ಸರಕಾರದ ಮೀಸಲಾತಿ ಪಟ್ಟಿ ಸಿಂಧುಗೊಳಿಸಿ ನ್ಯಾಯಾಲಯ ಆದೇಶ
Team Udayavani, Jun 1, 2019, 6:00 AM IST
ಮಹಾನಗರ: ಇಲ್ಲಿನ ಮಹಾ ನಗರ ಪಾಲಿಕೆ ವಾರ್ಡ್ ಮೀಸಲಾತಿ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ರಾಜ್ಯ ಹೈಕೋರ್ಟ್ ಶುಕ್ರವಾರ ವಜಾ ಮಾಡಿದೆ. ಈ ಮೂಲಕ ಪಾಲಿಕೆಗೆ ಚುನಾವಣೆ ನಡೆಸಲು ಇದ್ದ ಅಡಚಣೆ ಸದ್ಯಕ್ಕೆ ನಿವಾರಣೆಯಾಗಿದೆ.
ರಾಜ್ಯ ನಗರಾಭಿವೃದ್ಧಿ ಇಲಾಖೆ ಸಲ್ಲಿಸಿದ್ದ ಪಾಲಿಕೆಯ ಅಂತಿಮ ಮೀಸಲು ಪಟ್ಟಿಯ ವಿರುದ್ಧ ಕೆಲವರು ರಾಜ್ಯ ಹೈಕೋರ್ಟ್ನಲ್ಲಿ ರಿಟ್ ಸಲ್ಲಿಸಿದ್ದರು. ವಿಚಾ ರಣೆ ನಡೆಸಿದ್ದ ಹೈಕೋರ್ಟ್ನ ಏಕಸದಸ್ಯ ಪೀಠ ಹೊಸ ಮೀಸಲು ಪಟ್ಟಿ ಸಲ್ಲಿಸುವಂತೆ ಸರಕಾರಕ್ಕೆ ಸೂಚಿಸಿತ್ತು. ಆದರೆ ಏಕಸದಸ್ಯ ಪೀಠದ ತೀರ್ಪಿನ ವಿರುದ್ಧ ರಾಜ್ಯ ಸರಕಾರ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಹೈಕೋರ್ಟ್ ದ್ವಿಸದಸ್ಯ ಪೀಠದಿಂದ ವಿಚಾರಣೆ ನಡೆದು ಈಗ ಸರಕಾರದ ಮೀಸಲಾತಿ ಸರಿಯಿದೆ ಎಂದು ನ್ಯಾಯಾಲಯ ತಿಳಿಸಿದೆ.
ಪಾಲಿಕೆಗೆ ಸಂಬಂಧಿಸಿದಂತೆ ಸರಕಾರ ಹೊರಡಿಸಿದ ಮೀಸಲು ಪಟ್ಟಿಯಲ್ಲಿ ಆವರ್ತನ ಪದ್ಧತಿ (ರೊಟೇಶನ್ ಪದ್ಧತಿ) ಯನ್ನು ಸರಿಯಾಗಿ ಅನುಸರಿಸಿಲ್ಲ ಎಂದು ಪ್ರಶ್ನಿಸಿ ರವೀಂದ್ರ ನಾಯಕ್ ಕುಡುಪು ಸಹಿತ ಹಲವು ಮಂದಿ ರಾಜ್ಯ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಮೀಸಲಾತಿಯ ವಿರುದ್ಧದ ರಿಟ್ ಅರ್ಜಿ ವಜಾಗೊಂಡರೂ ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಚುನಾವಣೆ ನಡೆಯುವ ಸಾಧ್ಯತೆಗಳು ಕಡಿಮೆ. ಇದೇ ವೇಳೆ ಹೈಕೋರ್ಟ್ನ ತೀರ್ಪು ಪ್ರಶ್ನಿಸಿ ಅರ್ಜಿದಾರರು ಅಥವಾ ಸಾರ್ವಜನಿಕರು ಸುಪ್ರಿಂ ಕೊರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆಗಳನ್ನೂ ತಳ್ಳಿಹಾಕುವಂತಿಲ್ಲ.
ಮತ್ತೆ ಗರಿಗೆದರಲಿದೆ ರಾಜಕೀಯ ಚಟುವಟಿಕೆ
ಹೈಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಪಾಲಿಕೆ ಚುನಾವಣೆಗೆ ಸಂಬಂಧಪಟ್ಟಂತೆ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಲಿದೆ. ಲೋಕಸಭಾ ಚುನಾವಣಾ ಫಲಿತಾಂಶದ ಮೂಡ್ನಿಂದ ಹೊರಬಂದ ಮಾಜಿ ಕಾರ್ಪೊರೇಟರ್ಗಳು ಇದೀಗ ತಮ್ಮ ವಾರ್ಡ್ ಮೀಸಲಾತಿಯ ಆಧಾರದಲ್ಲಿ ಸ್ಪರ್ಧೆಯ ನಿರೀಕ್ಷೆಯಲ್ಲಿದ್ದಾರೆ. ಯಾವುದೇ ಕ್ಷಣದಲ್ಲಿ ಚುನಾವಣೆ ಎದುರಾದರೂ ಎದುರಿಸಲು ಕಾಂಗ್ರೆಸ್ ಮತ್ತು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ.
ಮಹಾನಗರ ಪಾಲಿಕೆಯ ಪರಿಷತ್ನ ಈ ಅವಧಿಯ ಆಡಳಿತ ಮಾ. 7ರಂದು ಕೊನೆಗೊಂಡಿದ್ದು, ನೂತನ ಅವಧಿಗೆ ನಿಗದಿಪಡಿಸಿರುವ ಮೀಸಲಾತಿಯನ್ನು ಪ್ರಶ್ನಿಸಿ ಕೆಲವು ಮಂದಿ ನ್ಯಾಯಾಲಯದ ಮೇಟ್ಟಲೇರಿದ್ದು, ಈ ಮೀಸಲಾತಿ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿ ಸರಕಾರ ಮೇಲ್ಮನವಿ ಸಲ್ಲಿಸಿದ ಪರಿಣಾಮ ಈ ಬಾರಿಯ ಚುನಾವಣೆ ಮುಂದಕ್ಕೆ ಹೋಗಿತ್ತು. ಪ್ರಸ್ತುತ ಪಾಲಿಕೆಗೆ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