ವಿದ್ಯಾಕಲ್ಪಕ ಯೋಜನೆ ಶಿಬಿರ ಸಮಾರೋಪ

ವಿಶ್ವ ಕೊಂಕಣಿ ಕೇಂದ್ರದಿಂದ ವಿದ್ಯಾರ್ಥಿ ವೇತನ ಯೋಜನೆ

Team Udayavani, Jul 4, 2019, 5:14 AM IST

0307MLR5

ಮಹಾನಗರ: ವಿಶ್ವ ಕೊಂಕಣಿ ಕೇಂದ್ರದ ‘ವಿದ್ಯಾಕಲ್ಪಕ’ ವಿದ್ಯಾರ್ಥಿ ವೇತನ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆದ ಅರ್ಹ ವಿದ್ಯಾರ್ಥಿಗಳಿಗಾಗಿ ನಡೆದ ‘ಕ್ಷಿತಿಜ’ 2 ನೇ ಹಂತದ ತರಬೇತಿ ಶಿಬಿರದ ಸಮಾರೋಪ ಇತ್ತೀಚೆಗೆ ವಿಶ್ವ ಕೊಂಕಣಿ ಕೇಂದ್ರದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿದ್ದ ಕರ್ಣಾಟಕ ಬ್ಯಾಂಕನ ಮುಖ್ಯ ಆಡಳಿತ ಅಧಿಕಾರಿ ಗೋಕುಲದಾಸ್‌ ಪೈ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಜೀವನದ ಕಷ್ಟದ ದಿನಗಳನ್ನು ಮರೆಯದೆ ತಮಗೆ ಒದಗಿದ ಫಲಾನುಭವದ ಪ್ರಯೋಜನ ಪಡೆದು ಮುಂದೆ ಸಮಾಜಕ್ಕೆ ನೀಡುವ ಕಾರ್ಯ ಕ್ಷಮತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಮುಖ್ಯ ಅತಿಥಿ ಉದ್ಯಮಿ ವತಿಕಾ ಪೈ ಅವರು ತಮ್ಮ ಜೀವನದ ಅನುಭವವನ್ನು ವಿವರಿಸಿ ಎಲ್ಲರೂ ಶ್ರಮಪಟ್ಟು, ನಿಶ್ಚಿತ ಗುರಿಯನ್ನು ಸಾಧಿಸಲು ಸಾಧನೆ ಮಾಡಬೇಕು ಎಂದರು.

ಇನ್ನೋರ್ವ ಅತಿಥಿ ನಿಟ್ಟೆ ವಿದ್ಯಾ ಸಂಸ್ಥೆಯ ಡಾ| ಉದಯ ಕುಮಾರ್‌ ಶೆಣೈ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಆಂತರಿಕ ಶಕ್ತಿಯನ್ನು ತಿಳಿದು ಜೀವನದಲ್ಲಿ ಮುಂದೆ ಒಳ್ಳೆಯ ನೀತಿವಂತ ಪ್ರಜೆಗಳಾಗಬೇಕು. ಶಿಕ್ಷಣವು ನಾಲ್ಕು ಗೋಡೆಗಳ ಮಧ್ಯಕ್ಕೆ ಸೀಮಿತವಾಗದೆ ಅದನ್ನು ಇತರರಿಗೂ ನೀಡಲು ನೆರವಾಗಬೇಕು ಎಂದು ಹೇಳಿದರು.

ವಿದ್ಯಾಕಲ್ಪಕ ವಿದ್ಯಾರ್ಥಿ ವೇತನ ಯೋಜನೆಯ ಮುಖ್ಯಸ್ಥ ಹಾಗೂ ಲೆಕ್ಕ ಪರಿಶೋಧಕ ನಂದಗೋಪಾಲ ಶೆಣೈ ಪ್ರಸ್ತಾವನೆಗೈದು ಪ್ರತಿಯೊಬ್ಬ ವಿದ್ಯಾರ್ಥಿ ಇತರ ವಿದ್ಯಾರ್ಥಿಗಳಿಗೆ ತನ್ನಿಂದಾದಷ್ಟು ಸಹಾಯ ಮಾಡುವ ಗುಣ ಬೆಳೆಸಿಕೊಳ್ಳಬೇಕು ಎಂದರು.

ವಿಶ್ವ ಕೊಂಕಣಿ ಕೇಂದ್ರದ ಸ್ಥಾಪಕ ಅಧ್ಯಕ್ಷ ಬಸ್ತಿ ವಾಮನ ಶೆಣೈ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ಶಿಬಿರದ ಅನುಭವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ವಿದ್ಯಾಕಲ್ಪಕ ವಿದ್ಯಾರ್ಥಿ ವೇತನ ಯೋಜನೆಯ ಸದಸ್ಯ ಸುರೇಂದ್ರ ನಾಯಕ್‌, ವಿಶ್ವ ಕೊಂಕಣಿ ಭಾಷಾ ಸಂಸ್ಥಾನ ನಿರ್ದೇಶಕ ಗುರುದತ್ತ ಬಂಟ್ವಾಳಕಾರ, ವಿದ್ಯಾಕಲ್ಪಕ- ಕ್ಷಿತಿಜ ಶಿಬಿರದ ಉಸ್ತುವಾರಿ ವಿಶ್ವ ಕುಮಾರ ಭಟ್ ಉಪಸ್ಥಿತರಿದ್ದರು.

ಮೂರು ದಿನಗಳ ಶಿಬಿರದ ಬಗ್ಗೆ ಶಿಬಿರಾರ್ಥಿಗಳು ತಮ್ಮ ಅನುಭವಗಳನ್ನು ಹಾಗೂ ವಿವಿಧ ಚಟುವಟಿಕೆಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹೇಳಿದರು.

ಶಿಬಿರದಲ್ಲಿ ಏರ್ಪಡಿಸಿದ್ದ ವಿವಿಧ ಸರ್ಧೆಗಳ ವಿಜೇತರಿಗೆ ಬಹುಮಾನ ಹಾಗೂ ಎಲ್ಲ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಪುಸ್ತಕಗಳನ್ನು ವಿತರಿಸಲಾಯಿತು.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.