ವಿದೇಶದಿಂದ ಕಳಪೆ ಅಡಿಕೆ ಆಮದಿಗೆ ಕೇಂದ್ರ ಕಾರಣ

 ಕೆಪಿಸಿಸಿ ಕಾರ್ಯದರ್ಶಿ ಎಂ. ವೆಂಕಪ್ಪ ಗೌಡ ಆರೋಪ

Team Udayavani, Apr 11, 2019, 6:00 AM IST

g-16

ವಿದೇಶದಿಂದ ಆಮದುಗೊಂಡ ಅಡಿಕೆಯನ್ನು ವೆಂಕಪ್ಪ ಗೌಡ ಹಾಗೂ ಇತರರು ಕಾಂಗ್ರೆಸ್‌ ಸಭೆಯಲ್ಲಿ ಪ್ರದರ್ಶಿಸಿದರು.

ಸುಳ್ಯ: ವಿದೇಶದಿಂದ ಕಳಪೆ ಅಡಿಕೆ ಕಡಿಮೆ ಬೆಲೆಗೆ ಆಮದಾಗುತ್ತಿದ್ದು, ಇದರ ಪರಿಣಾಮ ಈ ಭಾಗದ ಅಡಿಕೆಗೆ ಧಾರಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಕೇಂದ್ರ ಸರಕಾರ ನೇರ ಕಾರಣ ಎಂದು ಕೆಪಿಸಿಸಿ ಕಾರ್ಯದರ್ಶಿ ಎಂ. ವೆಂಕಪ್ಪ ಗೌಡ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ್ಮಾ, ಥೈಲ್ಯಾಂಡ್‌ ಶ್ರೀಲಂಕಾ ಹಾಗೂ ಮಲೇಷ್ಯಾದಿಂದ ಆಮದುಗೊಂಡ ಅಡಿಕೆಯನ್ನು ಪ್ರದರ್ಶಿಸಿದ ಅವರು, ಈ ಅಡಿಕೆ ಮಾರುಕಟ್ಟೆಯಲ್ಲಿ 170 ರೂ.ಗಳಿಗೆ ಸಿಗುತ್ತದೆ. ವಾಸ್ತವವಾಗಿ ಈ ಬಾರಿ ಫಸಲು ಕಡಿಮೆಯಾಗಿರುವುದರಿಂದ ಅಡಿಕೆ ಬೆಲೆ ಮುನ್ನೂರು ರೂ.ಗಳಾದರೂ ಇರಬೇಕಿತ್ತು. ಆದರೆ 175 ರೂ.ಗಳಿಗೆ ಅಡಿಕೆ ದೊರೆತರೆ ಇಲ್ಲಿಯ ಬೆಳೆಗಾರ ಬದುಕಲು ಸಾಧ್ಯವೇ ಎಂದವರು ಪ್ರಶ್ನಿಸಿದರು.

ಮಿಥುನ್‌ ರೈ ಅವರನ್ನು ಗೆಲ್ಲಿಸಿದರೆ ಅವರು ಅಡಿಕೆ ಬೆಳೆಗಾರರ ಕುರಿತು ಲೋಕಸಭೆಯಲ್ಲಿ ಪ್ರಶ್ನಿಸಿ ಈ ನೀತಿಯನ್ನು ಹಿಂತೆಗೆದುಕೊಳ್ಳುವಂತೆ ಮತ್ತು ಅಡಿಕೆ ಬೆಳೆಗಾರರಿಗೆ ನ್ಯಾಯ ಒದಗಿಸಲು ಬದ್ಧರಿರುತ್ತಾರೆ. ಆದುದರಿಂದ ಅಡಿಕೆ ಬೆಳೆಗಾರರು ಮಿಥುನ್‌ ರೈ ಅವರನ್ನು ಗೆಲ್ಲಿಸಬೇಕು ಎಂದು ಹೇಳಿದರು.

