ಹೋರಾಟದ ಸ್ವರೂಪ ಪಡೆಯುತ್ತಿದೆ ಜಿಲ್ಲಾ ರಂಗಮಂದಿರ ಯೋಜನೆ


Team Udayavani, Oct 19, 2019, 5:00 AM IST

l-10

ರಂಗಮಂದಿರ ನಿರ್ಮಾಣಕ್ಕೆ ಸಿದ್ಧಪಡಿಸಿರುವ ನೀಲನಕ್ಷೆ.

ಮಹಾನಗರ: ಮೂರು ದಶಕಗಳಿಂದ ನನೆಗುದಿಯಲ್ಲಿರುವ ಜಿಲ್ಲಾ ರಂಗಮಂದಿರ ನಿರ್ಮಾಣ ಯೋಜನೆ ಈಗ ಹೋರಾಟದ ಸ್ವರೂಪ ಪಡೆದುಕೊಳ್ಳುತ್ತಿದೆ. ಕೂಡಲೇ ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿ ಡಿಸೆಂಬರ್‌ ಎರಡನೇ ವಾರದಲ್ಲಿ ಬೃಹತ್‌ ಮೆರವಣಿಗೆ ಮತ್ತು ಸಭೆ ನಡೆಸಲು ರಂಗಕರ್ಮಿಗಳು, ರಂಗಾಸಕ್ತರು ಸಿದ್ಧರಾಗುತ್ತಿದ್ದಾರೆ.

ಹೋರಾಟದ ರೂಪರೇಖೆಗಳ ಬಗ್ಗೆ ಚರ್ಚಿಸಲು ನ. 2ರಂದು ರಂಗಕರ್ಮಿಗಳು, ರಂಗಾಸಕ್ತರು, ಸಾಹಿತಿಗಳು, ಸಾರ್ವಜನಿಕರ ಸಭೆಯನ್ನು ನಗರದ ಕೆನರಾ ಪ.ಪೂ. ಕಾಲೇಜಿನಲ್ಲಿ ಕರೆಯಲಾಗಿದೆ.

ಪ್ರಸ್ತುತ ನಗರದಲ್ಲಿ ಬಹುತೇಕ ರಂಗ ಚಟುವಟಿಕೆಗಳಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪುರಭವನವನ್ನೇ ಆಶ್ರಯಿಸ ಬೇಕಾಗಿದೆ. ಪುರಭವನವು ಸಾಂಸ್ಕೃತಿಕ ಚಟುವಟಿಕೆಗಳಿಗಷ್ಟೇ ಮೀಸಲಾಗಿಲ್ಲ. ಸಭೆ, ಸಮಾರಂಭ, ರಾಜಕೀಯ ಸಮಾವೇಶಗಳಿಗೂ ಪ್ರಧಾನ ಕೇಂದ್ರವಾಗಿದೆ.

ನಗರದಲ್ಲಿ ರಂಗಮಂದಿರ ನಿರ್ಮಾಣ ಪ್ರಸ್ತಾವನೆಗೆ 30 ವರ್ಷಗಳ ಇತಿಹಾಸವಿದೆ. ಯೋಜನೆ ಸಿದ್ಧವಾದ ಬಳಿಕ ಹಲವು ಸರಕಾರಗಳು ಬಂದು ಹೋಗಿವೆ. ಹಲವು ಮಂದಿ ಉಸ್ತುವಾರಿ ಸಚಿವರಾಗಿದ್ದಾರೆ. 5ಕ್ಕೂ ಹೆಚ್ಚು ಬಾರಿ ಶಿಲಾನ್ಯಾಸಗಳಾಗಿವೆ. ಸ್ವತಃ ಮುಖ್ಯಮಂತ್ರಿಗಳೇ ಶಿಲಾನ್ಯಾಸ ಮಾಡಿದ್ದಾರೆ. ಹಲವು ಕಡೆ ನಿವೇಶನ ಗುರುತಿಸಿದ್ದರೂ ಸ್ಪಷ್ಟ ರೂಪರೇಖೆ ದೊರ ಕಿದ್ದು 2001ರಲ್ಲಿ. ನೀಲನಕಾಶೆ ತಯಾರಿಸಿ ಕದ್ರಿ ಗುಡ್ಡದಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ತೀರ್ಮಾನಿಸಲಾಯಿತು. ತೋಟಗಾರಿಕೆ ಇಲಾಖೆಯ ಆಕ್ಷೇಪದ ಕಾರಣ ಕೈಬಿಡಲಾಯಿತು.

