“ಜೈವಿಕ ಶಿಲೀಂಧ್ರ’ ಲ್ಯಾಬೊರೇಟರಿ ಕಾರ್ಯಾರಂಭ


Team Udayavani, Jan 10, 2018, 12:37 PM IST

10-23.jpg

ಉಳ್ಳಾಲ: ಅಣುವಿಕಿರಣದಿಂದ ಜನರ ಮೇಲಾಗುವ ಪರಿಣಾಮವನ್ನು ಪತ್ತೆಹಚ್ಚುವ ಮತ್ತು ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಭಾರತೀಯ ರಕ್ಷಣಾ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಪ್ರಯೋಗಾಲಯವಾಗಿರುವ ಅಣುವೈದ್ಯಕೀಯ ಮತ್ತು ಅನ್ವಯಿಕ ವಿಜ್ಞಾನ ಸಂಸ್ಥೆ (ಐಎನ್‌ಎಂಎಎಸ್‌) ಮತ್ತು ನಿಟ್ಟೆ (ಪರಿಗಣಿಸಲಾಗಿರುವ ವಿಶ್ವವಿದ್ಯಾನಿಲಯ) ಜಂಟಿಯಾಗಿ ದೇರಳಕಟ್ಟೆಯ ಕೆ.ಎಸ್‌. ಹೆಗ್ಡೆ ಮೆಡಿಕಲ್‌ ಅಕಾಡೆಮಿಯಲ್ಲಿ  “ಜೈವಿಕ ಶಿಲೀಂಧ್ರ’ ಲ್ಯಾಬೋರೇಟರಿ ಪ್ರಾರಂಭಿಸುವ ಐತಿಹಾಸಿಕ ಒಪ್ಪಂದ ಮಾಡಿಕೊಂಡಿದೆ.

ಲ್ಯಾಬೋರೇಟರಿಯು ಈಗಾಗಲೇ ಕಾರ್ಯಾರಂಭಿಸಿದೆ. ಜೈವಿಕ ಶಿಲೀಂಧ್ರ ಲ್ಯಾಬೋರೇಟರಿ ಸ್ಥಾಪನೆಯ ಕುರಿತು ನಿಟ್ಟೆ ವಿ.ವಿ. ಕುಲಪತಿ ಡಾ| ಸತೀಶ್‌ ಭಂಡಾರಿ ಮಾತನಾಡಿ ಐಎನ್‌ಎಂಎಎಸ್‌ (ಇನ್‌ಮಾಸ್‌) ಮೂಲ ಹಾಗೂ ಅನ್ವಯಿಕ ವೈದ್ಯಕೀಯ ವಿಜ್ಞಾನಗಳ ಸಂಶೋಧನಾ ಸಂಸ್ಥೆಯಾಗಿದ್ದು, ಇದು ರೇಡಿಯೋಥೆರಪಿ ತುರ್ತು ಸ್ಥಿತಿಗೆ ಸಂಬಂಧಿಸಿದಂತೆ ರೇಡಿಯೋ ಪ್ರೊಟೆಕ್ಟರ್‌ ಮತ್ತು ಚಿಕಿತ್ಸಾ  ವಿಧಿವಿಧಾನಗಳು, ಜೈವಿಕ ಶಿಲೀಂಧ್ರ (ಬಯೋಡೋಸಿಮೆಟ್ರಿ), ಔಷಧ ಅಭಿವೃದ್ಧಿ ಮತ್ತು ರಾಸಾಯನಿಕ, ಜೈವಿಕ, ರೇಡಿಯೋಲಜಿ ಮತ್ತು ಅಣುರಕ್ಷಣೆ, ಪ್ರತಿವಿಕಿರಣ ಕ್ರಮಗಳು, ತುರ್ತು ಸ್ಥಿತಿಯಲ್ಲಿ ಚಿಕಿತ್ಸೆ ನೀಡುವುದು ಮತ್ತಿತರ ಕ್ಷೇತ್ರದಲ್ಲೂ ಸಂಶೋಧನೆ ನಡೆಸುತ್ತದೆ ಎಂದರು.

