ಮಂಗಳೂರು-ಬೆಂಗಳೂರು ರೈಲು ಮಾರ್ಗ: ಗುಡ್ಡ ಕುಸಿದರೆ ತೆರವುಗೊಳಿಸುವುದೇ ಸವಾಲು


Team Udayavani, Jul 8, 2019, 12:02 PM IST

TRAIN

ಸಂಗ್ರಹ ಚಿತ್ರ

ಸುಬ್ರಹ್ಮಣ್ಯ : ಬೆಂಗಳೂರು- ಮಂಗಳೂರು ನಡುವೆ ಪ್ರತೀ ವರ್ಷ ಮಳೆಗಾಲದಲ್ಲಿ ರೈಲು ಸಂಚಾರ ಅನುಮಾನ. ಇದಕ್ಕೆ ಕಾರಣ ಪಶ್ಚಿಮ ಘಟ್ಟದ ಮೂಲಕ ಹಾದುಹೋಗುವ ರೈಲು ಮಾರ್ಗದಲ್ಲಿ ಗುಡ್ಡ ಕುಸಿತ.

ಸಕಲೇಶಪುರ – ಸುಬ್ರಹ್ಮಣ್ಯ ರೈಲು ಮಾರ್ಗದ ಮಧ್ಯೆ ಕಳೆದ ಬಾರಿ ಅತಿವೃಷ್ಟಿ ಸಂದರ್ಭ 65 ಕಡೆ ಭೂಕುಸಿತ ಸಂಭವಿಸಿ ತಿಂಗಳುಗಟ್ಟಲೆ ರೈಲು ಓಡಾಟ ಸ್ಥಗಿತಗೊಂಡಿತ್ತು. ಮಾರ್ಗದ ಎರಡೂ ಕಡೆ ಗುಡ್ಡಗಳು ಈಗಲೂ ಬಾಯೆ¤ರೆದೇ ಇವೆ. ಹೀಗಾಗಿ ಈ ಬಾರಿಯೂ ಮಳೆ ಜೋರಾದಾಗ ಭೂಕುಸಿತ ಪುನರಾವರ್ತನೆಯಾಗುವ ಸಾಧ್ಯತೆ ಹೆಚ್ಚು.

ದೊಡ್ಡ ಸವಾಲು
ಈ ರೈಲು ಮಾರ್ಗ ನಿರ್ಮಾಣವಾದ ಬಳಿಕ ಇಷ್ಟು ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿರಲಿಲ್ಲ. ಸಿರಿಬಾಗಿಲು, ಎಡಕುಮೇರಿ, ಕಡಗರಹಳ್ಳ, ದೋಣಿಗಲ್‌ -ಅತೀ ಹೆಚ್ಚು ಗುಡ್ಡ ಕುಸಿತ ಅನುಭವಿಸಿದ ಪ್ರದೇಶಗಳಿವು. ಹಳಿ ಮೇಲೆ ಬಿದ್ದ ಮಣ್ಣು ತೆರವು ಮಾಡಿ ಹಳಿಯನ್ನು ಪೂರ್ವ ಸ್ಥಿತಿಗೆ ತರುವುದು ರೈಲ್ವೇ ಇಲಾಖೆಗೆ ದೊಡ್ಡ ಸವಾಲು.

ಹಳಿ ಮೇಲೆ ಬಂಡೆಕಲ್ಲುಗಳು
ಮಣ್ಣಿನ ಜತೆಗೆ ಬಂಡೆಕಲ್ಲುಗಳು ಬೀಳುವುದರಿಂದ ಹಳಿಗಳು ಸಂಪೂರ್ಣ ನಾಶವಾಗುತ್ತವೆ. ಹಿಟಾಚಿ ಮತ್ತು ಕಾರ್ಮಿಕರ ಸಹಾಯದಿಂದ ತೆರವು, ದುರಸ್ತಿ ನಡೆಸಬೇಕು. ಮಳೆ ಸುರಿಯುವಾಗ ಹಿಟಾಚಿ ಯಂತ್ರಗಳನ್ನು ಮಣ್ಣು ಕುಸಿದಲ್ಲಿಗೆ ಒಯ್ಯುವುದು ಕೂಡ ಸವಾಲೇ ಸರಿ. ಸ್ಥಳವು ಇಕ್ಕಟ್ಟಾಗಿದ್ದರೆ, ಅಕ್ಕಪಕ್ಕ ಪ್ರಪಾತಗಳಿದ್ದರೆ ಜಾಗದ ಕೊರತೆಯಿಂದ ಟಿಪ್ಪರ್‌ ಬಳಸಿ ಮಣ್ಣು ಸ್ಥಳಾಂತರಿಸುವುದಕ್ಕೂ ಸಾಧ್ಯವಾಗದು.

