ಸೃಜನಶೀಲ ಮನಸ್ಸು ಸಾಹಿತ್ಯದ ಜೀವಾಳ


Team Udayavani, Mar 6, 2018, 3:15 PM IST

srajanasheela.jpg

ಸುಬ್ರಹ್ಮಣ್ಯ: ಸಾಹಿತ್ಯಿಕ ಬರವಣಿಗೆಗೆ ಮುಖ್ಯವಾಗಿ ಬೇಕಾದದ್ದು ಸೃಜನಶೀಲ ಮನಸ್ಸು.ಅದುವೇ ಸಾಹಿತ್ಯದ ಜೀವಾಳ ಎಂದು ದಕ್ಷಿಣ ಕನ್ನಡ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ, ಕಾದಂಬರಿಗಾರ್ತಿ ಎ.ಪಿ.ಮಾಲತಿ ಅಭಿಪ್ರಾಯಪಟ್ಟರು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಆರಂಭವಾದ ಮೂರು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಪ್ರಾಕೃತಿಕ ಚಿತ್ರಣ ಸಂಪೂರ್ಣ ಬದಲಾಗಿದೆ. ಹಸಿರು ಪರಿಸರ,ಗದ್ದೆ -ತೋಟ ಇತ್ಯಾದಿಗಳು ನಶಿಸಿ ಬಹುರಾಷ್ಟ್ರೀಯ ಕಂಪೆನಿಗಳು ಇಲ್ಲಿ ನೆಲೆಯೂರಿವೆ. ನೇತ್ರಾವತಿ ನದಿ ತಿರುವು ಸೇರಿದಂತೆ ಪ್ರಕೃತಿ ವಿರೋಧಿ ಧೋರಣೆಗಳಿಂದ ಕೃಷಿ ಸಂಸ್ಕೃತಿ, ನಂಬಿಕೆಗಳು ನಶಿಸುತ್ತಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಭಾಷಿಕ ಆಕ್ರಮಣ ಸಹಿಸಲಸಾಧ್ಯ: ಎಸ್‌.ಜಿ. ಸಿದ್ದರಾಮಯ್ಯ
ಸಮ್ಮೇಳನವನ್ನು ಉದ್ಘಾಟಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಜಿ. ಸಿದ್ದರಾಮಯ್ಯ ಮಾತ ನಾಡಿ, ನಾವು ಎಲ್ಲ ಭಾಷೆಗಳನ್ನೂ ಗೌರ ವಿಸುತ್ತೇವೆ. ಆದರೆ ಇನ್ನೊಂದು ಭಾಷೆ ನಮ್ಮ ಭಾಷೆಯನ್ನು ತುಳಿಯುವ ಮಟ್ಟಿಗೆ ಆಕ್ರಮಣ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ.ಯಾವುದೇ ಅನ್ಯ ಭಾಷೆಯಾಗಲಿ;ನೆಲದ ಭಾಷೆಯ ಮೇಲೆ ಮಾಡುವ ಆಕ್ರಮಣವನ್ನು ವಿರೋಧಿಸಲೇ ಬೇಕು ಎಂದರು.

ಅನ್ಯ ನೆಲದಿಂದ ಕನ್ನಡ ನೆಲಕ್ಕೆ ಬಂದು ಅಧಿಕಾರಿಗಳಾಗಿ ಕೆಲಸ ನಿರ್ವ ಹಿಸುತ್ತಿರುವವರು, ಚಾಪೆಯ ಕೆಳಗೆ ತೂರುವ, ರಂಗೋಲಿಯ ಕೆಳಗೆ ನುಸುಳುವ ಪ್ರಯತ್ನ ಮಾಡುತ್ತಾರೆ. ನಾವು ವಲಸೆಯನ್ನು ಸ್ವಾಗತಿಸುತ್ತೇವೆ, ಆದರೆ ನಮ್ಮ ಮನೆಗೆ ಬಂದು ನಮ್ಮನ್ನೇ ಹೊರದಬ್ಬಲು ಯತ್ನಿಸಿದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದರು.

