ಪೊಳಲಿಯ ವಿನ್ಯಾಸ ನಿಜಕ್ಕೂ ಅದ್ಭುತ: ಡಾ.ಹೆಗ್ಗಡೆ


Team Udayavani, Mar 10, 2019, 12:30 AM IST

0903malalim21.jpg

ಪೊಳಲಿ: ಲೋಹ ಮರ ಶಿಲೆಗಳ ಸುಂದರ ಕೆತ್ತನೆಗಳಿಂದ ನವೀಕರಣಗೊಂಡಿರುವ ಪೊಳಲಿ ದೇವಸ್ಥಾನದ ವಿನ್ಯಾಸವನ್ನು ನೋಡಿ ನಿಜಕ್ಕೂ ಬೆರಗುಗೊಂಡಿದ್ದೇನೆ. ಇದಕ್ಕೆ ಕಾರಣೀಭೂತರಾದ ಶಿಲ್ಪಿಗಳನ್ನು, ಕಾರ್ಮಿಕರನ್ನು, ಸ್ವಯಂಸೇವಕರನ್ನು, ದಾನಿಗಳನ್ನು ಅಭಿನಂದಿಸುತ್ತೇನೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅವರು ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಶನಿವಾರ ನಡೆದ ಧಾರ್ಮಿಕ ಸಭೆಯ ನ್ನುದ್ದೇಶಿಸಿ ಮಾತನಾಡಿದರು.

ಹಿಂದಿನ ಕಾಲದಲ್ಲಾಗಿದ್ದರೆ ಇಷ್ಟು ಸುಂದರವಾಗಿ ವಿನ್ಯಾಸಗೊಳಿಸಲು 20ರಿಂದ 30 ವರ್ಷಗಳೇ ಬೇಕಿತ್ತು. ಆದರೆ ಯಾಂತ್ರೀಕರಣದಿಂದಾಗಿ ಇಷ್ಟು ವರ್ಷಗಳಲ್ಲಿ ಆಗಬೇಕಾದ ಕೆಲಸವು ಕೇವಲ ಎರಡು ವರ್ಷಗಳಲ್ಲಿ ಪೂರ್ಣಗೊಂಡಿದೆ ಎಂದರು.

ಕಳೆದ 150 ವರ್ಷಗಳ ಮುಂಚೆ ಬಿದ್ದು ಹೋದ ಅನೇಕ ದೇವಸ್ಥಾನಗಳು, ಜೈನಪೀಠಗಳು ಇವೆ. 70 ವರ್ಷಗಳ ಮುಂಚಿನ ಯಜಮಾನಿಕೆ ಕಾಲದಲ್ಲಿ ಬಡತನ ಇದ್ದುದರಿಂದ ದೇವಸ್ಥಾನದ ಜೀರ್ಣೋದ್ಧಾರ ನಡೆಯುತ್ತಿರಲಿಲ್ಲ. ಆದರೆ ಇಂದಿನ ಕಾಲಘಟ್ಟದಲ್ಲಿ ಬಡವರಿಗೂ ದಾನ ಮಾಡುವಷ್ಟು ಶಕ್ತಿ ಬಂದಿರುವುದರಿಂದ ದೇವಸ್ಥಾನ ನವೀಕರಣಗೊಳ್ಳುತ್ತಿದೆ. ಪೊಳಲಿ ಮಾತೆಯು ಎಲ್ಲರ ತಾಯಿಯಾಗಿದ್ದು, ಪ್ರಸನ್ನಗೊಂಡಿರುವುದನ್ನು ಇಲ್ಲಿ ಕಂಡುಕೊಳ್ಳಲು ಸಾಧ್ಯ ಎಂದರು.