ಏರುತ್ತಿದೆ ಯೋಜನ ವೆಚ್ಚ
ವಿಳಂಬ ನೀತಿಯಿಂದಾಗಿ ಆರಂಭದಲ್ಲಿ 4 ಕೋಟಿ ರೂ. ಇದ್ದ ಯೋಜನೆ 24 ಕೋಟಿ ರೂ.ಗೇರಿತು. ಅಂತಿಮವಾಗಿ ಬೊಂದೇಲ್‌ನ ಮಹಿಳಾ ಪಾಲಿಟೆಕ್ನಿಕ್‌ ಸಮೀಪ ಲಭ್ಯವಿರುವ 7 ಎಕ್ರೆ ಸರಕಾರಿ ಭೂಮಿಯ 3.35 ಎಕ್ರೆಯನ್ನು ಇದಕ್ಕೆ ಮೀಸಲಿರಿಸಲಾಗಿದೆ. 4 ವರ್ಷಗಳಾಗುತ್ತಾ ಬಂದರೂ ಅನುದಾನದ ಹೊಂದಾಣಿಕೆ ಸಮಸ್ಯೆ ಅಡ್ಡಿಯಾಗಿದೆ. 24 ಕೋ.ರೂ.ನಲ್ಲಿ ಕೇಂದ್ರ ಸರಕಾರದ ಸಂಸ್ಕೃತಿ ಇಲಾಖೆಯ ಠಾಗೋರ್‌ ಕಲ್ಚರಲ್‌ ಕಾಂಪ್ಲೆಕ್ಸ್‌ ಸ್ಕೀಂನಡಿ ಶೇ. 60ರಷ್ಟು ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಉಳಿದ 9.6 ಕೋ.ರೂ. ರಾಜ್ಯ ಸರಕಾರದ ಪಾಲು ಎಂದು ಅಂದಾಜಿಸಲಾಗಿತ್ತು. ಆದರೆ ಕೇಂದ್ರದ ಅನುದಾನ ದೊರೆಯದಿದ್ದಾಗ ಯೋಜ ನೆಯನ್ನು ಪರಿಷ್ಕರಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ನಿರ್ಮಿಸಲು ಉದ್ದೇಶಿಸಲಾಯಿತು.

ಹೋರಾಟ ಅನಿವಾರ್ಯ
ಜಿಲ್ಲಾ ರಂಗಮಂದಿರ ನಿರ್ಮಾಣದ ಯೋಜನೆ ಸಿದ್ಧಗೊಂಡು ಹಲವು ವರ್ಷಗಳಾದರೂ ಕಾರ್ಯರೂಪಕ್ಕೆ ಬಂದಿಲ್ಲ. ನಿರಂತರ ಮನವಿ, ಸಲ್ಲಿಸಿದ್ದರೂ ಸ್ಪಂದನೆ ದೊರಕಿಲ್ಲ; ಹೋರಾಟ ಅನಿವಾರ್ಯವಾಗಿದೆ. ಹೋರಾಟದ ರೂಪರೇಖೆಗಳ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ.
– ಶಶಿರಾಜ್‌ ಕಾವೂರು, ರಂಗಮಂದಿರ ಹೋರಾಟ ಸಮಿತಿ ಅಧ್ಯಕ್ಷ

ಯಡಿಯೂರಪ್ಪ ಅವರಿಂದ ಶಿಲಾನ್ಯಾಸ
ಜಿಲ್ಲಾ ರಂಗಮಂದಿರಕ್ಕೆ 2010 ಆ. 23ರಂದು ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಶಿಲಾನ್ಯಾಸ ನೆರವೇರಿಸಿದ್ದರು. ಈಗ ಮತ್ತೆ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಅವರ ಅವಧಿಯಲ್ಲೇ ನನಸು ಆಗುವ ಕಾಲ ಬರಲಿ ಎಂಬುದು ರಂಗಾಸಕ್ತರ ಹಾರೈಕೆ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.