ವಾಮಂಜೂರು-ಪಿಲಿಕುಳ ಚತುಷ್ಪಥ ರಸ್ತೆಗೆ ಶಿಲಾನ್ಯಾಸ
Team Udayavani, Dec 22, 2017, 10:37 AM IST
ಪಿಲಿಕುಳ: ಕರಾವಳಿ ಅಭಿ ವೃದ್ಧಿ ಪ್ರಾಧಿಕಾರದಿಂದ ಮಂಗಳೂರು ತಾಲೂಕಿನ ವಾಮಂಜೂರು ಜಂಕ್ಷನ್ನಿಂದ ಪಿಲಿಕುಳ ನಿಸರ್ಗಧಾಮದ ಮುಖ್ಯದ್ವಾರದವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಂ.ಆರ್.ಸೀತಾರಾಂ ಅವರು ಗುರುವಾರ ಶಿಲಾನ್ಯಾಸ ನೆರವೇರಿಸಿದರು.
ಕರಾವಳಿಯ ಪ್ರವಾಸೋದ್ಯಮಕ್ಕೆ ಪಿಲಿಕುಳ ನಿಸರ್ಗಧಾಮ ಬಹುದೊಡ್ಡ ಕೊಡುಗೆಯಾಗಿ ಗುರುತಿಸಿಕೊಂಡಿದೆ. ರಾಜ್ಯದ ಮೂಲೆ ಮೂಲೆಯಿಂದ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಇಲ್ಲಿನ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲು ವಿವಿಧ ರೀತಿಯಲ್ಲಿ ಉದ್ದೇಶಿಸ ಲಾಗಿದೆ. ಜತೆಗೆ ಪಿಲಿಕುಳದಲ್ಲಿ ದೇಶದ ಮೊದಲ ತಾರಾಲಯ ನಿರ್ಮಾಣವೂ ಆಗಲಿದ್ದು, ಇದು ಪ್ರವಾಸೋದ್ಯಮ ಅಭಿವೃದ್ಧಿಗೆ ಇನ್ನಷ್ಟು ಉತ್ತೇಜನ ದೊರಕಿಸಿಕೊಡಲಿದೆ ಎಂದು ಸಚಿವರು ಹೇಳಿದರು.
ಶಾಸಕ ಮೊದಿನ್ ಬಾವಾ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಶಾಸಕ ಜೆ.ಆರ್.ಲೋಬೋ, ಮೇಯರ್ ಕವಿತಾ ಸನಿಲ್, ಪಾಲಿಕೆ ಮುಖ್ಯ ಸಚೇತಕ ಎಂ.ಶಶಿಧರ ಹೆಗ್ಡೆ, ಕೆಎಸ್ಆರ್ಟಿಸಿ ನಿರ್ದೇಶಕ ಟಿ.ಕೆ. ಸುಧೀರ್ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