ಮರ್ಕಂಜ: ಕೊಟ್ಟಿಗೆ ಕುಸಿದು ವೃದ್ಧ ಸಾವು
Team Udayavani, Aug 29, 2017, 8:15 AM IST
ಸುಳ್ಯ: ಸುಳ್ಯ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಸೋಮವಾರ ಕೊಟ್ಟಿಗೆ ಕುಸಿದು ವೃದ್ಧರೋರ್ವರು ಮೃತಪಟ್ಟಿದ್ದಾರೆ. ಮರ್ಕಂಜ ಗ್ರಾಮದ ಗೋಳಿಯಡ್ಕ ಶಾಲೆ ಬಳಿಯ ಕೊರತ್ತಿಕಜೆ ನಿವಾಸಿ ಕಬ್ಬು (75) ಅವರು ಮೃತಪಟ್ಟವರು.
ಸೋಮವಾರ ಅಪರಾಹ್ನ 3 ಗಂಟೆಯ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಕಬ್ಬು ಅವರು ಮನೆಯಿಂದ ಕೊಟ್ಟಿಗೆಗೆ ತೆರಳುತ್ತಿದ್ದಂತೆ ಏಕಾಏಕಿ ಕಂಬಗಳು ಮುರಿದು ಕೊಟ್ಟಿಗೆ ಪೂರ್ತಿ ಧರಾಶಾಯಿಯಾಯಿತು. ಕಬ್ಬು ಅವರು ಅದರಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟರು.
ಘಟನಾ ಸ್ಥಳಕ್ಕೆ ತಹಶೀಲ್ದಾರ್ ಗಣೇಶ್, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ಹಾಗೂ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ಮನೆ ಕುಸಿತ
ಕನಕಮಜಲು ಗ್ರಾಮದ ಮಳಿ ಕಾಲನಿ ಸಮೀಪದ ಚಂದ್ರಶೇಖರ ಅವರ ಮನೆ ಕುಸಿದು ನೆಲಸಮವಾಗಿದೆ. ಈ ವೇಳೆ ಮನೆ ಮಂದಿ ಇಲ್ಲದಿದ್ದರಿಂದ ಪ್ರಾಣಾಪಾಯ ಸಂಭವಿಸಿಲ್ಲ.
ಸೇತುವೆ ಮುಳುಗಡೆ
ಭಾರೀ ಮಳೆಯ ಪರಿಣಾಮದಿಂದ ಸುಳ್ಯದ ಬೆಟ್ಟಂಪಾಡಿ ಸೇತುವೆ ಮುಳುಗಡೆಯಾಗಿ ಸಂಚಾರ ಅಸ್ತವ್ಯಸ್ತ ಗೊಂಡಿತು. ಹೆ¨ªಾರಿಯ ರಸ್ತೆ ಗಳಲ್ಲಿ ಮಳೆ ನೀರು ನಿಂತು ವಾಹನ ಸಂಚಾರಕ್ಕೂ ಅಡೆ ತಡೆ ಯುಂಟಾ ಯಿತು. ಸುಳ್ಯದ ಬೆಟ್ಟಂಪಾಡಿ ಕಾಲನಿಗೆ ಹೋಗುವ ಸೇತುವೆ ಕೂಡ ಮುಳುಗಡೆಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್