ಮೇನಾಲ: ಕುಸಿದ ಕಂದಾಯ ಇಲಾಖೆ ಕಟ್ಟಡಕ್ಕೆಬೇಕು ರಕ್ಷಣೆ


Team Udayavani, Jul 9, 2018, 10:42 AM IST

9-july-3.jpg

ಈಶ್ವರಮಂಗಲ: ಸಾರ್ವಜನಿಕರು ಹಲವು ಬಗೆಯ ತೆರಿಗೆ ಪಾವತಿಸುತ್ತಾರೆ. ತೆರಿಗೆಯ ಹಣ ಸರಕಾರದ ಕಾರ್ಯಕ್ರಮಗಳಿಗೆ ಬಳಕೆಯಾಗುತ್ತದೆ. ಸರಕಾರ ನಿರ್ಮಿಸಿದ ಕಟ್ಟಡ ಸಾರ್ವಜನಿಕರ ಸೊತ್ತು. ಅದಕ್ಕೆ ಹಾನಿ ಮಾಡಿದರೆ ಆಯಾ ಇಲಾಖೆಯೇ ಕ್ರಮ ಕೈಗೊಳ್ಳುತ್ತದೆ. ಆದರೆ, ಪುತ್ತೂರು ತಾಲೂಕಿನ ನೆಟ್ಟಣಿಗೆಮುಟ್ನೂರು ಗ್ರಾಮದ ಮೇನಾಲ ಎಂಬಲ್ಲಿ ಕಂದಾಯ ಇಲಾಖೆಯ ಕಟ್ಟಡವು ಸಮರ್ಪಕವಾದ ನಿರ್ವಹಣೆ ಇಲ್ಲದೆ ಕುಸಿದು ಬಿದ್ದರೂ ಕೇಳುವವರಿಲ್ಲ!

ಮೇನಾಲ ಎಂಬಲ್ಲಿ ರಸ್ತೆಯ ಬದಿಯಲ್ಲಿ ಹಲವು ವರ್ಷಗಳ ಹಿಂದೆ ಅಕ್ಕಿಯ ಕಳ್ಳಸಾಗಣೆ ತಡೆಯಲು ಕಂದಾಯ ಇಲಾಖೆಯಿಂದ ಚೆಕ್‌ ಪೋಸ್ಟ್‌ ನಿರ್ಮಿಸಲಾಗಿತ್ತು. ಚೆಕ್‌ ಪೋಸ್ಟ್‌ನಲ್ಲಿ ತಪಾಸಣೆ ಅಧಿಕಾರಿಗಳು ಇರುತ್ತಿದ್ದರು. ವಾಸ್ತವ್ಯ ಹೂಡಲು ಒಂದು ಕೊಠಡಿಯೂ ಇತ್ತು. ಆಮೇಲೆ ಈ ವ್ಯವಸ್ಥೆ ಮುಂದುವರಿಯದ ಕಾರಣ, ಈ ಚೆಕ್‌ಪೋಸ್ಟ್‌ ಬಳಿಕ ಪ್ರಯಾಣಿಕರ ತಂಗುದಾಣವಾಗಿ ಪರಿವರ್ತನೆಯಾಯಿತು. ಹಳೆಯ ಕಟ್ಟಡವಾಗಿರುವುದರಿಂದ ಛಾವಣಿ ಕುಸಿದು ಬಿದ್ದಿದೆ. ಹಂಚುಗಳು ಪುಡಿಯಾಗಿ ನೆಲ ಕಂಡಿವೆ. ಕೊಠಡಿಯ ಬಾಗಿಲು ಮುರಿದು ಹೋಗಿದೆ. ಕೊಠಡಿಯೊಳಗೆ ಮಳೆ ನೀರು ತುಂಬಿದೆ. ಕಟ್ಟಡದ ಒಂದು ಭಾಗದಲ್ಲಿ ಮಳೆ ನೀರು ಹರಿಯಲು ಸೂಕ್ತ ವ್ಯವಸ್ಥೆಯಿಲ್ಲದೆ ನೀರು ಅಲ್ಲಿಯೇ ಶೇಖರಣೆಯಾಗುತ್ತಿದೆ. ಕಸ, ಕಡ್ಡಿಗಳು ತುಂಬಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಹುಟ್ಟಿಸಿದೆ. ಕಟ್ಟಡ ಹಾಗೂ ಛಾವಣಿ ಬೀಳುವ ಹಂತದಲ್ಲಿದೆ. ಕಟ್ಟಡದ ಸುತ್ತ ಪೊದೆಗಳೂ ಬೆಳೆದುನಿಂತಿವೆ.

ರಸ್ತೆ ಬದಿ ಕಾಯಬೇಕು
ಕಟ್ಟಡದಲ್ಲಿ ಅಕ್ಕಿ ಸಾಗಾಟ ತಪಾಸಣೆ ಬಂದ್‌ ಆದ ಮೇಲೆ ಬಸ್ಸಿಗಾಗಿ ಕಾಯುವ ಅನೇಕರು ಕುಳಿತುಕೊಳ್ಳಲು ಆರಂಭಿಸಿದರು. ಕ್ರಮೇಣ ಇದು ಪ್ರಯಾಣಿಕರ ತಂಗುದಾಣವಾಗಿ ಪರಿವರ್ತನೆಯಾಯಿತು. ಸೂಕ್ತ ನಿರ್ವಹಣೆ ಇಲ್ಲದೆ ಕಟ್ಟಡದ ಛಾವಣಿ ಕುಸಿದು ಬಿದ್ದಿರುವುದರಿಂದ ಪ್ರಯಾಣಿಕರು ಈಗ ರಸ್ತೆ ಬದಿಯಲ್ಲೇ ಬಸ್ಸಿಗಾಗಿ ಕಾಯುತ್ತ ನಿಲ್ಲಬೇಕು ಅಥವಾ ಅಂಗಡಿ ಮಳಿಗೆ ಸಮೀಪ ನಿಲ್ಲುವ ಪರಿಸ್ಥಿತಿ ಇದೆ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಕೂಡಲೇ ಸಂಬಂಧಪಟ್ಟ ಇಲಾಖೆ ಕಟ್ಟಡವನ್ನು ದುರಸ್ತಿಗೊಳಿಸಬೇಕು ಅಥವಾ ಹೊಸ ಕಟ್ಟಡವನ್ನು ನಿರ್ಮಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಮೇನಾಲದ ನಿವಾಸಿ ವೀರಪ್ಪ ನಾಯ್ಕ ಆಗ್ರಹಿಸಿದ್ದಾರೆ.

ಕ್ರಮ ಕೈಗೊಳ್ಳುತ್ತೇವೆ
ನನ್ನ ಗಮನಕ್ಕೆ ಬಂದಿದೆ. ಪರಿಶೀಲನೆ ನಡೆಸಲಾಗಿದೆ. ವರದಿಯನ್ನು ಮೇಲಧಿಕಾರಿಗಳಿಗೆ ಕಳುಹಿಸುತ್ತೇನೆ. ಮುಂದಿನ ಕ್ರಮ ಕೈಗೊಳ್ಳುತ್ತಾರೆ.
 – ರಾಧಾಕೃಷ್ಣ,
ನೆಟ್ಟಣಿಗೆಮುಟ್ನೂರು ಗ್ರಾಮ ಲೆಕ್ಕಾಧಿಕಾರಿ

 ಮಾಧವ ನಾಯಕ್‌.ಕೆ 

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.