ಗುಂಡಡ್ಕ ಸೇತುವೆಗೆ ಎದುರಾಗಿದೆ ಗಂಡಾಂತರ?

ಪಂಚ ಗ್ರಾಮಗಳ ಸಂಪರ್ಕ ಸೇತು; ದಿಮ್ಮಿ ಅಪ್ಪಳಿಸಿ ಸೇತುವೆಗೆ ಹಾನಿ

Team Udayavani, Dec 20, 2019, 5:17 AM IST

1912SUB4-1

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ- ಐನೆಕಿದು-ಹರಿಹರ ಸಂಪರ್ಕದ ಜಿ.ಪಂ. ರಸ್ತೆಯಲ್ಲಿ ಬರುವ ಗುಂಡಡ್ಕ ಸೇತುವೆ ಶಿಥಲಾವಸ್ಥೆಯಿಂದ ಕೂಡಿದೆ. ದಶಕಗಳ ಕಾಲದ ಸೇತುವೆ ಕ್ರಮೇಣ ಶಿಥಿಲ ಸ್ಥಿತಿಗೆ ತಲುಪಿದೆ. ಶಿಥಿಲ ಸೇತುವೆ ಕುಸಿದಲ್ಲಿ ಈ ಭಾಗದ ಹಲವು ಜನವಸತಿ ಪ್ರದೇಶಗಳಿಗೆ ಸಂಪರ್ಕ ಕಡಿತ ಭೀತಿ ಎದುರಾಗುವ ಆತಂಕ ಎದುರಾಗಿದೆ.

ಸುಬ್ರಹ್ಮಣ್ಯ-ಹರಿಹರ ಸಂಪರ್ಕ ರಸ್ತೆಯ ಐನೆಕಿದು ಗ್ರಾಮದ ಗುಂಡಡ್ಕ ಎಂಬಲ್ಲಿ ಹರಿಯುತ್ತಿರುವ ಹೊಳೆಗೆ ಬ್ರಿಟೀಷರ ಕಾಲದಲ್ಲಿ ಸೇತುವೆ ನಿರ್ಮಾಣವಾಗಿತ್ತು. ಮಳೆಗಾಲದಲ್ಲಿ ಈ ಹೊಳೆ ತುಂಬಿ ಹರಿಯುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಈ ಭಾಗದಲ್ಲಿ ಉಂಟಾದ ಪ್ರಾಕೃತಿಕ ವಿಕೋಪಗಳ ಸಂದರ್ಭ ಹೊಳೆಯಲ್ಲಿ ಬ್ರಹತ್‌ ಗಾತ್ರದ ಮರದ ದಿಮ್ಮಿಗಳು ತೇಲಿ ಬಂದಿವೆ. ಮರದ ದಿಮ್ಮಿಗಳು ಸೇತುವೆ ಬುಡಕ್ಕೆ ಅಪ್ಪಳಿಸಿ ಸೇತುವೆ ಶಿಥಿಲಗೊಂಡಿದೆ. ಸೇತುವೆ ಪಿಲ್ಲರುಗಳಿಗೆ ಹಾನಿಯಾಗಿವೆ. ಸೇತುವೆಯ ಕೆಳಭಾಗದಲ್ಲಿ ಮರದ ದಿಮ್ಮಿಗಳು ಸಿಲುಕಿಕೊಂಡಿದ್ದು, ಅವುಗಳ ತೆರವು ಕಾರ್ಯ ಕೂಡ ನಡೆದಿಲ್ಲ. ಇದು ಸೇತುವೆಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ಮಳೆಗಾಲದಲ್ಲಿ ಸೇತುವೆ ಮತ್ತೆ ಮುಳುಗಡೆಗೊಳ್ಳಲು ಇದು ಕಾರಣವಾಗುತ್ತಿದೆ.

ಸಂಪರ್ಕ ಕಡಿತದ ಭೀತಿ
ಸುಬ್ರಹ್ಮಣ್ಯದಿಂದ ಐನೆಕಿದು, ಹರಿಹರ, ಬಾಳುಗೋಡು, ಕೊಲ್ಲಮೊಗ್ರ, ಕಲ್ಮಕಾರು, ಕಡಮಕಲ್ಲು ಎಸ್ಟೇಟ್‌ ಈ ಎಲ್ಲ ಗ್ರಾಮಗಳನ್ನು ಸಂಪರ್ಕಿಸುವ ಈ ಸೇತುವೆ ಈ ಭಾಗದ ಜನರಿಗೆ ಆಧಾರವಾಗಿದೆ. ಈ ಭಾಗದಲ್ಲಿ ಕೃಷಿಕರೇ ಹೆಚ್ಚಿದ್ದಾರೆ. ತಾವು ಬೆಳೆದ ಫ‌ಸಲನ್ನು ಮಾರಾಟ ಹಾಗೂ ಖರೀದಿಸಲು ನಗರಗಳಿಗೆ ತೆರಳಲು ಬಳಸಲ್ಪಡುವ ಪ್ರಮುಖ ರಸ್ತೆ ಇದಾಗಿದೆ. ಈ ರಸ್ತೆ ಮೂಲಕ ಸುಬ್ರಹ್ಮಣ್ಯದಿಂದ ಕಡಮಕಲ್ಲು ಗಾಳಿ ಬೀಡು ಮೂಲಕ ಮಡಿಕೇರಿಗೂ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಶಿಥಿಲ ಸೇತುವೆ ಕುಸಿದಲ್ಲಿ ಹಲವು ಭಾಗಗಳ ಸಂಪರ್ಕ ಕಡಿತಗೊಳ್ಳುವ ಭೀತಿಯನ್ನು ಸ್ಥಳೀಯರು ಹೊರಹಾಕುತ್ತಿದ್ದಾರೆ.