ಯೋಧರ ಮೇಲೆ ಶಂಕೆ ಖೇದಕರ
ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಮಾತನಾಡಿ ವೃತ್ತಿಧರ್ಮ, ರಾಜಧರ್ಮಗಳನ್ನು ಪಾಲನೆ ಮಾಡಿ ದರೆ ದೇಶ ಸುಭಿಕ್ಷ ಸ್ಥಿತಿಯಲ್ಲಿರುತ್ತದೆ. ಇತಿಹಾಸಗಳು ರಾಜಧರ್ಮವನ್ನು ಬೋಧನೆ ಮಾಡಿವೆ. ರಾಜಕಾರಣಿ ಗಳು ರಾಜಧರ್ಮ ಪಾಲಿಸಿದರೆ ಧರ್ಮಾಧಾರಿತ ವ್ಯವಸ್ಥೆ ಜಾರಿಗೊಂಡು ಭ್ರಷ್ಟಾಚಾರ ಕಡಿಮೆಯಾಗುತ್ತದೆ. ದೇಶದ ಜನರು ಧರ್ಮಕ್ಕೆ ಬದ್ಧರಾಗಿರ ಬೇಕು. ಆದರೆ ಇಂದು ದೇಶಧರ್ಮದ ಬಗ್ಗೆಯೇ ಚರ್ಚೆ ನಡೆಯುತ್ತಿದ್ದು, ನಮ್ಮನ್ನು ರಕ್ಷಿಸುತ್ತಿರುವ ಯೋಧರನ್ನೇ ಸಂಶಯದಿಂದ ನೋಡುತ್ತಿರುವ ಪ್ರವೃತ್ತಿ ಉಂಟಾಗುತ್ತಿರುವುದು ನಿಜಕ್ಕೂ ಖೇದಕರ ಎಂದು ಹೇಳಿದರು.

ಎಡನೀರು ಮಠದ ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡಿ, ಒಂದು ತಿಂಗಳ ಉತ್ಸವ ಇರುವ ಪೊಳಲಿಯು ಅತ್ಯಂತ ಪುಣ್ಯ ಸ್ಥಳವಾಗಿದ್ದು, ಎಲ್ಲರೂ ಕೃತಜ್ಞತೆಯಿಂದ ದೇವಿಯ ಸೇವೆ ಸಲ್ಲಿಸುತ್ತಿದ್ದಾರೆ. ಪ್ರತಿಯೊಬ್ಬರಿಗೂ ಆನಂದ ಸಿಗಬೇಕಾದರೆ ದೇವರ ಸಾನಿಧ್ಯದಲ್ಲಿರಬೇಕು ಎಂದು ನುಡಿದರು.

ಸಚಿವ ಯು.ಟಿ. ಖಾದರ್‌ ಮಾತಾಡಿ, ದೇವಸ್ಥಾನದಂಥ ಶ್ರದ್ಧಾಕೇಂದ್ರಗಳು ಸರ್ವಧರ್ಮದ ಜನರಿಗೂ ಸಮಾನತೆಯ ಭಾವನೆಯನ್ನು ಕಲಿಸಲಿ ಎಂದು ಹೇಳಿದರು. ಬ್ರಹ್ಮಶ್ರೀ ಕುಂಟಾರು ರವೀಶ್‌ ತಂತ್ರಿಯವರು ಧಾರ್ಮಿಕ ಉಪನ್ಯಾಸ ನೀಡಿದರು. ಡಾಣ ಎಂ. ದೇಜಪ್ಪ ದಲ್ಲೋಡಿ ವಿರಚಿತ “ಶ್ರೀ ರಾಜರಾಜೇಶ್ವರಿ ದರ್ಶನಂ’ ಎನ್ನುವ ಕೃತಿಯನ್ನು ಬಿಡುಗಡೆಗೊಳಿಸಲಾಯಿತು.

ಐವನ್‌ ಡಿ’ಸೋಜಾ, ಶಾಸಕ ಸುಕುಮಾರ್‌ ಶೆಟ್ಟಿ, ರಮಾನಾಥ ರೈ, ರಾಜೇಶ್‌ ನಾಯ್ಕ, ಯು.ಟಿ. ಆಳ್ವ, ಮಂಜಯ್ಯ ಶೆಟ್ಟಿ, ಚೇರ ಸೂರ್ಯನಾರಾಯಣ ರಾವ್‌, ನಾಗರಾಜ್‌ ಶೆಟ್ಟಿ, ಏರ್ಯ ಲಕ್ಷ್ಮೀ ನಾರಾಯಣ ಆಳ್ವ, ಕೋಡಿಮಜಲು ಅನಂತಪದ್ಮನಾಭ, ಪ್ರವೀಣ್‌ ಮುಂತಾದವರು ಉಪಸ್ಥಿತರಿದ್ದರು. 

ಶಿಲೆಶಿಲ್ಪಿ ಜಯಂತ್‌ ಪಿ. ಕಾರ್ಕಳ, ಸಂದೀಪ್‌ ಪೊಳಲಿ, ಗ್ರಾನೈಟ್‌ ಗುತ್ತಿಗೆದಾರ ಮನೀಷ್‌, ಸುಮೇಶ್‌ ಅವರನ್ನು ಸಮ್ಮಾನಿಸಲಾಯಿತು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.