ನಗರದ ವಸತಿ  ಯೋಜನೆಗಳಿಗೆ ವೇಗ ಅಗತ್ಯ


Team Udayavani, Aug 2, 2021, 3:20 AM IST

ನಗರದ ವಸತಿ  ಯೋಜನೆಗಳಿಗೆ ವೇಗ ಅಗತ್ಯ

ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಲ್ಲಿ ಒಟ್ಟು 5 ಯೋಜನೆಗಳು ಮಂಜೂರು ಆಗಿವೆ. ಈ ಯೋಜನೆಗಳು ಮಂಜೂರು ಆಗಿ ಕೆಲವು ವರ್ಷಗಳಾಗಿದ್ದು, ಒಂದು ಯೋಜನೆ ಹೊರತುಪಡಿಸಿ ಉಳಿದಂತೆ ಎಲ್ಲ ಯೋಜನೆಗಳು ಇನ್ನೂ ನಿರ್ಮಾಣ ಹಂತಕ್ಕೆ ಬಂದಿಲ್ಲ. ಯೋಜನೆ ಅನುಷ್ಠಾನದಲ್ಲಿ ವಿಳಂಬದಿಂದಾಗಿ ಫಲಾನುಭವಿಗಳು ಮನೆ ಹೊಂದುವ ಕನಸು ಮರೀಚಿಕೆಯಾಗುತ್ತಿದೆ.

ಕೇಂದ್ರ ಪುರಸ್ಕೃತ ಸರ್ವರಿಗೂ ಸೂರು ಯೋಜನೆಯಲ್ಲಿ ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಜ್‌ ಯೋಜನೆಯಡಿ ವಸತಿರಹಿತರಿಗೆ ನಗರದ ಪದವು ಗ್ರಾಮದ ಶಕ್ತಿನಗರದಲ್ಲಿ ಒಂದು, ಇಡ್ಯಾದಲ್ಲಿ ಎರಡು, ತಿರುವೈಲಿನಲ್ಲಿ ಒಂದು ಜಿ ಪ್ಲಸ್‌3 ಮಾದರಿಯ ವಸತಿ ಯೋಜನೆಗಳು ಮಂಜೂರಾಗಿತ್ತು. ಇದರಲ್ಲಿ ಇಡ್ಯಾದ 2 ಯೋಜನೆಗಳು ಮಾತ್ರ ಅನುಷ್ಠಾನದಲ್ಲಿದೆ. ಮಂಗಳೂರಿನ ಶಕ್ತಿನಗರದಲ್ಲಿ ಜಿಪ್ಲಸ್‌ ಮಾದರಿಯಲ್ಲಿ ವಸತಿ ಯೋಜನೆ ಮಂಜೂರಾಗಿ 4 ವರ್ಷಗಳಾಗಿವೆ. 950 ಫಲಾನುಭವಿಗಳಿಗೆ 3 ವರ್ಷಗಳ ಹಿಂದೆ ಹಕ್ಕುಪತ್ರ ವಿತರಣೆಯಾಗಿದೆ. ಆದರೆ ಜಾಗದ ತಾಂತ್ರಿಕ ಸಮಸ್ಯೆಯಿಂದಾಗಿ ಯೋಜನೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಈಗ ಜಾಗದ ಸಮಸ್ಯೆ ಇತ್ಯರ್ಥ ಹಂತಕ್ಕೆ ತಲುಪಿದ್ದು ಶೀಘ್ರದಲ್ಲೇ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂದು ಆಡಳಿತ ವ್ಯವಸ್ಥೆ ಹೇಳುತ್ತಿದೆ. ಸಮಸ್ಯೆಯನ್ನು ತ್ವರಿತಗತಿಯಲ್ಲಿ ಪರಿಹರಿಸಿ ಯೋಜನೆ ಶೀಘ್ರಗತಿಯಲ್ಲಿ ಅನುಷ್ಠಾನಗೊಳಿಸಿ ಫಲಾನುಭವಿಗಳ ಅತಂತ್ರ ಸ್ಥಿತಿಯನ್ನು ನಿವಾರಿಸಬೇಕಾಗಿದೆ.