ಕಳೆದ ಮಳೆಗಾಲದಲ್ಲಿ ಸುಬ್ರಹ್ಮಣ್ಯ- ಜಾಲೂÕರು-ಮೈಸೂರು ರಾಜ್ಯ ಹೆದ್ದಾರಿಯ ಸುಬ್ರಹ್ಮಣ್ಯ-ನಡುಗಲ್ಲು ಮಧ್ಯೆ ಪ್ರಾಕೃತಿಕ ವಿಕೋಪಗಳಿಂದ ಹೆದ್ದಾರಿ ಸಂಪರ್ಕ ಕಡಿತಗೊಂಡಾಗ ಪರ್ಯಾಯವಾಗಿ ಈ ಸೇತುವೆ ಮೂಲಕವೇ ಸಾರಿಗೆ ಬಸ್‌ ಸಹಿತ ಇತರೆ ವಾಹನಗಳು ಸಂಚರಿಸಿದ್ದವು. ಇಂತಹ ಸಂದರ್ಭ ಪರ್ಯಾಯ ಬಳಕೆಗೆ ಲಭ್ಯವಿರುವ ರಸ್ತೆಯಲ್ಲಿ ಸಂಚಾರಕ್ಕೂ ಸಂಚಕಾರ ಎದುರಾಗಿದೆ.

ದಿಮ್ಮಿ ತೆರವುಗೊಳಿಸಬೇಕು
ಬ್ರಿಟೀಷರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಈ ಸೇತುವೆಯು ಮೇಲ್ನೋಟಕ್ಕೆ ಸುಭದ್ರವಿದ್ದಂತೆ ಕಂಡರೂ, ಕೆಳಭಾಗದಲ್ಲಿ ನೀರಿನ ಸೆಳೆತ, ಮರದ ದಿಮ್ಮಿಗಳ ಹೊಡೆತಗಳಿಗೆ ಪಿಲ್ಲರ್‌ಗಳಿಗೆ ಹಾನಿಯುಂಟಾಗಿರುವುದು ಯಾವುದೇ ಕ್ಷಣದಲ್ಲಿ ಕುಸಿತ ಕಾಣುವ ಭೀತಿ ಎದುರಿಸುತ್ತಿದೆ. ಸೇತುವೆ ಬುಡದಲ್ಲಿ ಸಂಗ್ರಹಗೊಂಡ ಮರಗಳ ದಿಮ್ಮಿಗಳ ತೆರವು ಅವಶ್ಯಕ. ಇಲ್ಲವಾದಲ್ಲಿ ಮಳೆಗಾದಲ್ಲಿ ಕೃತಕ ನೆರೆ ಉಂಟಾಗಲಿದೆ. ಅಕ್ಕಪಕ್ಕದ ಜನವಸತಿ ಪ್ರದೇಶ ಹಾಗೂ ಕೃಷಿಭೂಮಿ ಮುಳುಗಡೆಯಾಗಬಹುದು. ಕಳೆದ ಮಳೆಗಾಲದಲ್ಲಿ 2 ಬಾರಿ ಸೇತುವೆ ಮುಳುಗಡೆಗೊಂಡಿತ್ತು. ಮುಂಜಾಗ್ರತೆ ವಹಿಸದೆ ಇದ್ದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುತ್ತಾರೆ ಸ್ಥಳೀಯರು.

ಪರಿಶೀಲಿಸಲು ಕ್ರಮ
ಗುಂಡಡ್ಕ ಸೇತುವೆಗೆ ಯಾವುದೇ ರೀತಿಯ ದೊಡ್ಡ ಮಟ್ಟದ ಹಾನಿ ಉಂಟಾಗಿಲ್ಲ. ಅದರ ಪಿಲ್ಲರ್‌ಗಳು ಬಲಿಷ್ಠವಾಗಿದೆ. ಮುಂದಿನ ದಿನಗಳಲ್ಲಿ ಆ ಭಾಗಕ್ಕೆ ತೆರಳಿ ಸೇತುವೆಗೆ ಹಾನಿ ಉಂಟಾಗಿದೆಯೇ ಎಂದು ಪರಿಶೀಲಿಸಿ, ಸರಿಪಡಿಸುವ ಬಗ್ಗೆ ಮುಂದೆ ಕ್ರಮ ಕೈಗೊಳ್ಳಲಾಗುವುದು.
– ಹನುಮಂತರಾಯಪ್ಪ
ಜಿ.ಪಂ. ಎಂಜಿನಿಯರ್‌, ಸುಳ್ಯ

-ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.