ಕಳಗಿ ಕೊಲೆ: ಸಮಗ್ರ ತನಿಖೆಯಾಗಲಿ
ಬಿಜೆಪಿ ಧುರೀಣ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಕಳಗಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಊಹಾಪೋಹಗಳು ಹರಿದಾಡುತ್ತಿದ್ದು, ಈ ಕುರಿತು ಪೊಲೀಸರು ಪೂರ್ಣ ಪ್ರಮಾಣದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಿಸಬೇಕು. ಕಳಗಿ ಕುಟುಂಬಕ್ಕೆ 5 ಪೈಸೆಯ ಸಹಾಯಧನವನ್ನೂ ಬಿಜೆಪಿ ನೀಡಿಲ್ಲ ಎಂದು ಹೇಳಿದರು.

ಎಸ್‌ಸಿ ಘಟಕದ ಜಿಲ್ಲಾಧ್ಯಕ್ಷ ಶೇಖರ ಕುಕ್ಕೇಡಿ, ತಾಲೂಕು ಅಧ್ಯಕ್ಷೆ ಲಕ್ಷ್ಮೀ ಸುಬ್ರಹ್ಮಣ್ಯ, ಕಾಂಗ್ರೆಸ್‌ ಮುಖಂಡ ಡಾ| ರಘು, ಬೀರಾಮೊಯಿದ್ದೀನ್‌, ನಂದರಾಜ್‌ ಸಂಕೇಶ, ಸಿದ್ದೀಕ್‌ ಕೊಕ್ಕೋ, ಜೂಲಿಯಾನ ಕ್ರಾಸ್ತಾ, ವಸಂತ ಕುದ್ಪಾಜೆ, ಮಧುಸೂದನ ಬೂಡು, ಸುಂದರಿ ಆಲೆಟ್ಟಿ, ಪ್ರಹ್ಲಾದ್‌, ಪ್ರಕಾಶ್‌ ಬಂಗ್ಲೆಗುಡ್ಡೆ ಪತ್ರಿಕಾಗೋಷ್ಠಿಯಲ್ಲಿದ್ದರು.

ಬಿಜೆಪಿ ಪ್ರಣಾಳಿಕೆ ಸುಳ್ಳಿನ ಕಂತೆ
ಪಕ್ಷದ ಚುನಾವಣ ಕಚೇರಿಯಲ್ಲಿ ಮಾತನಾಡಿದ ವೆಂಕಪ್ಪ ಗೌಡ, ಈ ಹಿಂದಿನ ಚುನಾವಣೆಯಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿಲ್ಲ. 15 ಲಕ್ಷ ರೂ. ಅಕೌಂಟಿಗೆ ಹಾಕಿಲ್ಲ. ಸ್ವಿಸ್‌ ಬ್ಯಾಂಕ್‌ನಿಂದ ಕಪ್ಪು ಹಣ ತಂದಿಲ್ಲ. ಜನಧನ್‌ ಯೋಜನೆ ಮೂಲಕ ಹಣ ತುಂಬಿಲ್ಲ. ರಾಮ ಮಂದಿರ ಕಟ್ಟಿಲ್ಲ. ಹೀಗಾಗಿ ಜನ ಅವರನ್ನು ನಂಬುವುದು ಇಲ್ಲ. ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಎಡವಿದೆ ಎಂದು ಟೀಕಿಸಿದರು.

ಮರಣವಾರ್ತೆ ತಿಳಿಸಲು ಡೀಸೆಲ್‌ ಹಾಕಬೇಕಾದ ಅವಸ್ಥೆ ಬಿಎಸ್ಸೆನ್ನೆಲ್‌ಗೆ ಬಂದೊದಗಿದೆ. ನಾಳೆ ಇದನ್ನು ಮುಚ್ಚಿ ಖಾಸಗಿಯವರಿಗೆ ಕೊಟ್ಟರೆ ಅಲ್ಲಿ ಅಂಬಾನಿ ಬೆಂಬಲಿಗರಿಗಷ್ಟೇ ಉದ್ಯೋಗ ಸಿಗುತ್ತದೆಯೇ ಹೊರತು ಮೆರಿಟ್‌ ಆಧಾರದಲ್ಲಿ ಅರ್ಹರಿಗೆ ಸಿಗುವುದಿಲ್ಲ ಎಂದು ವೆಂಕಪ್ಪ ಗೌಡ ತಿಳಿಸಿದರು.

ಟಾಪ್ ನ್ಯೂಸ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.