ಬಿಜೆಪಿ ಕಾಲದಲ್ಲೂ ವರಿಷ್ಠರಿಗೆ ಕಪ್ಪ ಹೋಗಿತ್ತು: ಕುಮಾರಸ್ವಾಮಿ
Team Udayavani, Feb 13, 2017, 3:45 AM IST
ಮಂಗಳೂರು: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿಯವರ ಮನೆಯಲ್ಲಿ ದೊರಕಿರುವ ಡೈರಿಯಲ್ಲಿ ಕೆಲವರಿಗೆ ಹಣ ಸಂದಾಯವಾಗಿರುವ ಕುರಿತು ಮಾಹಿತಿ ದೊರಕಿರುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಾಂಬ್ ಸಿಡಿಸಿದ್ದಾರೆ. ಆದರೆ ಯಡಿಯೂರಪ್ಪ ಅವರ ಬಿಜೆಪಿಯ ಸರಕಾರದ ಕಾಲಧಿದಲ್ಲೂ ಆ ಪಕ್ಷದ ಕೆಲವು ವರಿಷ್ಠರಿಗೆ ಚೆಕ್ ಮೂಲಕ ಹಣ ಸಂದಾಯವಾಗಿತ್ತು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯಧಿರೋರ್ವರ ಮನೆಯಲ್ಲಿ ಆದಾಯ ತೆರಿಗೆ ದಾಳಿ ಸಂದರ್ಭ ದೊರಕಿರುವ ಡೈರಿಯಲ್ಲಿ ಯಾರಿಗೆ ಯಾವಾಗ ಎಷ್ಟೆಷ್ಟು ಹಣ ಹೋಗಿದೆ ಎಂಬ ಬಗ್ಗೆ ಮಾಹಿತಿ ಲಭಿಧಿಸಿರುವುದಾಗಿ ಹೇಳಿದ್ದಾರೆ. ಇದು ಹೊಸ ವಿಚಾರವಲ್ಲ. 6 ತಿಂಗಳ ಹಿಂದೆಯೇ ಗೊತ್ತಿತ್ತು. 2 ದಿನಗಳ ಬಳಿಕ ಇನ್ನೊಂದು ದೊಡ್ಡ ಬಾಂಬ್ ಸಿಡಿಸುವುದಾಗಿ ಹೇಳಿದ್ದಾರೆ. ಇದು ಹುಸಿಬಾಂಬು ಅಥವಾ ಒಳ್ಳೆಯ ಬಾಂಬು ಆಗಿರಬಹುದೇ ಎಂಬುದು ಗೊತ್ತಿಲ್ಲ ಎಂದರು.
ಯೋಜನೆ ಹೆಸರಲ್ಲಿ ಸಂಗ್ರಹ
ಕರ್ನಾಟಕ ರಾಜ್ಯ ಸಂಪದ್ಭರಿತ ರಾಜ್ಯ. ಎರಡು ರಾಷ್ಟ್ರೀಯ ಪಕ್ಷಧಿಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಇಲ್ಲಿಯ ಸಂಪತ್ತನ್ನು ರಾಜ್ಯದ ಅಭಿವೃದ್ಧಿಗೆ ವಿನಿಯೋಗಿಸುವ ಬದಲು ವರಿಷ್ಠರನ್ನು ಓಲೈಸಲು ವಿನಿಧಿಯೋಗಿಸಿವೆ. ವಿವಿಧ ಯೋಜನೆಗಳ ಹೆಸರಿನಲ್ಲಿ ಹಣ ಸಂಗ್ರಹಿಸಿ ಅದನ್ನು ಅಲ್ಲಿಗೆ ರವಾನಿಸಿವೆ ಎಂದು ಅವರು ಆರೋಪಿಸಿದರು. ರಾಜ್ಯದಲ್ಲಿ ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಸೋಂಬೇರಿ ಸರಕಾರವಿದೆ. ರಾಜ್ಯದಾದ್ಯಂತ ತೀವ್ರ ಬರ ಪರಿಸ್ಥಿತಿ ಇದೆ. ಆದರೂ ಈ ಸರಕಾರದಿಂದ ಏನೂ ಕೆಲಸಗಳಾಗುತ್ತಿಲ್ಲ. ಆ ಪಕ್ಷದ ಸಚಿವರೇ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದರು.
ಪಕ್ಷದ ನಾಯಕರಾದ ಬಿ.ಎಂ. ಫಾರೂಕ್, ಅಮರನಾಥ ಶೆಟ್ಟಿ, ಜಿಲ್ಲಾ ಅಧ್ಯಕ್ಷ ಮಹಮ್ಮದ್ ಕುಂಞಿ, ಎಂ.ಬಿ. ಸದಾಶಿವ, ಹೈದರ್ ಪರ್ತಿಪ್ಪಾಡಿ, ಯುವ ಜನತಾದಳ ಅಧ್ಯಕ್ಷ ಅಕ್ಷಿತ್ ಸುವರ್ಣ, ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಉಪಸ್ಥಿತರಿದ್ದರು.
ಬಹುಮತ ಬರದಿದ್ದರೆ ಹೊಂದಾಣಿಕೆ ಇಲ್ಲ
ಮುಂದಿನ ಚುನಾವಣೆಯಲ್ಲಿ ಯಾವುದೇ ಪಕ್ಷ ಬಹುಮತ ಪಡೆಯದ ಸನ್ನಿವೇಶ ತಲೆದೋರಿದರೆ ಜೆಡಿಎಸ್ ಯಾರ ಜತೆಯೂ ಹೊಂದಾಣಿಕೆ ಮಾಡಿಕೊಳ್ಳದೆ ಮರಳಿ ಚುನಾವಣೆಗೆ ಹೋಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.