ಈ ಸಂದರ್ಭದಲ್ಲಿ ನಿಟ್ಟೆ ವಿ.ವಿ.ಯ ಕುಲಾಧಿಪತಿ ಎನ್‌. ವಿನಯ ಹೆಗ್ಡೆ, ಸಹಕುಲಾಧಿಪತಿ ಡಾ| ಶಾಂತಾರಾಮ ಶೆಟ್ಟಿ, ಕುಲಪತಿ ಡಾ| ಸತೀಶ್‌ ಕುಮಾರ್‌ ಭಂಡಾರಿ, ಕ್ಷೇಮ ಡೀನ್‌ ಡಾ| ಪಿ.ಎಸ್‌.ಪ್ರಕಾಶ್‌, ವೈಸ್‌ ಡೀನ್‌ (ಆಡಳಿತ) ಡಾ| ಜಯಪ್ರಕಾಶ್‌ ಶೆಟ್ಟಿ, ಲ್ಯಾಬೋರೇಟರಿ ಮುಖ್ಯಸ್ಥೆ ಡಾ| ಸುಚೇತಾ, ಸಂಯೋಜಕ ಡಾ| ಪ್ರಶಾಂತ್‌ ಮತ್ತು “ಜೈವಿಕ ಶಿಲೀಂಧ್ರ’ ಡಿಆರ್‌ಡಿಒ ಮುಖ್ಯಸ್ಥರು ಉಪಸ್ಥಿತರಿದ್ದರು.

ರಾಜ್ಯದಲ್ಲಿ  ಮೊದಲ ಪ್ರಯೋಗಾಲಯ
2012-14ರ ಅವಧಿಯಲ್ಲಿ ಒಟ್ಟು 14 ರಾಷ್ಟ್ರಗಳು ಇಂಥ ಪ್ರಯೋಗಾಲಯವನ್ನು ಸ್ಥಾಪಿಸಿ ಯಶಸ್ವಿಯಾಗಿ ನಿರ್ವಹಿಸುತ್ತಿದ್ದು, ಭಾರತದಲ್ಲಿ ಕೇವಲ 3 ಪ್ರಯೋಗಾಲಯಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, “ಕ್ಷೇಮ’ದಲ್ಲಿ ಕಾರ್ಯಾರಂಭಗೊಳ್ಳಲಿರುವ ಪ್ರಯೋಗಾಲಯ ದೇಶದಲ್ಲಿ ನಾಲ್ಕನೆಯದು ಮತ್ತು ರಾಜ್ಯದ ಮೊದಲ ಪ್ರಯೋಗಾಲಯವಾಗಿದೆ.

ಪ್ರಥಮ ಹಂತದಲ್ಲಿ  18 ತಿಂಗಳ ಅವಧಿಗೆ ಒಪ್ಪಂದ ಮಾಡಿಕೊಳ್ಳ ಲಾಗಿದ್ದು, ಇದರಲ್ಲಿ 3 ತಿಂಗಳು ಸಿಬಂದಿ ತರಬೇತಿ, 12 ತಿಂಗಳ ಅನಂತರ ಪ್ರಯೋಗಾಲಯ ಹೋಲಿಕೆ, ನಿಟ್ಟೆ ಮತ್ತು ಐಎನ್‌ಎಂಎಎಸ್‌ (ಇನ್‌ಮಾಸ್‌) ನಡುವಿನ ಮೊದಲ ಡೋಸ್‌ ಸ್ಪಂದನೆಯ ಕ್ಯಾಲಿಬ್ರೇಷನ್‌ ಕರ್ವ್‌ ಅವಧಿ ಸೇರಿರುತ್ತದೆ. ಇನ್‌ಮಾಸ್‌ ತರಬೇತಿ ಉದ್ದೇಶಕ್ಕಾಗಿ 3.52 ಲಕ್ಷ ರೂ.ಗಳ ಆರಂಭಿಕ ಬೆಂಬಲದೊಂದಿಗೆ ಈ ಪ್ರಸ್ತಾವನೆಗೆ ಚಾಲನೆ ನೀಡಿದೆ. ಸೂಕ್ತ ದಾಖಲೆ ಸಲ್ಲಿಸಿದ ಅನಂತರ ತರಬೇತಿ ಕಾರ್ಯವನ್ನು ಪೂರ್ಣಗೊಳಿಸಿದ ಬಳಿಕ ಎಇಆರ್‌ಬಿ ಮಾನ್ಯತೆಗಾಗಿ ಒಪ್ಪಂದ ಮಾಡಿಕೊಳ್ಳಲಾಗುತ್ತದೆ.

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.