ಸವಾಲುಗಳು ಏನೇನು?
ಹಳಿ ಮೇಲೆ ಬಿದ್ದ ಮಣ್ಣು, ಬಂಡೆಗಲ್ಲು ತೆರವು ಕಷ್ಟದ ಕೆಲಸ. ಕಾಡಾನೆಗಳ ಭಯ ಇನ್ನೊಂದೆಡೆ. ಕೆಲಸ ಮಾಡುತ್ತಿರುವಾಗಲೇ ಮತ್ತೆ ಗುಡ್ಡ ಕುಸಿಯುವ ಭೀತಿ. ಒಂದು ಕಡೆ ಮಣ್ಣು ತೆರವುಗೊಳಿಸಿ ಇನ್ನೊಂದೆಡೆಗೆ ಹೋದಾಗ ದಾರಿಯಲ್ಲಿ ಮಣ್ಣು ಕುಸಿದು ಕಾರ್ಮಿಕರು, ಅಧಿಕಾರಿಗಳು ದಿಗ್ಬಂಧನಕ್ಕೆ ಒಳಗಾದ ಉದಾಹರಣೆಗಳೂ ಇವೆ. ಮಣ್ಣು ತೆರವು ಮಾಡಿದ ಬಳಿಕ ಹಳಿ ದುರಸ್ತಿಯಾಗಬೇಕು. ಆಮೇಲೆ ಪ್ರಾಯೋಗಿಕ ಸಂಚಾರ ನಡೆಸಿಯೇ ರೈಲು ಸಂಚಾರಕ್ಕೆ ಅಧಿಕಾರಿಗಳು ಅನುಮತಿ ನೀಡುತ್ತಾರೆ.

2 ಎಕರೆ ಗುಡ್ಡ ಜರಿದಿತ್ತು
ಸುಬ್ರಹ್ಮಣ್ಯ-ಸಕಲೇಶಪುರ ರೈಲು ಮಾರ್ಗದ ಸಿರಿಬಾಗಿಲು ಮಾರ್ಗ 86ರ ಬಳಿ ಕಳೆದ ವರ್ಷ ಭಾರೀ ಗಾತ್ರದ ಗುಡ್ಡ ಜರಿದು ಮಣ್ಣು ಮತ್ತು ಬಂಡೆಗಲ್ಲು ರೈಲು ಸುರಂಗದ ಮೇಲೆ ಬಿದ್ದಿತ್ತು. 170 ಮೀ. ಉದ್ದದ ಸುರಂಗ ಸಂಪೂರ್ಣ ಮುಚ್ಚಿತ್ತು. ಮೇಲ್ಭಾಗದಲ್ಲಿ 25 ಮೀ.ನಷ್ಟು ಎತ್ತರಕ್ಕೆ ಮಣ್ಣು ಆವರಿಸಿತ್ತು. ಆಗ ಸುಮಾರು ಎರಡು ಎಕ್ರೆ ವಿಸ್ತಾರದಲ್ಲಿ ಗುಡ್ಡ ಜರಿದುದು ಗುಡ್ಡ ಕುಸಿತ ಘಟನೆಯ ತೀವ್ರತೆಗೆ ಸಾಕ್ಷಿ.

ಕಟ್ಟೆಚ್ಚರ ವಹಿಸಲಾಗುತ್ತಿದೆ
ಸುಬ್ರಹ್ಮಣ್ಯ-ಸಕಲೇಶಪುರ ರೈಲು ಮಾರ್ಗದಲ್ಲಿ ಗುಡ್ಡ ಜರಿತ ಕುರಿತು ನಿಗಾ ವಹಿಸಲಾಗುತ್ತಿದೆ. ರಾತ್ರಿ ಹೊತ್ತು ಪೆಟ್ರೋಲ್‌ ಮ್ಯಾನ್‌ ನಿಯೋಜಿಸಲಾಗಿದೆ. ಇಲಾಖೆಯ ತಾಂತ್ರಿಕ ಅಧಿಕಾರಿಗಳು ಮಾರ್ಗದ ಸುರಕ್ಷತೆ ಮತ್ತು ಗುಣಮಟ್ಟ ಪರಿಶೀಲನೆಯ ಕುರಿತು ಕಟ್ಟೆಚ್ಚರ ವಹಿಸುತ್ತಿದ್ದಾರೆ.
– ಗೋಪಿನಾಥ್‌ ರೈಲ್ವೇ ಅಧಿಕಾರಿ, ಮೈಸೂರು ರೈಲ್ವೇ ವಿಭಾಗ

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.