ಕಣ್ಣೂರಿನಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯವರಿಂದ 500 ಮನೆಗಳನ್ನು ಜಿಪ್ಲಸ್‌ ಮಾದರಿಯಲ್ಲಿ ನಿರ್ಮಿಸುವ ಯೋಜನೆ ಮಂಜೂರಾಗಿ 5 ವರ್ಷಗಳು ಕಳೆದಿದೆ. 7.24 ಎಕರೆ ಜಮೀನು ಕೂಡ ಇದಕ್ಕೆ ಕಾದಿರಿಸಲಾಗಿದೆ. ಆದರೆ ಯೋಜನೆ ಅನುಷ್ಠಾನಿಸುವ ನಿಟ್ಟಿನಲ್ಲಿ ಯಾವುದೇ ಪ್ರಗತಿಯಾಗಿಲ್ಲ. ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಲ್ಲಿ ತಿರುವೈಲು ಗ್ರಾಮದಲ್ಲಿ 600 ಫಲಾನುಭವಿಗಳನ್ನು ಆಯ್ಕೆ ಮಾಡಿ ಜಿಪ್ಲಸ್‌ 3 ಮಾದರಿಯಲ್ಲಿ ವಸತಿ ಸಂಕೀರ್ಣ ನಿರ್ಮಿಸುವ ಯೋಜನೆ ಮಂಜೂರಾಗಿ 3 ವರ್ಷಗಳಾಗಿವೆ. 6.33 ಎಕರೆ ಜಮೀನು ಕಾದಿರಿಸಲಾಗಿದೆ. ಆದರೆ ಜಾಗ ವಸತಿ ಯೋಜನೆಗೆ ಸೂಕ್ತವಾಗಿಲ್ಲ ಎಂಬ ಕಾರಣದಿಂದ ನನೆಗುದಿಯಲ್ಲಿದೆ. ಕುಂಜತ್ತಬೈಲ್‌ನಲ್ಲಿ 3 ಎಕರೆ ಜಮೀನಿನಲ್ಲಿ ಹೊಸದಾಗಿ ವಸತಿ ಸಂಕೀರ್ಣ ನಿರ್ಮಿಸುವ ಬಗ್ಗೆ ಪ್ರಸ್ತಾವನೆ ತಯಾರಿಸುವ ಪ್ರಕ್ರಿಯೆ ಜಾರಿಯಲ್ಲಿದೆ.

ಸರ್ವರಿಗೂ ಸೂರು ಕಲ್ಪಿಸುವುದು ವಸತಿ ಯೋಜನೆಯ ಆಶಯ. ಈ ನಿಟ್ಟಿನಲ್ಲಿ ಮಂಜೂರುಗೊಳ್ಳುವ ಯೋಜನೆಗಳು ಸಕಾಲದಲ್ಲಿ ಅನುಷ್ಠಾನಗೊಂಡು ಅರ್ಹ ಫಲಾನುವಿಗಳಿಗೆ ಮನೆ ದೊರೆತಾಗ ಮಾತ್ರ ಇದರ ಉದ್ದೇಶ ಸಫಲವಾಗುತ್ತದೆ. ಯೋಜನೆಗೆ ನಿವೇಶನಗಳನ್ನು ಹಾಗೂ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ನೋಡಿಕೊಳ್ಳುವ ಹೊಣೆಗಾರಿಕೆ ಆಡಳಿತ ವ್ಯವಸ್ಥೆಯ ಮೇಲಿದೆ. ಪ್ರಸ್ತುತ ಮಂಗಳೂರಿನಲ್ಲಿ ಮಂಜೂರುಗೊಂಡಿರುವ ಮೂರು ಯೋಜನೆಗಳು ಜಾಗದ ಸಮಸ್ಯೆಯನ್ನು ಎದುರಿಸುತ್ತಿದೆ. ಸಮಸ್ಯೆಯನ್ನು ಬಗೆಹರಿಸಿ ಹಲವಾರು ವರ್ಷಗಳಿಂದ ವಸತಿಗಾಗಿ ಕಾಯುತ್ತಿರುವವರಿಗೆ ಶೀಘ್ರ ವಸತಿಗಳನ್ನು ಲಭ್ಯವಾಗುವ ಕಾರ್ಯ ಆಗಬೇಕಾಗಿದೆ.

   -ಸಂ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.