತೆ ಅಪಘಾತ
ಮಂಗಳೂರು ಕಮಿಷನರೇಟ್‌ ವ್ಯಾಪ್ತಿಯಲ್ಲಿ 2015-17ರಲ್ಲಿ ಘಟಿಸಿದ ರಸ್ತೆ ಅಪಘಾತಗಳ ಕುರಿತು ವಿವಿಧ ಟ್ರಾಫಿಕ್‌ ಪೊಲೀಸ್‌ ಠಾಣೆಗಳಿಂದ ವಿದ್ಯಾರ್ಥಿಗಳು ಡೇಟಾ ಸಂಗ್ರಹಿಸಿ ಈ ಅಧ್ಯಯನ ಮಾಡಿದ್ದಾರೆ. 2018ರಲ್ಲಿ ನಡೆದ ಅಧ್ಯಯನ ಇದಾಗಿದ್ದು, ಮೂರು ವರ್ಷಗಳಲ್ಲಿ ರವಿವಾರವೇ ಶೇ. 21ರಷ್ಟು ರಸ್ತೆ ಅಪಘಾತ ಸಂಭವಿಸಿರುವುದು ಗೊತ್ತಾಗಿದೆ.
 - ಸರಿತಾ ಡಿ’ಸೋಜಾ, ಅಪರಾಧಶಾಸ್ತ್ರ , ವಿಧಿವಿಜ್ಞಾನ ಶಾಸ್ತ್ರ ವಿಭಾಗ ಮುಖ್ಯಸ್ಥೆ, ಸ್ಕೂಲ್‌ ಆಫ್‌ ಸೋಶಿಯಲ್‌ ವರ್ಕ್‌ ರೋಶನಿ ನಿಲಯ

ಅಂಕಿ-ಅಂಶ
ಶೇ. 41ರಷ್ಟು ಅಪಘಾತ ನಗರದ 11 ಸ್ಥಳೀಯ ರಸ್ತೆಗಳಲ್ಲಿ
ಶೇ. 33ರಷ್ಟು ಅಪಘಾತಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ
ರವಿವಾರ ಅಪರಾಹ್ನ 3ರಿಂದ ರಾತ್ರಿ 10ರ ನಡುವೆ ಶೇ. 21ರಷ್ಟು ಅಪಘಾತ
ರವಿವಾರ ಸಂಜೆ 6ರಿಂದ 9ರ ನಡುವೆ ಶೇ. 20ರಷ್ಟು ಅಪಘಾತ
 ಸೋಮವಾರ ಮಧ್ಯಾಹ್ನ 12-3, ಸಂಜೆ 6ರಿಂದ 9ರೊಳಗೆ ಶೇ. 16ರಷ್ಟು ರಸ್ತೆ ಅಪಘಾತ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.