ವಿಧಾನ ಪರಿಷತ್‌ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ವಿವಿಧ ಕೃತಿಗಳನ್ನು ಬಿಡುಗಡೆಗೊಳಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಾಸಕ ಎಸ್‌.ಅಂಗಾರ ಉದ್ಘಾಟಿಸಿದರು. ನಿಕಟ ಪೂರ್ವ ಸಮ್ಮೇನಾಧ್ಯಕ್ಷ ಪ್ರೊ| ಕೆ. ಚಿನ್ನಪ್ಪ ಗೌಡ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ತಾ.ಪಂ.ಸದಸ್ಯ ಅಶೋಕ್‌ ನೆಕ್ರಾಜೆ, ಸುಬ್ರಹ್ಮಣ್ಯ ಗ್ರಾ.ಪಂ.ಅಧ್ಯಕ್ಷೆ ಸುಶೀಲಾ ಹೊಸ ಮನೆ, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು,ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ, ಕುವೆಂಪು ವಿ.ವಿ. ನಿವೃತ್ತ ಕುಲಪತಿ ಕೆ.ಚಿದಾನಂದ ಗೌಡ, ಕರ್ನಾಟಕ ಗೇರು ನಿಗಮದ ಅಧ್ಯಕ್ಷ ಬಿ.ಎಚ್‌.ಖಾದರ್‌,ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಂ,ವಾರ್ತಾಧಿಕಾರಿ ಖಾದರ್‌ ಶಾ ಉಪಸ್ಥಿತರಿದ್ದರು.

ಕೆ.ಎಸ್‌.ಎಸ್‌. ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಗೀತೆ, ನಾಡ ಗೀತೆ, ರೈತಗೀತೆ ಹಾಡಿ ದರು. ಜಿಲ್ಲಾ
ಕ.ಸಾ.ಪ. ಅಧ್ಯಕ್ಷ ಎಸ್‌. ಪ್ರದೀಪ್‌ ಕುಮಾರ್‌ ಕಲ್ಕೂರ ಪ್ರಸ್ತಾ ವನೆಗೈದರು. ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಸ್ವಾಗತಿಸಿದರು. ಸುಬ್ರಹ್ಮಣ್ಯ ಕೆ.ಎಸ್‌.ಎಸ್‌.ಕಾಲೇಜಿನ ಪ್ರಾಂಶುಪಾಲ ಪ್ರೊ| ರಂಗಯ್ಯ ಶೆಟ್ಟಿಗಾರ್‌ ಕೆ.ವಂದಿಸಿದರು. ದುರ್ಗಾಕುಮಾರ್‌ ನಾಯರ್‌ಕೆರೆ, ಉದಯಕುಮಾರ್‌ ಕೆ.ನಿರೂಪಿಸಿದರು.

ಭಾವಗಳು ಅಕ್ಷರಗಳಾದಾಗ ಸೃಜನಶೀಲ ಕೃತಿ
ಏನು ಬರೆಯಬೇಕು ಎಂಬ ಸ್ಪಷ್ಟತೆ ಇದ್ದಾಗ ಬರವಣಿಗೆ ಸುಲಭವಾಗುತ್ತದೆ. ಸೃಜನಶೀಲತೆಯಿಲ್ಲದೆ ಭಾವ ಅರಳುವುದಿಲ್ಲ, ಭಾಷೆ ಕಾಯಿಗಟ್ಟುವುದಿಲ್ಲ, ಸಾಹಿತ್ಯದ ಚೌಕಟ್ಟು ತುಂಬುವುದಿಲ್ಲ. ನಮ್ಮೊಳಗಿನ ಮೌನವು ಧ್ವನಿಯಾಗುವ, ಧ್ವನಿಯು ಭಾವವಾಗುವ, ಭಾವವು ಅಕ್ಷರಗಳಾಗುವ ಪ್ರಕ್ರಿಯೆಯೇ ಸೃಜನಶೀಲ ಕೃತಿಯ ಸಾಕ್ಷಾತ್ಕಾರ.
– ಸಮ್ಮೇಳನಾಧ್ಯಕ್ಷೆ ಕಾದಂಬರಿ, ಕತೆಗಾರ್ತಿ ಎ.ಪಿ. ಮಾಲತಿ ಬಣ್ಣನೆ

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.